ಉತ್ತಮ ಒರತೆ ಇದ್ದರೂ ಬಳಕೆಯಾಗದ ನೀರು: ಬೇಕಿದೆ ತಡೆಬೇಲಿ


Team Udayavani, Apr 28, 2017, 12:36 PM IST

2604tke4(imp).jpg

ತೆಕ್ಕಟ್ಟೆ (ಕುಂಭಾಶಿ): ಕುಂಭಾಶಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ  ವಿನಾಯಕ ನಗರದ ಆಶ್ರಯ ಕಾಲನಿಯ ಸಾರ್ವಜನಿಕ ಸ್ಥಳದಲ್ಲಿ ತಡೆಗೋಡೆಗಳಿಲ್ಲದ ತೆರೆದ ಬಾವಿ ಅಪಾಯ ಸೃಷ್ಟಿಸುತ್ತಿದೆ. ಅಲ್ಲದೆ  ಈ ಬಾವಿಯಲ್ಲಿ  ಬೇಸಿಗೆಯಲ್ಲಿ  ಅಪಾರ ನೀರಿನ ಸೆಲೆಯನ್ನು ಹೊಂದಿದ್ದರೂ ಸಮರ್ಪಕವಾಗಿ ಬಳಕೆಯಾಗದೆ  ತೀವ್ರ ನಿರ್ಲಕ್ಷéಕ್ಕೆ ಒಳಗಾಗಿದೆ.

ಯಾವುದೇ ತಡೆಗೋಡೆಗಳಿಲ್ಲ 
ಸುಮಾರು 25 ವರ್ಷಗಳ ಹಿಂದೆ  ಜಿಲ್ಲಾ ಪಂಚಾಯತ್‌ ಅನುದಾನದಲ್ಲಿ  ಸಂಪೂರ್ಣ ಶಿಲೆಕಲ್ಲಿನ ಗೋಡೆಯಿಂದ ನಿರ್ಮಾಣಗೊಂಡಿರುವ  ಬಾವಿ ಈ ಹಿಂದೆ ಗೋಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಪಂಪ್‌ಗ್ಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು ಪ್ರಸ್ತುತ ಗೋಪಾಡಿ ಗ್ರಾಮದಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ .

ಅಪಾಯದ ಮಟ್ಟದಲ್ಲಿದೆ ಬಾವಿ
ಪ್ರಸ್ತುತ ಈ ಬಾವಿಯಲ್ಲಿ ಅಪಾರ ಪ್ರಮಾಣದ ನೀರುಗಳಿದ್ದರೂ ಸಮರ್ಪಕ ಬಳಕೆ ಹಾಗೂ ನಿರ್ವಹಣೆಗಳಿಲ್ಲದೇ ಇರುವುದರಿಂದ  ಬಾವಿಯ ಕಲ್ಲು ಜರಿಯುತ್ತಿದ್ದು  ಅಪಾಯದ ಮಟ್ಟವನ್ನು ತಲುಪಿದೆ ಅಲ್ಲದೆ ಮಳೆಗಾಲದ ಸಂದರ್ಭದಲ್ಲಿ ಸುತ್ತಮುತ್ತಲಿನ ಮನೆಗಳಿಗೂ ತೊಂದರೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವ ಕಾರಣ ಬಾವಿಯ ಪುನಶ್ಚೇತನ ಕಾರ್ಯಕ್ಕೆ  ಮುಂದಾಗಬೇಕಾದ ಅನಿವಾರ್ಯತೆ ಇದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಸಮರ್ಪಕವಾಗಿ ಬಳಕೆಯಾಗದ ನೀರು
ಹೆಚ್ಚಿದ ತಾಪಮಾನ ಅಂತರ್ಜಲ ಕುಸಿತವಾಗಿದ್ದರೂ  ಕೂಡ ವಿನಾಯಕ ನಗರದ ಆಶ್ರಯ ಕಾಲನಿಯ ಭೌಗೋಳಿಕವಾಗಿ ಅಧ್ಯಯನಗೈದು ಸುಮಾರು 30 ಅಡಿ ಆಳದ 15 ಅಡಿ ವಿಸ್ತೀರ್ಣದಲ್ಲಿ ಸಂಪೂರ್ಣ ಶಿಲೆಗಲ್ಲಿನಿಂದ ನಿರ್ಮಾಣಗೊಂಡಿರುವ ಈ ಬಾವಿಯಲ್ಲಿ  ಬೇಸಿಗೆಯಲ್ಲಿಯೂ ಅಪಾರ ನೀರು ಸಂಗ್ರಹವಾಗಿದ್ದರೂ ಸಮೀಪದ ನಾಲ್ಕೈದು ಮನೆಯವರು ಮಹಿಳೆಯರು ಅಪಾಯದ ನಡುವೆ ನೀರು ಸೇದಿಕೊಂಡು ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ.

ಸುಮಾರು 20 ವರ್ಷಗಳಿಂದಲೂ ಈ ಬಾವಿಯ ನೀರನ್ನು ದಿನ ಬಳಕೆಗಾಗಿ ಬಳಸುತ್ತಿದ್ದೇವೆ. ಆದರೆ ಬಾವಿಯ ಕಲ್ಲು ಜರಿತದಿಂದಾಗಿ  ಅಪಾಯದ ಸ್ಥಿತಿಯಲ್ಲಿದ್ದು ಅನತಿ ದೂರದಲ್ಲಿರುವ ನಮ್ಮ ಮನೆೆ ಮಳೆಗಾಲ ಸಂದರ್ಭದಲ್ಲಿ ಸಂಭವನೀಯ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ . ಬಾವಿಗೆ ಯಾವುದೇ ತೆ‌ರನಾದ ತಡೆಗೋಡೆಗಳಿಲ್ಲದ ಕಾರಣ ಈ ಪರಿಸರದಲ್ಲಿ ನಿತ್ಯ ಸಂಚರಿಸುವ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಸ್ಥರು ಅಪಾಯದ ನಡುವೆ ಸಂಚರಿಸಬೇಕಾಗಿದೆ. ಆದ್ದರಿಂದ ಸಂಬಂಧಪಟ್ಟ  ಸ್ಥಳೀಯಾಡಳಿತ ತತ್‌ಕ್ಷಣವೇ ಕ್ರಮ ಕೈಗೊಳ್ಳಬೇಕು.
– ಪ್ರೇಮಾ ಮೊಗವೀರ, ಸ್ಥಳೀಯ ನಿವಾಸಿಗಳು

– ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.