ಅತಿಥಿ ಉಪನ್ಯಾಸಕರ ಸೇವೆ ಖಾಯಂಗೊಳಿಸಲು ಆಗ್ರಹ
Team Udayavani, Nov 6, 2019, 10:31 PM IST
ಉಡುಪಿ: ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಸರಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಇಲಾಖೆ ನಿಯಮಾನುಸಾರ ಆಯ್ಕೆಗೊಂಡು ಕನಿಷ್ಠದಲ್ಲಿ ಕನಿಷ್ಠ ಗೌರವಧನ ವೇತನ ಪಡೆದು, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಾ ಬಂದಿರುತ್ತಾರೆ. ಅಲ್ಲದೇ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 5-6 ತಿಂಗಳಾದರೂ ಕೆಲವು ಕಾಲೇಜುಗಳಲ್ಲಿ ವೇತನವಾಗಿಲ್ಲ. ವೇತನ ಬಂದರೂ ಅದು ಕೇವಲ ಒಂದು ತಿಂಗಳದ್ದು ಮಾತ್ರ. ಅನೇಕ ವರ್ಷಗಳಿಂದ ಇಎಸ್ಐ, ಇಪಿಎಫ್ ಸೌಲಭ್ಯವಿಲ್ಲ. ಸರಕಾರ ಕೂಡಲೇ ಇದಕ್ಕೆ ಸಂಬಂಧಿಸಿದ ಕಡತವನ್ನು ಸಂಪುಟ ಸಮಿತಿಯ ಮುಂದೆ ತಂದು ಜೇಒಸಿ ಮಾದರಿಯಲ್ಲಿ ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸಿ ಖಾಯಂ ಮಾಡುವುದರ ಮೂಲಕ ಸೂಕ್ತ ನ್ಯಾಯ ದೊರಕಿಸಿ ಕೊಡಬೇಕು. 2019-20ನೇ ಸಾಲಿನ ಗೌರವಧನ ಹೆಚ್ಚಳವನ್ನು ಈ ಸಾಲಿನ ಶೈಕ್ಷಣಿಕ ಅವಧಿ ಪೂರ್ವದಿಂದಲೇ ಜಾರಿಗೊಳಿಸಬೇಕೆಂದು ಮನವಿಯಲ್ಲಿ ಸಮಿತಿ ಆಗ್ರಹಿಸಿದೆ.
ನಿಯೋಗದಲ್ಲಿ ಸರಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ರಾಜ್ಯ ಜಂಟಿ ಕಾರ್ಯದರ್ಶಿ ಮಂಜಪ್ಪ ಡಿ. ಗೋಣಿ, ಜಿಲ್ಲಾಧ್ಯಕ್ಷ ಡಾ| ಶಾಹಿದಾ ಕೋಟ, ಕಾರ್ಯದರ್ಶಿಗಳಾದ ಸಂತೋಷ್, ನಮಿತಾ ಆಚಾರ್ಯ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ