ಅಪಾಯಕಾರಿ ಸ್ಥಿತಿಯಲ್ಲಿರುವ ಸತ್ತ ಮರಗಳ ತೆರವಿಗೆ ಆಗ್ರಹ
Team Udayavani, May 15, 2018, 6:35 AM IST
ಕೋಟ: ಸಾೖಬ್ರಕಟ್ಟೆ-ಬಿದ್ಕಲ್ಕಟ್ಟೆ ಜಿಲ್ಲಾ ಮುಖ್ಯರಸ್ತೆಯ ಶಿರಿಯಾರ ಮದಗದಲ್ಲಿ ರಸ್ತೆಗೆ ತಾಗಿಕೊಂಡು 10ಕ್ಕೂ ಹೆಚ್ಚು ಗಾಳಿ ಮರಗಳು ಸಂಪೂರ್ಣ ಸತ್ತು ಹೋಗಿ ಒಣಗಿ ಬೀಳುವ ಸ್ಥಿತಿಯಲ್ಲಿದ್ದು ಅದನ್ನು ತೆರವುಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಈ ಹಿಂದೆ ಮರಗಳನ್ನು ತೆರವುಗೊಳಿಸಲು ಸ್ಥಳೀಯರು ಗ್ರಾ.ಪಂ.ಗೆ ಮನವಿ ನೀಡಿದ್ದು, ಅದನ್ನು ಅರಣ್ಯ ಇಲಾಖೆಗೆ ರವಾನಿಸಲಾಗಿದೆ. ಆದರೆ ಅರಣ್ಯ ಇಲಾಖೆಯವರು ಈ ಕುರಿತು ಇನ್ನೂ ಕೂಡ ಕ್ರಮಕೈಗೊಂಡಿಲ್ಲ ಎನ್ನಲಾಗಿದೆ. ಈ ಬಾರಿ ಮಳೆಗಾಲದಲ್ಲಿ ಮರಗಳು ಖಂಡಿತವಾಗಿ ರಸ್ತೆಗೆ ಉರುಳಲಿದೆ ಎನ್ನುವುದು ಸ್ಥಳೀಯರ ಅಭಿಪ್ರಾಯವಾಗಿದೆ.
ಅಪಾಯ ಸಂಭವ
ಒಂದು ವೇಳೆ ಮರಗಳು ರಸ್ತೆಗುರುಳಿದಲ್ಲಿ ವಾಹನಗಳು, ಸವಾರರು ಹಾಗೂ ಪಾದಚಾರಿಗಳಿಗೆ ಅಪಾಯ ಎದುರಾಗಲಿದೆ ಅಥವಾ ವಿದ್ಯುತ್ ತಂತಿಯ ಮೇಲೆ ಬಿದ್ದು ಅನಾಹುತ ಉಂಟಾಗುವ ಸಂಭವವಿದೆ. ಹೀಗಾಗಿ ದೊಡ್ಡ ಮಟ್ಟದ ಅಪಾಯ ಉಂಟಾಗುವ ಮುನ್ನ ಸಂಬಂಧಪಟ್ಟ ಇಲಾಖೆಯವರು ಕ್ರಮಕೈಗೊಳ್ಳಬೇಕು ಎನ್ನುವುದು ನಾಗರಿಕರ ಆಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ