ಉಡುಪಿಯ ಮನೆಯಿಂದ 22 ಲಕ್ಷ ರೂ. ಕದ್ದ ಇಬ್ಬರು ಕಳ್ಳರ ಬಂಧನ
Team Udayavani, Sep 14, 2019, 1:40 PM IST
ಉಡುಪಿ: ಇಲ್ಲಿನ ಒಳಕಾಡಿನ ಮನೆಯೊಂದರಿಂದ ಗುರುವಾರ 22 ಲಕ್ಷ ರೂ ನಗದು ಮತ್ತು ಬೆಳ್ಳಿಯ ವಸ್ತುಗಳನ್ನು ಕದ್ದ ಆರೋಪಿಗಳಿಬ್ಬರನ್ನು ಕ್ಷಿಪ್ರ ಕಾರ್ಯಾಚರಣೆಯಲ್ಲಿ ಉಡುಪಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳನ್ನು ಸಾಂಗ್ಲಿ ಮೂಲದ ಅತುಲ್ ಮಹದೇವ್ ಬಾಂಗ್ನೆ ( 24 ವ) ಮತ್ತು ಸಂದೀಪ್ ಚಂದ್ರಕಾಂತ್ ಶಿಂಧೆ ( 25ವ) ಎಂದು ಗುರುತಿಸಲಾಗಿದೆ.
ಉಡುಪಿ ಒಳಕಾಡಿನ ಸುನಂದ ಮಾಣಿಕ್ಯ ಪಾಟೀಲ್ ಅವರು ಸೆ.12 ರಂದು ಶಾಲೆಗೆ ಹೋಗಿ ಮಕ್ಕಳಿಗೆ ಟಿಫಿನ್ ಕೊಟ್ಟು ಬರುವಾಗ ಬೀಗ ಮುರಿದು ಅಡುಗೆ ಮನೆಯ ಡಬ್ಬಗಳಲ್ಲಿದ್ದ ನಗದು ಹಾಗೂ ಅರ್ಧ ಕೆಜಿ ಬೆಳ್ಳಿ ಕಳವು ಮಾಡಲಾಗಿತ್ತು.
ಆರೋಪಿಗಳಲ್ಲಿ ಅತುಲ್ ಮಹಾದೇವ್ ಬಾಂಗ್ನೆಯನ್ನು ಗೋವಾದಲ್ಲಿ ಬಂಧಿಸಿದ್ದು, ಸಂದೀಪ್ ಚಂದ್ರಕಾಂತ್ ಶಿಂಧೆಯನ್ನು ಬೈಂದೂರಿನಲ್ಲಿ ಸೆರೆಹಿಡಿಯಲಾಗಿದೆ. ಕಳವುಗೈದ 22 ಲಕ್ಷ ರೂಪಾಯಿಯಲ್ಲಿ 15 ಸಾವಿರವನ್ನು ಖರ್ಚು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದರ ಜೊತೆಗೆ ಕಳವು ಮಾಡಿದ್ದ ಅರ್ಧ ಕೆಜಿ ಬೆಳ್ಳಿಯನ್ನು ಕೂಡಾ ಸ್ವಾಧೀನ ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ