ಕೊರೊನಾ ವೈರಸ್‌ ಭೀತಿ: ಹಣ್ಣುಗಳಿಗೆ ಗಿರಾಕಿ ಇಳಿಕೆ- ಸಂತೆ ವ್ಯಾಪಾರಸ್ಥರಿಗೆ ಚಿಂತೆ


Team Udayavani, Mar 17, 2020, 5:33 AM IST

ಕೊರೊನಾ ವೈರಸ್‌ ಭೀತಿ: ಹಣ್ಣುಗಳಿಗೆ ಗಿರಾಕಿ ಇಳಿಕೆ- ಸಂತೆ ವ್ಯಾಪಾರಸ್ಥರಿಗೆ ಚಿಂತೆ

ಉಡುಪಿ: ನಗರದ ತರಕಾರಿ ಮತ್ತು ಹಣ್ಣು ಹಂಪಲು ಮಾರುಕಟ್ಟೆಗಳಲ್ಲಿ ಹಣ್ಣು ಹಂಪಲು ಕೊಂಡುಕೊಳ್ಳುವವರ ಸಂಖ್ಯೆ ಕಡಿಮೆಯಾಗಿದೆ. ಇದು ವ್ಯಾಪಾರಸ್ಥರಿಗೆ ಚಿಂತೆ ಉಂಟು ಮಾಡಿದೆ.

ಕೊರೊನಾ ವೈರಸ್‌ ಭೀತಿಗೆ ಮಾಂಸಪ್ರಿಯರು ಮಾಂಸ ಸೇವನೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಪರಿಣಾಮ ತರಕಾರಿಗೆ ಬೇಡಿಕೆಯಿದ್ದರೂ ಜನ ನಗರಗಳತ್ತ ಬಾರದೆ ಇರುವುದರಿಂದ ವ್ಯಾಪಾರ ವಹಿವಾಟು ಕಡಿಮೆಯಾಗಿದೆ ಅನ್ನುವ ಆತಂಕವನ್ನು ನಗರದ ತರಕಾರಿ ಮತ್ತು ಹಣ್ಣು ಹಂಪಲು ವ್ಯಾಪಾರಿಗಳು ವ್ಯಕ್ತಪಡಿಸುತ್ತಿದ್ದಾರೆ.

ಸರಕಾರ ಮಾಲ್‌ಗ‌ಳನ್ನು ಬಂದ್‌ ಮಾಡಿದ್ದ ರಿಂದ ಸ್ಥಳೀಯವಾಗಿ ಮಾರುಕಟ್ಟೆಗಳಲ್ಲಿ ವ್ಯಾಪಾರ ವಹಿವಾಟು ಹೆಚ್ಚಾಗಬೇಕಿತ್ತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ವ್ಯಾಪಾರ ವಹಿವಾಟು ನಡೆಯುತ್ತಿಲ್ಲ. ಜನರು ಕೊರೊನಾ ವೈರಸ್‌ ಭೀತಿಯಿಂದ ಪೇಟೆ ಕಡೆ ಬಾರದೆ ಮನೆಯಲ್ಲೆ ಉಳಿದುಕೊಳ್ಳುತ್ತಿರುವುದೇ ಇದಕ್ಕೆ ಕಾರಣ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ.

ತರಕಾರಿ ಮುಟ್ಟಲೂ ಹೆದರಿಕೆ
ಮಾರುಕಟ್ಟೆಗೆ ತರಕಾರಿ ಖರೀದಿಗೆಂದು ಬರುವ ಗ್ರಾಹಕರು ಖರೀದಿ ವೇಳೆಯೂ ಸಾಕಷ್ಟು ಸಂದೇಹ ಗಳನ್ನು ವ್ಯಕ್ತಪಡಿಸುತ್ತಾರೆ. ಹಣ್ಣು ಹಂಪಲು ಮುಟ್ಟುವುದಕ್ಕೂ ಭಯ ಪಡುತ್ತಿದ್ದಾರೆ. ಅಷ್ಟರ ಮಟ್ಟಿಗೆ ಜನ ಕೊರೊನಾ ಸೋಂಕಿಗೆ ಹೆದರಿದ್ದಾರೆ. ತರಕಾರಿ ಜತೆ ಹಣ್ಣು ಹಂಪಲು ಪಡೆದು ತೆರಳುತ್ತಿದ್ದವರೂ ಈಗ ತರಕಾರಿ ಮಾತ್ರ ಪಡೆದು ಹಣ್ಣ್ಣುಹಂಪಲು ಸ್ವಲ್ಪ ಮಾತ್ರ ಪಡೆದು ಹೋಗುತ್ತಿದ್ದಾರೆ. ಹಣ್ಣು ಹಂಪಲು ಖರೀದಿ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ವ್ಯಾಪಾರಿಗಳು ವ್ಯಾಪಾರ ಕಡಿಮೆಯಾಗುವುದಕ್ಕೆ ಕಾರಣ ನೀಡುತ್ತಿದ್ದಾರೆ.

ಕಳೆದೊಂದು ವಾರದಿಂದ ವ್ಯಾಪಾರ ಕಡಿಮೆ ಯಾಗಿತ್ತು. ಶನಿವಾರ ಮತ್ತು ರವಿವಾರ ಸ್ವಲ್ಪ ಜನ ಮಾರುಕಟ್ಟೆಗೆ ಬಂದಿದ್ದರು.

ಸೋಮವಾರ ಬೆಳಗ್ಗೆಯಿಂದಲೆ ಮಾರುಕಟ್ಟೆಗೆ ಖರೀದಿಗೆ ಅತಿ ವಿರಳ ಮಂದಿ ಬಂದಿದ್ದು ವ್ಯಾಪಾರವೇ ಆಗಿಲ್ಲ. ನಾವು ನಷ್ಟಕ್ಕೆ ಒಳಗಾಗಿದ್ದೇವೆ ಎಂದು ವ್ಯಾಪಾರಿಗಳು ಬೇಸರ ವ್ಯಕ್ತಪಡಿದರು.

ನಗರಕ್ಕೆ ಸ್ಥಳಿಯವಾಗಿ ತರಕಾರಿ, ಹಣ್ಣು ಹಂಪಲು ಪೂರೈಕೆಯಾಗುವುದು ಕಡಿಮೆ. ಬಯಲು ಸೀಮೆ ಪ್ರದೇಶಗಳಿಂದ ಸರಬರಾಜು ಆಗುತ್ತಿದೆ. ತರಕಾರಿ ಪೂರೈಕೆಯಲ್ಲಿ ಅಥವಾ ದರದಲ್ಲಿ ಹೆಚ್ಚಿನ ವ್ಯತ್ಯಾಸ ಆಗಿಲ್ಲ. ಸರಕಾರಿ ರಜೆ ಹಾಗೂ ನಗರದ ಪ್ರಮುಖ ಸಂಸ್ಥೆಗಳಿಗೆ ರಜೆ ಇರುವ ಕಾರಣ ಮಕ್ಕಳು, ಕೂಲಿ ಕಾರ್ಮಿಕರು ಮನೆಯಲ್ಲೆ ಉಳಿದುಕೊಂಡಿದ್ದಾರೆ. ಪರವೂರಿನ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ತಮ್ಮ ಊರುಗಳಿಗೆ ಮರಳಿದ್ದಾರೆ. ಈ ಎಲ್ಲ ಕಾರಣಗಳಿಂಗ ಪೇಟೆಗಳಲ್ಲಿ ಜನಸಂಚಾರವಿಲ್ಲ. ಇದೆಲ್ಲ ವ್ಯಾಪಾರ ವಹಿವಾಟಿನ ಮೇಲೆ ಪರಿಣಾಮ ಬೀರಿದೆ ಅನ್ನುವ ಅಭಿಪ್ರಾಯವನ್ನು ವ್ಯಾಪಾರಿಗಳು ವ್ಯಕ್ತಪಡಿಸಿದ್ದಾರೆ.

ವ್ಯಾಪಾರದ ಮೇಲೆ ಪರಿಣಾಮ
ಕೊರೊನಾ ವೈರಸ್‌ ಹರಡುವ ಭೀತಿ ತರಕಾರಿ, ಹಣ್ಣು ಹಂಪಲು ವ್ಯಾಪಾರದ ಮೇಲೆ ಪರಿಣಾಮ ಬೀರಿದೆ. ತರಕಾರಿಗೆ ಬೇಡಿಕೆಯಿದೆ. ಆದರೆ ಹಣ್ಣು ಹಂಪಲುಗಳಿಗೆ ಬೇಡಿಕೆ ಕಮ್ಮಿಯಾಗಿದೆ. ದರದಲ್ಲಿ ವ್ಯತ್ಯಾಸವಿಲ್ಲದೆ ಇದ್ದರೂ ಜನರು ನಗರದ ಕಡೆ ಮುಖ ಮಾಡದೆ ಇರುವುದರಿಂದ ಗ್ರಾಹಕರ ಕೊರತೆ ಉಂಟಾಗಿದೆ.
-ಸಿದ್ಧಿಕ್‌, ವ್ಯಾಪಾರಿ.ತರಕಾರಿ ಮಾರುಕಟ್ಟೆ. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಬಳಿ

ವಾರದೊಳಗೆ ಮಾರುಕಟ್ಟೆ ಸುಧಾರಿಸುವ ನಿರೀಕ್ಷೆ
ವ್ಯಾಪಾರ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದೆನಿಸುವುದಿಲ್ಲ. ಎಂದಿನ ದಿನಗಳಿಗಿಂತ ಸ್ವಲ್ಪ ಕಡಿಮೆ ಆಗಿದೆ. ಬೆಲೆ ಯಥಾಸ್ಥಿತಿಯಲ್ಲಿದೆ. ವಾರದೊಳಗೆ ಮಾರುಕಟ್ಟೆ ಸುಧಾರಿಸಿಕೊಳ್ಳುವ ನಿರೀಕ್ಷೆ ಇರಿಸಿಕೊಂಡಿದ್ದೇವೆ.
-ಶೇಖರ, ಬೀದಿಬದಿ ವ್ಯಾಪಾರಿ ಉಡುಪಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.