ಕೃಷಿಕರಿಂದ ಮಾತ್ರ ದೇಶದ ಅಭಿವೃದ್ಧಿ: ಡಾ| ಹಂದೆ


Team Udayavani, Aug 6, 2017, 7:55 AM IST

050817Astro01.jpg

ಉಡುಪಿ: ದೇಶದಲ್ಲಿರುವ ಕೇವಲ ಶೇ. 10ರಷ್ಟು ವಿದ್ಯಾವಂತರಿಂದ ಅಭಿವೃದ್ಧಿ ಎನ್ನುವ ಮಾತು ಕೇಳಿ ಬರುತ್ತಿದೆ. ಆದರೆ ಅದು ನಿಜವಲ್ಲ. ಶೇ. 75ರಷ್ಟಿರುವ ಕೃಷಿಕರಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಯುವ ಸಮೂಹವು ಈ ಸತ್ಯ ಅರಿತು ತಮ್ಮ ಚಿಂತನೆಯನ್ನು ಬದಲಾಯಿಸಿಕೊಂಡರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಸೆಲ್ಕೊ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ, ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಡಾ| ಹರೀಶ್‌ ಹಂದೆ ಹೇಳಿದರು.

ಮಣಿಪಾಲ ವಿಶ್ವವಿದ್ಯಾನಿಲಯದ ವತಿಯಿಂದ ಕೆಎಂಸಿಯ ಡಾ| ಟಿಎಂಎ ಪೈ ಸಭಾಂಗಣದಲ್ಲಿ ಆಯೋಜಿಸಿದ “ಸಾಮಾಜಿಕ ಬದಲಾವಣೆಯಲ್ಲಿ ಯುವವೃಂದ’ ವಿಷಯದ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಪದವಿ ಓದದ ತಜ್ಞರು
ನಮ್ಮಲ್ಲಿ ಶ್ರೀಮಂತ ಹಾಗೂ ತೀರಾ ಬಡವರು ಎಂಬ ಎರಡು ವರ್ಗದ ಜನರಿದ್ದು, ಕೃಷಿಕರು ಪದವಿ ಓದದೆಯೂ ಆ ಕ್ಷೇತ್ರದಲ್ಲಿ ತಜ್ಞರಿದ್ದರೂ ಯಾರೂ ಕೂಡ ಸಲಹೆ ಕೇಳುವುದಿಲ್ಲ. ಯಾವ ಪ್ಯಾನಲ್‌ ಚರ್ಚೆಗೂ ಅವರನ್ನು ಕರೆಯುವುದಿಲ್ಲ. ದೇಶದ ಸುಮಾರು 2 ಸಾವಿರ ಮಿಲಿಯ ಮಂದಿಗೆ ವಿದ್ಯುತ್‌ ಸೌಲಭ್ಯವಿಲ್ಲ. ರಾಜಕೀಯ, ಸಾಂಸ್ಕೃತಿಕವಾಗಿ ಇನ್ನಷ್ಟು ಅಭಿವೃದ್ಧಿ ಕಾಣಬೇಕಿದೆ. ಈಗಲೂ ನಮ್ಮಲ್ಲಿ ಸಮಾನತೆ ಅನ್ನುವುದೇ ಇಲ್ಲ. ರಾಷ್ಟ್ರ ವಿರೋಧಿ ಚಿಂತನೆಗಳೇ ಹೆಚ್ಚಾಗಿವೆ. ಶೇ. 50ರಷ್ಟಿರುವ ಯುವ ಸಮೂಹವು ದೇಶದ ಶಿಕ್ಷಣ, ಆರೋಗ್ಯ, ಮೂಲಸೌಕರ್ಯದಂತಹ ಸಮಸ್ಯೆಗಳತ್ತ ಗಮನಹರಿಸಿದರೆ ಭಾರತದ ಜೀವನದ ಗುಣಮಟ್ಟ ಸುಧಾರಿಸಬಹುದು ಎಂದರು.

ವಿ.ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಮಾತನಾಡಿ, ಭಾರತದ ಒಟ್ಟು ಜನಸಂಖ್ಯೆಯ ಅರ್ಧದಷ್ಟಿರುವ ಯುವಕರು ಮನಸ್ಸು ಮಾಡಿದರೆ ಬದಲಾವಣೆ ಖಂಡಿತ ಸಾಧ್ಯ. ಬಡತನ, ನಿರುದ್ಯೋಗ, ವಿದ್ಯುತ್‌ ಸಮಸ್ಯೆಗಳಿಗೆ ಯುವ ಸಮೂಹವೇ ಪರಿಹಾರ. ವಾಸ್ತವದಲ್ಲಿ ಸುಶಿಕ್ಷಿತರಲ್ಲಿಯೇ ನಾಗರಿಕ ಪ್ರಜ್ಞೆ ಕಡಿಮೆಯಾಗುತ್ತಿರುವುದು ಆತಂಕದ ವಿಚಾರ. ಹೆತ್ತವರು, ಶಿಕ್ಷಕರು ಈನಿಟ್ಟಿನಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದರು.ಸಮ್ಮೇಳನ ಸಂಚಾಲಕ ಡಾ| ಅನೂಪ್‌ ನಾಹ ಸ್ವಾಗತಿಸಿದರು. ನವನೀತ್‌ ಉಪಾಧ್ಯಾಯ ವಂದಿ ಸಿದರು.

“ಸಮಸ್ಯೆಗಳಿಗೆ ಗೂಗಲ್‌ ಪರಿಹಾರವಲ್ಲ’ 
ಈಗಿನ ಯುವವೃಂದದವರು ಎಷ್ಟೇ ಸುಶಿಕ್ಷಿತರಾದರೂ ಸಮಸ್ಯೆ ಎದುರಾದಾಗ ಪರಿಹಾರಕ್ಕಾಗಿ ಗೂಗಲ್‌ನಲ್ಲಿ ಹುಡುಕಾಡು
ತ್ತಾರೆ. ಆದರೆ ಸಮಾಜದಲ್ಲಿರುವ ಸಮಸ್ಯೆಗೆ ಗೂಗಲ್‌ ಪರಿಹಾರವಲ್ಲ. ದೇಶ ಸುತ್ತಿ. ಮಣಿಪಾಲ, ಬೆಂಗಳೂರು, ಚೆನ್ನೈ, ದಿಲ್ಲಿಯಂತಹ ನಗರಗಳನ್ನು ಬಿಟ್ಟು ಒಡಿಶಾ, ಬಿಹಾರ, ಝÞರ್ಖಂಡ್‌ನ‌ಂತಹ ತೀರಾ ಹಿಂದುಳಿದ ರಾಜ್ಯಗಳ ಊರುಗಳಿಗೆ ಭೇಟಿನೀಡಿ ವಾಸ್ತವ ಪರಿಸ್ಥಿತಿಯನ್ನು ನೋಡಿ. ಅಲ್ಲಿಯ ಜನರನ್ನು ಮಾತನಾಡಿಸಿ, ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಪರಿಹಾರಕ್ಕೆ ಮುಂದಾಗಿ ಎಂದು ಡಾ| ಹಂದೆ ಯುವಕರಿಗೆ ಕರೆ ನೀಡಿದರು. 

ನೀವೆಷ್ಟು  ಸ್ಪಂದಿಸಿದ್ದೀರಿ?
ವ್ಯವಸ್ಥೆ ಸರಿಯಿಲ್ಲ, ದೇಶ ಸರಿಯಿಲ್ಲ ಇತ್ಯಾದಿಯಾಗಿ ಸಮಸ್ಯೆಗಳ ಬಗ್ಗೆ ದೂರುವುದೇ ಭಾರತೀಯರ ಹವ್ಯಾಸ. ಆದರೆ ಈ ಸಮಾಜಕ್ಕಾಗಲಿ, ದೇಶದ ಪ್ರಗತಿಗೆ ನಾವೆಷ್ಟು ಕೊಡುಗೆ ನೀಡಿದ್ದೇವೆ ಅನ್ನುವುದನ್ನು ವಿಮರ್ಶೆ ಮಾಡಿಕೊಳ್ಳಬೇಕಿದೆ. ಛತ್ತೀಸ್‌ಗಢ‌, ಒಡಿಶಾ ಈಗಲೂ ನಕ್ಸಲ್‌ ಪೀಡಿತ ರಾಜ್ಯವಾಗಿರಲು ಕಾರಣ ನಮ್ಮಲ್ಲಿ ಒಗ್ಗಟ್ಟಿಲ್ಲದಿರುವುದು. ಕಲಿತವರು ದೊಡ್ಡ- ದೊಡ್ಡ ಕಂಪೆನಿಗಳಲ್ಲಿ ಕೆಲಸ ಪಡೆಯುತ್ತಾರೆ. ವರ್ಷದಿಂದ ವರ್ಷಕ್ಕೆ ವೇತನಏರಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ ನಮ್ಮಸುತ್ತಮುತ್ತಲಿನ ಸಾಮಾಜಿಕ ಸಮಸ್ಯೆಗಳ ಬಗ್ಗೆ ಯಾರೂ ಕೂಡ ಗಮನವೇ ಕೊಡುವುದಿಲ್ಲ ಎಂದು ಡಾ| ಹರೀಶ್‌ ಹಂದೆ ತಿಳಿಸಿದರು. 

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.