ಕಾರ್ಕಳ: ರಸ್ತೆ ಗುಂಡಿ ದಾಟಲು ಇರಬೇಕು ಗಟ್ಟಿ  ಗುಂಡಿಗೆ


Team Udayavani, Sep 15, 2021, 3:00 AM IST

ಕಾರ್ಕಳ: ರಸ್ತೆ ಗುಂಡಿ ದಾಟಲು ಇರಬೇಕು ಗಟ್ಟಿ  ಗುಂಡಿಗೆ

ಕಾರ್ಕಳ:  ಪೇಟೆಗೆ  ಬರುವುದೆಂದರೆ  ವಾಹನ ಸವಾರರಲ್ಲಿ ಒಂದು ರೀತಿಯ ಭಯ. ಕಾರಣ ಪೇಟೆ ತಲುಪುವ ದಾರಿ ಮಧ್ಯೆ ಭೀತಿ ಹುಟ್ಟಿಸುವ ರೀತಿಯಲ್ಲಿರುವ ಬೃಹತ್‌ ಗಾತ್ರದ  ಗುಂಡಿಗಳು. ಇದನ್ನು ತಪ್ಪಿಸಿ ಪೇಟೆ ತಲುಪಲು  ಎದೆಯಲ್ಲಿ ಗಟ್ಟಿ ಗುಂಡಿಗೆ ಇರಲೇಬೇಕು.

ಉಡುಪಿ ಕಡೆಯ ಮಾರ್ಗವಾಗಿ ಕಾರ್ಕಳ ನಗರ ತಲುಪುವ ಮುಂಚಿತ ಪುರಸಭೆ ವ್ಯಾಪ್ತಿಯ ಬಂಡಿಮಠ, ಸಾಲ್ಮರ ಪರಿಸರ ತಲುಪುತ್ತಿದ್ದಂತೆ  ಗುಂಡಿಗಳ  ದರ್ಶನವಾಗುತ್ತವೆ. ಸಾಲ್ಮರದ ಅಷ್ಟೂ  ದೂರದವರೆಗೆ ಮುಖ್ಯ ರಸ್ತೆಯ ಡಾಮರು ಕಿತ್ತು ಹೋಗಿ ದೊಡ್ಡ ಗುಂಡಿಗಳು ನಿರ್ಮಾಣಗೊಂಡಿವೆ. ರಸ್ತೆಯ ಅಲ್ಲಲ್ಲಿ   ಚಿಕ್ಕದಾಗಿದ್ದ ಹೊಂಡಗಳ ಗಾತ್ರ ಮಳೆಗೆ ಬೃಹದಾಕಾರವಾಗಿ ಮಾರ್ಪಟ್ಟಿವೆ.

ನಿತ್ಯ ಸರ್ಕಸ್‌:

ನಗರಕ್ಕೆ ಬರುವ ವಾಹನ ಸವಾರರು ಇಲ್ಲಿ ಹೊಂಡಗುಂಡಿಗಳನ್ನು ತಪ್ಪಿಸಲು ಸರ್ಕಸ್‌ ಮಾಡಿ ಕೊಂಡು ಪ್ರಯಾಣಿಸುವಾಗ ಆಯತಪ್ಪಿ  ಸವಾರರು ಬೀಳುವ ಸಾಧ್ಯತೆ ಹೆಚ್ಚಿದೆ. ಲಾಕ್‌ಡೌನ್‌ ನಿರ್ಬಂಧ ತೆರವುಗೊಳಿಸಿದ್ದರಿಂದ ವಾಹನ ಸಂಚಾರವೂ ಹೆಚ್ಚಾಗಿದೆ. ಮೊದಲೇ  ಹದಗೆಟ್ಟ  ರಸ್ತೆ  ಇನ್ನಷ್ಟು  ಕೆಟ್ಟಿವೆ. ದ್ವಿಚಕ್ರ ವಾಹನ ಸವಾರರಂತೂ ಜೀವವನ್ನೇ ಕೈಯಲ್ಲಿ ಹಿಡಿದುಕೊಂಡು ಇಲ್ಲಿ  ತೆರಳಬೇಕು.  ಒಳಚರಂಡಿ ಅವ್ಯವಸ್ಥೆ  ಕೂಡ ರಸ್ತೆ  ಹೆಚ್ಚು  ಹದಗೆಡಲು ಕಾರಣಗಳಲ್ಲಿ  ಸೇರಿದೆ.

ಅಂದೇ ಎಚ್ಚರಿಸಿದ್ದರು:

ಲೊಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಕಾರ್ಕಳ ಉಪ ವಿಭಾಗ ವತಿಯಿಂದ ಕಾರ್ಕಳ ಪುರಸಭೆ ವ್ಯಾಪ್ತಿಯ ಸಾಲ್ಮರದಿಂದ ಜಯಭಾರತಿ ಡ್ರೈವಿಂಗ್‌  ಸ್ಕೂಲ್‌ ವರೆಗೆ  ಚತುಷ್ಪಥ ರಸ್ತೆ ನಿರ್ಮಾಣವನ್ನು ಮಹಾಮಸ್ತಕಾಭಿಷೇಕ ವಿಶೇಷ ಅನುದಾನದಲ್ಲಿ ಮಾಡಲಾಗಿತ್ತು. ಅಂದು ಗುತ್ತಿಗೆದಾರರು ಕಾಮಗಾರಿ  ನಡೆಸುವಾಗಲೇ  ಸಾರ್ವಜನಿಕರು ಕಾಮಗಾರಿ ಕಳಪೆ ಎಂದು ದೂರಿದ್ದರು.

ದಾಟಿ ಹೋದರೂ ಕಣ್ಣಿಗೆ ಬಿದ್ದಿಲ್ಲ!:

ಅಧಿಕಾರಿಗಳು, ಜನಪ್ರತಿನಿಧಿಗಳು ಇದೇ ರಸ್ತೆಯ ಹೊಂಡ ದಾಟಿಯೇ   ಹತ್ತಾರು ಕಾರ್ಯಕ್ರಮಗಳಿಗೆ ತೆರಳುತ್ತಾರೆ. ಆದರೆ ಅವರ್ಯಾರ ಕಣ್ಣಿಗೂ ಈ ಗುಂಡಿಗಳು ಬೀಳದಿರುವುದು ವಿಶೇಷ. ಇನ್ನು ಶಾಲಾ ಕಾಲೇಜುಗಳಿಗೆ ತೆರಳುವ ಮಕ್ಕಳು,  ಸರಕಾರಿ, ಖಾಸಗಿ ಸಂಸ್ಥೆಗಳ ಉದ್ಯೋಗಸ್ಥರು, ಮಹಿಳೆಯರು ವಾಹನದಲ್ಲಿ ಓಡಾಡುವಾಗ  ಭಯ ಪಡುತ್ತಿದ್ದಾರೆ. ಮಳೆಗೆ ರಸ್ತೆಯ ಹೊಂಡಗಳಲ್ಲಿ ನೀರು ನಿಂತು  ಗುಂಡಿಗಳ ಅರಿವಿಲ್ಲದೆ ಬಿದ್ದು  ಗಾಯಗೊಳ್ಳುತ್ತಿದ್ದಾರೆ.

ಅಪಘಾತ ತಡೆಗೆ ಬ್ಯಾರಿಕೇಡ್‌? :

ಪುರಸಭೆ ವ್ಯಾಪ್ತಿಯ ಸಾಲ್ಮರ ಬಳಿ ರಸ್ತೆ ಹದಗೆಟ್ಟು ಹೊಂಡ ನಿರ್ಮಾಣವಾದ ಸ್ಥಳಕ್ಕೆ ಪುರಸಭೆ ಮುಖ್ಯಾಧಿಕಾರಿ ರೂಪಾ ಶೆಟ್ಟಿ ನೇತೃತ್ವದಲ್ಲಿ  ಅಧಿಕಾರಿಗಳು ದಿಢೀರ್‌ ಭೇಟಿ ನೀಡಿದರು.  ಪೊಲೀಸರು ಕೂಡಲೆ ಆ ಸ್ಥಳದಲ್ಲಿ ಬ್ಯಾರಿಕೇಡ್‌ ಇರಿಸಿ ಅಪಘಾತ ತಡೆ ಪ್ರಯತ್ನವನ್ನು  ಮಂಗಳವಾರ ನಡೆಸಿದ್ದಾರೆ.

ಮಳೆ ಬಂದರೆ ನಡು ಪೇಟೆ ಹೊಳೆಯಾಗುತ್ತದೆ! :

ಮೂರುಮಾರ್ಗ ಜಂಕ್ಷನ್‌ನಿಂದ ಬಸ್‌ನಿಲ್ದಾಣಕ್ಕೆ ತೆರಳುವ ಮಾರ್ಗ ಮಧ್ಯೆ ಮುಖ್ಯ ಪೇಟೆಯ ನಡು ರಸ್ತೆಯಲ್ಲಿ  ದೊಡ್ಡ  ಹೊಂಡವಿದ್ದು, ಅಪಘಾತಕ್ಕೆ ಆಹ್ವಾನ ನೀಡುತ್ತಿದೆ. ಒಂದು ಬಾರಿ ಹೊಂಡ ಮುಚ್ಚಿದ್ದರೂ ಮತ್ತೆ ತೆರೆದಿದೆ. ಸೂಕ್ತ ಚರಂಡಿಯಿಲ್ಲದೆ  ಮಳೆ ಬಂದಾಗ ರಸ್ತೆ ಮೇಲೆ ನೀರು ನಿಂತು ಹೊಂಡ ಕಾಣದಂತಾಗುತ್ತದೆ.

ನಿರಂತರ ಮಳೆ ಸುರಿಯುತ್ತಿರುವುದರಿಂದ ಈಗ ಕಾಮಗಾರಿ ನಡೆಸಲು  ಅಡಚಣೆಯಾಗಿದೆ. ಮಳೆ ಸ್ವಲ್ಪ ಕಡಿಮೆಯಾದಲ್ಲಿ ತತ್‌ಕ್ಷಣವೇ ದುರಸ್ತಿ ಪಡಿಸಲಾಗುವುದು. ಮೂರು ಮಾರ್ಗ ರಸ್ತೆಯಲ್ಲಿ  ತಾನೇ ನಿಂತು ಕೆಲಸ ಮಾಡಿಸಿದ್ದೆ. ಸತತ ಮಳೆಯಿಂದ ಮತ್ತೆ ಹೊಂಡ ಬಿದ್ದಿದೆ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡುವೆ. ಸುಮಾಕೇಶವ್‌, ಅಧ್ಯಕ್ಷೆ ಪುರಸಭೆ ಕಾರ್ಕಳ

 

-ಬಾಲಕೃಷ್ಣ ಭೀಮಗುಳಿ‌

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.