ದೇಲಟ್ಟು: ಮಹಾ ಶಿವರಾತ್ರಿ ಮಹೋತ್ಸವ
Team Udayavani, Feb 25, 2017, 12:56 PM IST
ತೆಕ್ಕಟ್ಟೆ (ದೇಲಟ್ಟು): ಮಹಾ ಶಿವರಾತ್ರಿ ಮಹೋತ್ಸವದಂದು ಕುಂದಾಪುರ ತಾಲೂಕಿನ ಪ್ರಸಿದ್ಧ ಉದ್ಭವಲಿಂಗ ದೇಲಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ. 24ರಂದು ಮುಂಜಾನೆಯಿಂದಲೇ ತೊಡಗಿದಂತೆ ಸಹಸ್ರಾರು ಭಕ್ತರು ಶ್ರೀ ಸನ್ನಿಧಿಯಲ್ಲಿ ನೆರೆದಿದ್ದು, ಶ್ರೀ ದೇವರಿಗೆ ವಿಶೇಷ ಪೂಜೆ ಪುನಸ್ಕಾರಗಳೊಂದಿಗೆ ಅತ್ಯಂತ ಸಂಭ್ರಮದ ಮಹಾ ಶಿವರಾತ್ರಿ ಮಹೋತ್ಸವ ಜರಗಿತು.
ಇಲ್ಲಿನ ವಿಶೇಷತೆ
ಉದ್ಭವಲಿಂಗ ದೇಲಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವೈವಾಹಿಕ ಸಂಬಂಧ ಕೂಡುವಿಕೆಗಾಗಿ ಶ್ರೀ ದೇವರಲ್ಲಿ ಪ್ರಾರ್ಥಿಸಿ ಪ್ರಸಾದವನ್ನು ನೋಡುವ ಸಂಪ್ರದಾಯವಿದ್ದು, ಅನಂತರ ಮದುವೆಯಾದ ನವ ಜೋಡಿಗಳು ಬಂದು ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ತಮ್ಮ ಇಷ್ಟಾರ್ಥವನ್ನು ನೆರವೇರಿಸಿಕೊಳ್ಳುತ್ತಾರೆ.
ಹೂವಿನ ಅಲಂಕಾರ
ಮಹಾ ಶಿವರಾತ್ರಿ ಮಹೋತ್ಸವ ಅಂಗವಾಗಿ ದೇಲಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿ, ನಾಗಬನ, ಬಸವ ಮಂಟಪ ಸೇರಿದಂತೆ ಸಂಪೂರ್ಣ ಹೂವಿನ ಅಲಂಕಾರದಿಂದ ಕಂಗೊಳಿಸುತ್ತಿದೆ.
ಹರಿದು ಬಂದ ಭಕ್ತ ಸಾಗರ
ಜಿಲ್ಲೆ ಯ ಮೂಲೆ ಮೂಲೆಯಿಂದಲೂ ಮುಂಜಾನೆಯಿಂದಲೇ ಸಹಸ್ರಾರು ಭಕ್ತರು ಶ್ರೀ ಸನ್ನಿಧಿಯಲ್ಲಿ ನೆರೆದಿದ್ದು ದೇವರಿಗೆ ವಿಶೇಷವಾಗಿ ಸಿಂಗಾರ ಹೂವಿನ ಸಮರ್ಪಣೆ ಹಾಗೂ ವಿಶೇಷವಾಗಿ ತುಲಾಭಾರ ಸೇವೆ ನಡೆದಿದ್ದು, ಸುಮಾರು 7 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿ ಶ್ರೀ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ