ಚೆನ್ನಾಗಿರುವುದನ್ನು ಕೆಡವಿ, ಹೊಸ ಡಿವೈಡರ್‌ ನಿರ್ಮಾಣ

ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿರುವ ಆರೋಪ

Team Udayavani, May 5, 2022, 12:43 PM IST

ambagilu

ಉಡುಪಿ: ಅಂಬಾಗಿಲು- ಪೆರಂಪಳ್ಳಿ ಮೂಲಕ ಮಣಿಪಾಲ ಸಂಪರ್ಕಿಸುವ ಚತುಷ್ಪಥ ಕಾಮಗಾರಿ ಬಹುತೇಕ ಮುಗಿಯುವ ಹಂತ ದಲ್ಲಿದೆ. ರಸ್ತೆಯ ಮಧ್ಯದಲ್ಲಿ ಅಪಾಯ ಕಾರಿಯಾಗಿರುವ ಗೋಡೆಯನ್ನು ತೆರವುಗೊಳಿಸಲಾಗಿದೆ, ಚೆನ್ನಾಗಿದ್ದ ರಸ್ತೆ ವಿಭಾಜಕವನ್ನು ಅಭಿವೃದ್ಧಿ ಹೆಸರಿನಲ್ಲಿ ನೆಲಸಮ ಮಾಡಲಾಗಿದೆ.

ಒಂದಲ್ಲೊಂದು ಕಾರಣದಿಂದ ಈ ರಸ್ತೆ ಕಾಮಗಾರಿ ಸಾರ್ವಜನಿಕರ ಅಸಮಾ ಧಾನಕ್ಕೆ ಕಾರಣವಾಗುತ್ತಲೇ ಇದೆ. ಮಣಿಪಾಲದ ಕಾಯಿನ್‌ ವೃತ್ತದಿಂದ ಪೆರಂಪಳ್ಳಿ ಕಡೆಗೆ ಹೋಗುವ ಚತುಷ್ಪಥ ರಸ್ತೆಯು ಬಿವಿಟಿವರೆಗೂ ಡಿವೈಡರ್‌ ಸಹಿತ ಚೆನ್ನಾಗಿತ್ತು. ಆದರೆ, ಯಾವ ಕಾರಣಕ್ಕೆ ಡಿವೈಡ್‌ ತೆರವುಗೊಳಿಸಿ, ಮರು ನಿರ್ಮಾಣ ಮಾಡುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲ. ರಸ್ತೆ ಕಾಮಗಾರಿ ನಡೆಸುತ್ತಿರುವ ಇಲಾಖೆಗಳ ಈ ಕ್ರಮಕ್ಕೆ ಸಾರ್ವಜನಿಕರು ಆಕ್ಷೇಪ, ಅಸಮಾಧಾನ ಹೊರ ಹಾಕಿದ್ದಾರೆ. ಜತೆಗೆ ಜನಪ್ರತಿನಿಧಿಗಳು ಕೂಡ ಈ ಬಗ್ಗೆ ನಿಗಾಯನ್ನು 23 ಕೋ. ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ, ಟಿಡಿಆರ್‌ ಪ್ರಕ್ರಿಯೆ ಮೂಲಕ ಭೂಸ್ವಾಧೀನ, ಒಟ್ಟು 3.9 ಕಿ.ಮೀ. ರಸ್ತೆಯಲ್ಲಿ ನಿರ್ಮಾಣ ಮಾಡಲಾಗಿದೆ. ಇದಕ್ಕೆ ಪೂರಕ ಎಂಬಂತೆ ಹೊಟೇಲ್‌ ಕಂಟ್ರಿ ಇನ್‌ ಸಮೀಪದ ರಸ್ತೆ ವಿಭಾಜಕ ಹಳೆಯ ಮಾದರಿಯಲ್ಲಿ ಅವೈಜ್ಞಾನಿಕವಾಗಿ ರೂಪಿಸಲಾಗಿದೆ. ಹೊಸ ರಸ್ತೆಗೆ ಅನುಗುಣವಾಗಿ ನಿರ್ಮಾಣವಾಗಿಲ್ಲ ಎಂಬುದು ಅಧಿಕಾರಿಗಳು ಸಮರ್ಥನೆ ನೀಡಿದ್ದಾರೆ. ಹೀಗಾಗಿ ಅದನ್ನು ತೆರವುಗೊಳಿಸಿ ವ್ಯವಸ್ಥಿತವಾಗಿ ವಿಭಾಜಕ ರೂಪಿಸಲಾಗುತ್ತಿದೆ ಎನ್ನುತ್ತಿದ್ದಾರೆ.

ಅಪಾಯಕಾರಿ ಆವರಣ ಗೋಡೆಗಿಲ್ಲ ಮುಕ್ತಿ

ಪೆರಂಪಳ್ಳಿಯಲ್ಲಿರುವ ಕೇಂದ್ರ ಸರಕಾರದ ಆಹಾರ ನಿಗಮ ಡಿಪೋ ಆವರಣ ಗೋಡೆಯೊಂದು ಪ್ರಯಾಣಿಕರಿಗೆ ಕಿರಿಕಿರಿಯಾಗಿ ಪರಿಣಮಿಸಿದ್ದು, ಇದುವರೆಗೆ ಲೋಕೋಪಯೋಗಿ ಇಲಾಖೆಗೆ ಯಾವುದೆ ಸ್ಪಂದನೆ ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಆವರಣ ಗೋಡೆ ಮುಂದಿನ ದಿನಗಳಲ್ಲಿ ಗಂಭೀರ ಅಪಘಾತಕ್ಕೆ ಕಾರಣ ವಾಗುವುದರಿಂದ ಲೋಕೋಪಯೋಗಿ ಇಲಾಖೆ ಈ ಆವರಣಗೋಡೆ ಒಂದಿಷ್ಟು ಭಾಗವನ್ನು ತೆರವುಗಳಿಸಿ ನೇರವಾಗಿ ರಸ್ತೆ ನಿರ್ಮಿಸುವಂತೆ ಸ್ಥಳೀಯರು ಆಗ್ರಹಿಸಿದ್ದರು.

ಆಹಾರ ನಿಗಮದ ಕಚೇರಿಯ ಆವರಣಗೋಡೆ ತೀರ ಅಪಾಯಕಾರಿಯಾಗಿದ್ದು, ಈ ತಿರುವಿನಲ್ಲಿ ನಿಯಂತ್ರಣ ತಪ್ಪಿದರೆ ಗಂಭೀರ ಅಪಘಾತ ಸಂಭವಿಸಲಿದೆ. ಇಲ್ಲಿನ 40 ಮೀಟರ್‌ ಜಾಗವನ್ನು ರಸ್ತೆಗೆ ಕೊಡುವಂತೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ.

ಕಾಮಗಾರಿ ಹೆಸರಲ್ಲಿ ಹಣ ಪೋಲು

ಚೆನ್ನಾಗಿಯೇ ಇದ್ದ ರಸ್ತೆ ವಿಭಾಜಕ ತೆರವುಗೊಳಿಸಿ ಮತ್ತೆ ಲಕ್ಷಾಂತರ ರೂ., ವ್ಯಯಿಸಿ ವಿಭಾಜಕ ನಿರ್ಮಿಸುತ್ತಿರುವುದು ಸರಿಯಾದ ಕ್ರಮವಲ್ಲ. ಸಾರ್ವಜನಿಕರ ತೆರಿಗೆಯ ಲಕ್ಷಾಂತರ ರೂ., ಹಣ ಪೋಲು ಮಾಡಲಾಗುತ್ತಿದೆ. ಚೆನ್ನಾಗಿದ್ದ ರಸ್ತೆ, ಚರಂಡಿಯನ್ನು ಮರು ಕಾಮಗಾರಿ, ಡಾಮರು ಹಾಕಿಸುವ ಹೆಸರಲ್ಲಿ ಕೋಟ್ಯಾಂತರ ರೂ.ಗಳನ್ನು ವ್ಯಯಿಸುವುದು ಸರಿಯಲ್ಲ. ಈ ಬಗ್ಗೆ ಜಿಲ್ಲಾಡಳಿತ ವಿಶೇಷ ಎಚ್ಚರ ವಹಿಸುವ ತುರ್ತು ಅಗತ್ಯವಿದೆ.

ಹಳೆವಿಭಾಜಕ ತೆರವುಗೊಳಿಸಿ ವ್ಯವಸ್ಥಿತವಾಗಿ ನಿರ್ಮಾಣ

ಹೊಸ ರಸ್ತೆಗೆ ಅನುಗುಣವಾಗಿ ವಿಭಜಕ ನಿರ್ಮಾಣ ಮಾಡಬೇಕಿದ್ದು, 1 ಕಿ.ಮೀ ವ್ಯಾಪ್ತಿಯಲ್ಲಿ ಹಳೆ ವಿಭಾಜಕವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕಾಗಿ ವ್ಯವಸ್ಥಿತ ವಿಭಾಜಕ ನಿರ್ಮಿಸಲಾಗುತ್ತಿದೆ. -ಜಗದೀಶ್‌ ಭಟ್‌, ಎಇಇ, ಲೋಕೋಪಯೋಗಿ ಇಲಾಖೆ

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.