ಈಡೇರಿದ ಕೆಎಫ್‌ಡಿಸಿ ತಾತ್ಕಾಲಿಕ ಹೊರಗುತ್ತಿಗೆ ನೌಕರರ ಬೇಡಿಕೆ

ಮಧ್ಯವರ್ತಿಗಳ ಕಿರಿಕಿರಿಗೆ ತಡೆ; ಉದ್ಯೋಗದಲ್ಲಿ ಭದ್ರತೆ

Team Udayavani, Oct 9, 2019, 4:23 AM IST

s-22

ಕೋಟ: ರಾಜ್ಯ ಮೀನುಗಾರಿಕೆ ಅಭಿವೃದ್ಧಿ ನಿಗಮ (ಕೆಎಫ್‌ಡಿಸಿ) ದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರ ವೇತನವನ್ನು ಶೇ. 25ರಷ್ಟು ಹೆಚ್ಚಿಸಿ, ನೇರವಾಗಿ ನಿಗಮದಿಂದಲೇ ಪಾವತಿಸುವ ವ್ಯವಸ್ಥೆ ಅನುಷ್ಠಾನಗೊಳಿಸಲು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ ನೀಡಿದ್ದಾರೆ. ಇದರಿಂದ ವೇತನ ಪರಿಷ್ಕರಣೆ ಮತ್ತು ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು ಎಂಬ ಸಿಬಂದಿಯ ಬಹುಕಾಲದ ಬೇಡಿಕೆ ಈಡೇರಿದೆ.

ಕೆಎಫ್‌ಡಿಸಿಯಲ್ಲಿ ರಾಜ್ಯಾದ್ಯಂತ 146 ಮಂದಿ ಸಿಬಂದಿ ಕಾರ್ಯನಿರ್ವಹಿಸು ತ್ತಿದ್ದಾರೆ. ಇವರ ನೇಮಕವಾಗುತ್ತಿದ್ದದ್ದು ಖಾಸಗಿ ಕಂಪೆನಿಯ ಮೂಲಕ ಗುತ್ತಿಗೆ ಆಧಾರದಲ್ಲಿ. ಇವರಿಗೆ ವೇತನ ಪಾವತಿ ಮತ್ತು ಕೆಲಸದಿಂದ ಕೈಬಿಡುವ ಅಧಿಕಾರವನ್ನು ಮಧ್ಯವರ್ತಿ ಕಂಪೆನಿಯೇ ಹೊಂದಿತ್ತು. ಇದರಿಂದ ಕಾರ್ಮಿಕರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದವು. ಈಗ ನೇರ ವೇತನ ಪಾವತಿ ವ್ಯವಸ್ಥೆ ಜಾರಿಯಾಗಿರುವುದರಿಂದ ವೇತನವು ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ಕಾರ್ಮಿಕರ ಖಾತೆಗೆ ನೇರ ವರ್ಗಾವಣೆಗೊಳ್ಳಲಿದೆ ಮತ್ತು ಉದ್ಯೋಗ ಭದ್ರತೆಯೂ ದೊರೆತಿದೆ.

ಹಲವು ವರ್ಷಗಳ ಬೇಡಿಕೆ
ನೌಕರರು ಈ ಸಮಸ್ಯೆಯನ್ನು ಪರಿಹರಿಸುವಂತೆ ಹತ್ತಾರು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಿದ್ದರು ಮತ್ತು ಹಲವು ಬಾರಿ ಸಚಿವರಿಗೆ ಮನವಿ ಸಲ್ಲಿಸಿದ್ದರು. ಈ ಬಾರಿಯೂ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮನವಿ ನೀಡಿದ್ದಾರೆ. ಪರಿಶೀಲಿಸಿದ ಸಚಿವರು ತತ್‌ಕ್ಷಣ ಶೇ.25ರಷ್ಟು ವೇತನ ಹೆಚ್ಚಳ ಮತ್ತು ನಿಗಮದಿಂದಲೇ ನೇರ ವೇತನ ಪಾವತಿಗೆ ಆದೇಶಿಸಿದ್ದಾರೆ.

ಖುಷಿ ತಂದಿದೆ
ಮಧ್ಯವರ್ತಿಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದ್ದರಿಂದ ನಮಗೆ ಭದ್ರತೆ ಇರಲಿಲ್ಲ ಮತ್ತು ಹಲವಾರು ಸಮಸ್ಯೆಗಳಿದ್ದವು. ಈಗ ನಮ್ಮ ಬೇಡಿಕೆ ಈಡೇರಿರುವುದು ಖುಷಿ ತಂದಿದೆ, ಮೀನುಗಾರಿಕೆ ಸಚಿವರಿಗೆ ತಾತ್ಕಾಲಿಕ ಕಾರ್ಮಿಕ
ರೆಲ್ಲರ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ.
– ಕೆಎಫ್‌ಡಿಸಿ ತಾತ್ಕಾಲಿಕ ನೌಕರ

ಬೇಡಿಕೆ ಈಡೇರಿಸಲಾಗಿದೆ
ಕೆಎಫ್‌ಡಿಸಿ ಗುತ್ತಿಗೆ ನೌಕರರು ತಮ್ಮ ವೇತನ ಮತ್ತು ಉದ್ಯೋಗ ಭದ್ರತೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದ್ದರು. ಬೇಡಿಕೆಗಳು ಸಮಂಜಸವಾಗಿರುವುದರಿಂದ ಮಧ್ಯವರ್ತಿಗಳ ಮೂಲಕ ವೇತನ ಪಾವತಿ ವ್ಯವಸ್ಥೆ ರದ್ದುಗೊಳಿಸಿ ನೇರ ಪಾವತಿಗೆ ಮತ್ತು ಶೇ.25ರಷ್ಟು ವೇತನವನ್ನು ಹೆಚ್ಚಿಸಿ ಆದೇಶ ನೀಡಲಾಗಿದೆ.
– ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ ಸಚಿವರು

ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.