ಹಿಂಗಾರು ಬಿತ್ತನೆ ಬೀಜಕ್ಕೆ ಬೇಡಿಕೆ ಆರಂಭ

ಅವಧಿಗೆ ಮುನ್ನ ಹೆಚ್ಚಿದ ಬೇಡಿಕೆ ,ನೀರಿನ ಸಮಸ್ಯೆಯ ಆತಂಕ , ಭತ್ತದ ಕೃಷಿ ಹೆಚ್ಚಾಗುವ ನಿರೀಕ್ಷೆ

Team Udayavani, Nov 4, 2020, 12:18 PM IST

ಹಿಂಗಾರು ಬಿತ್ತನೆ ಬೀಜಕ್ಕೆ ಬೇಡಿಕೆ ಆರಂಭ

ಕುಂದಾಪುರ, ನ. 3:  ಮುಂಗಾರು ಬೆಳೆಯ ಕಟಾವು ಮುಗಿಯುವ ಮುನ್ನವೇ ಕರಾವಳಿಯಲ್ಲಿ ಹಿಂಗಾರು ಬೆಳೆಯ ಬಿತ್ತನೆ ಬೀಜಕ್ಕೆ ನಿರೀಕ್ಷೆಗೂ ಮೀರಿ ಬೇಡಿಕೆ ಹೆಚ್ಚಾಗಿದೆ. ಸೋಮವಾರದಿಂದ ಕೃಷಿ ಇಲಾಖೆ ಹಿಂಗಾರು ಬೆಳೆಗೆ ಸಬ್ಸಿಡಿ ದರದಲ್ಲಿ ಭತ್ತದ ಬಿತ್ತನೆ ಬೀಜದ ವಿತರಣೆ ಆರಂಭಿಸಿದೆ.

ಮುಂಗಾರು ಬೆಳೆಯ ಕಟಾವು ಈಗಷ್ಟೇ ಕೆಲವೆಡೆ ನಡೆಯುತ್ತಿದೆ. ಯಂತ್ರದ ಅಲಭ್ಯತೆ, ಕಾರ್ಮಿಕರ ಅಲಭ್ಯತೆ, ಬಿತ್ತನೆ ವಿಳಂಬ ಹೀಗೆ ನಾನಾ ಕಾರಣ ಗಳಿಂದ ಇನ್ನೂ ಕೆಲವು ಕಡೆ ಕಟಾವು ನಡೆದೇ ಇಲ್ಲ. ಕೆಲವೆಡೆಯಷ್ಟೇ ಪೂರ್ಣಗೊಂಡಿದೆ. ಮುಂಗಾರು ಹಂಗಾಮಕ್ಕೆ ಉಡುಪಿ ಜಿಲ್ಲೆಯಲ್ಲಿ 2,590 ಕ್ವಿಂ. ಭತ್ತದ ಬಿತ್ತನೆ ಬೀಜವನ್ನು ಕೃಷಿ ಇಲಾಖೆ ಮೂಲಕ ವಿತರಿಸಲಾಗಿದೆ. ಈ ಬಾರಿ ಉಡುಪಿ ಜಿಲ್ಲೆಯಲ್ಲಿ 35,754 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ಕಳೆದ ವರ್ಷ ಉಡುಪಿ ಜಿಲ್ಲೆಯಲ್ಲಿ ಉಡುಪಿ ತಾಲೂಕಿನಲ್ಲಿ 15,500 ಹೆ., ಕುಂದಾಪುರದಲ್ಲಿ 14,000 ಹೆ. ಹಾಗೂ ಕಾರ್ಕಳ ತಾಲೂಕಿನಲ್ಲಿ 6,500 ಹೆ. ಪ್ರದೇಶದಲ್ಲಿ ಭತ್ತ ಬೆಳೆಯಲಾಗಿತ್ತು.

ಅವಧಿಗೆ ಮುನ್ನ :

ಕಳೆದ ವರ್ಷ ಜಿಲ್ಲೆಗೆ ತಡವಾಗಿ ಮುಂಗಾರು ಆಗಮಿಸಿತ್ತು. ಕಳೆದ ವರ್ಷ ಜೂನ್‌ನಲ್ಲಿ  112.7 ಸೆಂ.ಮೀ. ಮಳೆಯಾಗುವ ಬದಲು 63.4 ಸೆ.ಮೀ. ಮಳೆಯಾಗಿತ್ತು. ಈ ವರ್ಷ ಜೂನ್‌ನಿಂದ ಜುಲೈವರೆಗೆ 140 ಸೆಂ.ಮೀ. ಮಳೆ ಬದಲು 123.5 ಸೆಂ.ಮೀ. ಮಳೆಯಾಗಿದೆ. ಆದ್ದರಿಂದ ಭತ್ತದ ಕೃಷಿಗೆ ಅನುಕೂಲವಾದ ವಾತಾವರಣ ಇತ್ತು.

ಯೂರಿಯಾ ರಸಗೊಬ್ಬರದ ಸರಬರಾಜಿನಲ್ಲಿ ಇದ್ದ ಗೊಂದಲ ಕೂಡ ಅನಂತರದ ದಿನಗಳಲ್ಲಿ  ಸರಿಯಾಯಿತು. ಸಾಮಾನ್ಯವಾಗಿ ನವೆಂಬರ್‌ 15ರ ಅನಂತರ ಹಿಂಗಾರು ಬೆಳೆಗೆ ಸಿದ್ಧತೆ ನಡೆಯುತ್ತದೆ. ಈ ಬಾರಿ ದಿಢೀರ್‌ ಆಗಮಿಸಿದ ಮಳೆ ಕೃಷಿಕರಿಗೆ, ಬೆಳೆಗೆ ಒಂದಷ್ಟು ತೊಂದರೆ ಮಾಡಿದೆ. ಕರಾವಳಿಯಲ್ಲಿ ಹೆಚ್ಚುವರಿ ನೀರಾವರಿ ಸೌಲಭ್ಯ ಸಮರ್ಪಕ ವಾಗಿ ಇದ್ದವರಷ್ಟೇ 2ನೇ ಬೆಳೆ ಮಾಡುತ್ತಾರೆ. ಸಾಂಪ್ರದಾಯಿಕ ನೀರಿನ ಆಶ್ರಯ ಇರುವವರು ಒಂದೇ ಬೆಳೆ ಮಾಡುತ್ತಾರೆ. ಆದ್ದರಿಂದ ಹಿಂಗಾರು ಬೆಳೆ ಬಿತ್ತನೆ ಬೀಜಕ್ಕೆ ಬೇಡಿಕೆ ಕಡಿಮೆ.

ಆದರೆ ಈ ಬಾರಿ ಲಾಕ್‌ಡೌನ್‌ ಕಾರಣದಿಂದ ಅನೇಕರು ಕೃಷಿ, ಬೇಸಾಯ ಆರಂಭಿಸಿದ್ದಾರೆ. ತಾತ್ಕಾಲಿಕವಾಗಿ ಕೃಷಿ ಉದ್ಯೋಗ ಕೈಗೊಂಡ ಅನೇಕರು ಊರಿನಲ್ಲೇ ಇದ್ದು ಕೃಷಿ ಚಟುವಟಿಕೆಗೆ ಅನುಕೂಲ ಆಗಿದ್ದು  ಹಡಿಲು ಬಿದ್ದ ಭೂಮಿಯಲ್ಲಿ ಹಸುರು ಬೆಳೆ ಬೆಳೆಯಲು ನೆರವಾಗಿದೆ.

ಆದ್ದರಿಂದ ಮುಂಗಾರಿನ ಕೃಷಿ ಹಂಗಾಮದಲ್ಲಿ ಉತ್ತಮ ಸಾಧನೆ ಮಾಡಲಾಗಿದೆ. ಜತೆಗೆ ಈ ಬಾರಿ ಹವಾಮಾನ ವೈಪರೀತ್ಯ, ಚಂಡಮಾರುತ ಮೊದಲಾದ ಕಾರಣಗಳಿಂದ ಹಿಂಗಾರು  ವಿಳಂಬವಾಗಿ ಆರಂಭವಾಗುವ ಸಾಧ್ಯತೆ  ಇದೆ ಎಂದು ಈಗಾಗಲೇ ಹವಾಮಾನ ಇಲಾಖೆ ಸೂಚಿಸಿದೆ.

ಕಾರ್ಕಳ: ರೈತ ಸಂಪರ್ಕ ಕೇಂದ್ರಗಳಲ್ಲಿ  ಬೀಜ ವಿತರಣೆ : ಕಾರ್ಕಳ ತಾಲೂಕಿನಲ್ಲಿ ಹಿಂಗಾರು ಬೀಜಗಳ  ವಿತರಣೆ ಈಗಾಗಲೆ ಆರಂಭವಾಗಿದೆ. ಕಾರ್ಕಳ ರೈತ ಸಂಪರ್ಕ ಕೇಂದ್ರಕ್ಕೆ 10 ಕ್ವಿಂಟಾಲ್‌ ಮತ್ತು ಅಜೆಕಾರು ರೈತ ಸಂಪರ್ಕ ಕೇಂದ್ರಕ್ಕೆ 15 ಕ್ವಿಂಟಾಲ್‌ ಜ್ಯೋತಿ ತಳಿಯ ಬೀಜ ಬಂದಿದ್ದು ದಾಸ್ತಾನು ಇರಿಸಲಾಗಿದೆ. ಹಿಂಗಾರು ಬಿತ್ತನೆ ಬೀಜ ಬಂದ ದಿನಂದಿಂದಲೇ ರೈತರಿಗೆ ವಿತರಿಸಲಾಗುತ್ತಿದೆ ಎಂದು ತಾಲೂಕು ಕೃಷಿ ಇಲಾಖಾಧಿಕಾರಿಗಳು ತಿಳಿಸಿದ್ದಾರೆ.

ಬೇಡಿಕೆ : ಕೃಷಿ ಇಲಾಖೆಯಲ್ಲಿ ಸೋಮವಾರದಿಂದ ಬಿತ್ತನೆ ಬೀಜ ವಿತರಣೆ ಆರಂಭವಾಗಿದೆ. ಆರಂಭದ ಎರಡು ದಿನಗಳಲ್ಲೇ ಬರೋಬ್ಬರಿಬೇಡಿಕೆ ಬಂದಿದೆ. ಹೆಚ್ಚುವರಿ ಬೀಜಕ್ಕೆ ಬೇಡಿಕೆ ಸಲ್ಲಿಸಬೇಕಾದ ಪರಿಸ್ಥಿತಿ ಬಂದರೂ ಬರಬಹುದು.

ಏಕೆಂದರೆ ಮೊದಲ ಎರಡು ದಿನಗಳಲ್ಲಿ ಈ ಪ್ರಮಾಣದ ಬೇಡಿಕೆ ಈ ಹಿಂದೆ ಬಂದುದಿಲ್ಲ ಎನ್ನುತ್ತಾರೆ ಇಲಾಖೆಯವರು. ಲಾಕ್‌ಡೌನ್‌ ಇನ್ನೂ ಪೂರ್ಣ ಪ್ರಮಾಣದಲ್ಲಿ ಮುಂಬಯಿಯಂತಹ ಕಡೆ ತೆರವಾಗದ ಕಾರಣ ಉದ್ಯೋಗಾರ್ಥಿಗಳು ಇಲ್ಲೇ ಬಾಕಿಯಾಗಿದ್ದಾರೆ. ಹಾಗಾಗಿ ಹಿಂಗಾರು ಬೆಳೆಗೂ ಇದು ಪ್ರೇರಣೆಯಾಗಿದೆಯೇ ಎಂಬ ಸಂಶಯ ಇದೆ.

ಆದರೆ ನೀರಾವರಿ ಸೌಕರ್ಯ ಇಲ್ಲದೇ ಹಿಂಗಾರು ಬೆಳೆ ಅಸಾಧ್ಯವಾದ ಕಾರಣ, ನೀರಾವರಿ ಇದ್ದವರು ಉತ್ಸಾಹದಲ್ಲಿ ಹಿಂಗಾರಿಗೆ ಮನ ಮಾಡಿದರೇ ಎಂದು ಗೊತ್ತಾಗಬೇಕಿದೆ. ಕರಾವಳಿ ಜಿಲ್ಲೆಗಳಲ್ಲಿ ಭತ್ತದ ಬಿತ್ತನೆಗೆ ಬೀಜ ತೆಗೆದಿಡುವವರ ಸಂಖ್ಯೆ ಕಡಿಮೆಯಾದ ಕಾರಣ ಇಲಾಖೆ ಮೂಲಕ ವಿತರಣೆಯಾಗುವ ಬೀಜಕ್ಕೆ ಬೇಡಿಕೆ ಬಂದುದು ಎಂಬ ಸಮ ಜಾಯಿಶಿಯೂ ಇದೆ.

ನೀರಿನ ಸಮಸ್ಯೆಯಾಗದು :  ಎರಡು ವರ್ಷಗಳ ಹಿಂದೆ ನೀರಿಲ್ಲದೆ, ಬಿತ್ತನೆ ಮಾಡಿ ಒಂದೂವರೆ ತಿಂಗಳಲ್ಲೆ ಸುಟ್ಟುಹೋಗಿದೆ. ಆದರೆ ಕಳೆದ ವರ್ಷ ನೀರಿನ ಸಮಸ್ಯೆ ಆಗಿರಲಿಲ್ಲ. ಈ ವರ್ಷ ಎರಡನೆ ಬೆಳೆಗೆ  ನೀರಿನ ಸಮಸ್ಯೆ ಬಾರದು ಎನ್ನುವುದು ನನ್ನ ಅನಿಸಿಕೆ. ಆದರೆ ಹುಳಬಾಧೆ ಬರಬಹುದು. ರಾಘವೇಂದ್ರ ಹಾಲಾಡಿ ಕೃಷಿಕ

ವಿತರಿಸಲಾಗುವುದು : ಎಷ್ಟೇ ಬೇಡಿಕೆ ಬಂದರೂ ವಿತರಿಸಲಾಗುವುದು. ಇಲಾಖೆಯಲ್ಲಿ ಬಿತ್ತನೆ ಬೀಜದ ಕೊರತೆಯಿಲ್ಲ, ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹ ಇದೆ. ಈಗಾಗಲೇ ಜ್ಯೋತಿ ಹಾಗೂ ಜಯ ತಳಿಯ ಬೀಜಗಳು 140 ಕ್ವಿಂ.ಗಳಷ್ಟು ಪ್ರಮಾಣದಲ್ಲಿ ಜಿಲ್ಲೆಗೆ ಬಂದಿದ್ದು 5 ಕ್ವಿಂ. ಉದ್ದು ತರಿಸಲಾಗಿದೆ. ಭತ್ತದ ಕೃಷಿಗೆ ಬೇಕಾದ ಎಲ್ಲ ಪ್ರೋತ್ಸಾಹ ನೀಡಲಾಗುವುದು. ಡಾ| ಎಚ್‌. ಕೆಂಪೇಗೌಡ, ಜಂಟಿ ಕೃಷಿ ನಿರ್ದೇಶಕರು ಉಡುಪಿ ಜಿಲ್ಲೆ

 

ವಿಶೇಷ ವರದಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.