“ದೇಶದೆಲ್ಲೆಡೆ ಸರ್ವಾಧಿಕಾರ ಧೋರಣೆ’

ಗಾಂಧಿ 150 ವರ್ಷಾಚರಣೆಯ ಸಮಾರೋಪ, ಕಾಂಗ್ರೆಸ್‌ ಸಮಾವೇಶ

Team Udayavani, Nov 7, 2019, 5:01 AM IST

sarvadikara-dorane

ಉಡುಪಿ: ಬಿಜೆಪಿ ಸರಕಾರದಿಂದ ಇಂದು ದೇಶದೆಲ್ಲೆಡೆ ಸರ್ವಾಧಿಕಾರ ಧೋರಣೆ ನಡೆಯುತ್ತಿದೆ. ಪ್ರಶ್ನಿಸುವವರ ವಿರುದ್ಧ ಆದಾಯ ತೆರಿಗೆ ಇಲಾಖೆ, ಐಟಿ ಇಲಾಖೆಯನ್ನು ಬಳಸಿ ದಾಳಿ ನಡೆಸಲಾಗುತ್ತಿದೆ. ಈ ಮೂಲಕ ಬಿಜೆಪಿ ಪಕ್ಷದಲ್ಲಿರುವ ಭ್ರಷ್ಟ ರಾಜಕಾರಣಿಗಳನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.

ಗಾಂಧಿ 150 ವರ್ಷಾಚರಣೆಯ ಸಮಾರೋಪದ ಅಂಗವಾಗಿ ಜಿಲ್ಲಾ ಕಾಂಗ್ರೆಸ್‌ ಮತ್ತು ರಾಜೀವ್‌ ಗಾಂಧಿ ಪಂಚಾಯತ್‌ ರಾಜ್‌ ಸಂಘಟನೆ ವತಿಯಿಂದ ನಗರದ ಪುರಭವನದಲ್ಲಿ ಬುಧವಾರ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಜನರ ದಾರಿ ತಪ್ಪಿಸುವ ಕೆಲಸ
ಅದಾನಿ, ಅಂಬಾನಿಯವರಿಗೆ ಸಾಲ ನೀಡಿರುವುದೇ ಬಿಜೆಪಿ 5ವರ್ಷದ ಸಾಧನೆ ಎಂದು ಬಣ್ಣಿಸಿದ ಅವರು ದೇಶದ ಆರ್ಥಿಕ ವ್ಯವಸ್ಥೆ ಕುಸಿಯಲು ಮೋದಿಯೇ ಕಾರಣರಾಗಿದ್ದಾರೆ. ಯುಪಿಎ ಸರಕಾರವಿದ್ದಾಗ ಜಿಎಸ್‌ಟಿ ಜಾರಿ ಮಾಡುವುದನ್ನು ವಿರೋಧಿಸಿದ್ದ ಅಂದಿನ ಗುಜರಾತ್‌ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೇ ಈಗ ಅದನ್ನು ಬೆಂಬಲಿಸುತ್ತಿದ್ದಾರೆ. ಜನರನ್ನು ದಾರಿತಪ್ಪಿಸುವ ಸಲುವಾಗಿ ಟಿಪ್ಪುಸುಲ್ತಾನ್‌, ಸಾವರ್ಕರ್‌, ಕಾಶ್ಮೀರ ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಮೂಲಕ ದೇಶದ ಅಭಿವೃದ್ಧಿ ಕೆಲಸಗಳನ್ನು ಮರೆಮಾಚಲಾಗುತ್ತಿದೆ ಎಂದು ಆರೋಪಿಸಿದರು.

ವೋಟ್‌ ಬ್ಯಾಂಕ್‌ ರಾಜಕಾರಣ
ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ಬಿಜೆಪಿ ಪಕ್ಷವು ಪರೇಶ್‌ ಮೇಸ್ತಾ, ಡಿಎಸ್‌ಪಿ ಗಣಪತಿ ಪ್ರಕರಣ, ಡಿ.ಕೆ.ರವಿ ಪ್ರಕರಣದಲ್ಲಿ ಕಾಂಗ್ರೆಸ್‌ ಮೇಲೆ ಇಲ್ಲಸಲ್ಲದ ಆರೋಪ ಮಾಡಿತ್ತು. ಅದಕ್ಕಾಗಿ ಆ ಪ್ರಕರಣವನ್ನು ಸಿಬಿಐಗೂ ವಹಿಸಲಾಯಿತು. ಆದರೆ ಈಗ ಬಿಜೆಪಿ ಪಕ್ಷ ಇದರ ಬಗ್ಗೆ ಯಾವುದೇ ಚಕಾರವೆತ್ತುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಮತ ಪಡೆಯುವ ಉದ್ದೇಶಕ್ಕೆ ಮಾತ್ರ ಈ ರೀತಿಯ ಹೋರಾಟಗಳನ್ನು ಬಿಜೆಪಿ ಮಾಡುತ್ತಿದೆ ಎಂದರು.

ಕಾಂಗ್ರೆಸ್‌ನಿಂದ ಜನಪರ ಯೋಜನೆ
ದೇಶ ಭದ್ರವಾಗಿದೆ ಎಂದರೆ ಅದಕ್ಕೆ ಜವಾಹರಲಾಲ್‌ ನೆಹರೂ, ಮಹಾತ್ಮಾ ಗಾಂಧಿ, ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಅವರು ಸಾಮಾಜಿಕ ನ್ಯಾಯದ ಮೂಲಕ ಹಾಕಿದ ಭದ್ರ ಅಡಿಪಾಯವೇ ಕಾರಣವಾಗಿದೆ. ಆದರೆ ಇಂದು ದ್ವೇಷ ಮೂಡಿಸುವ ಕೆಲಸ ನಡೆಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಹಲವಾರು ಜನಪರ ಯೋಜನೆಗಳನ್ನು ಮಾಡಲಾಗಿತ್ತು. ಆದರೆ ಬಿಜೆಪಿ ಸರಕಾರದಿಂದ ಯಾವುದೇ ಜನಪರ ಕೆಲಸಗಳು ನಡೆಯಲಿಲ್ಲ. ಕಾಂಗ್ರೆಸ್‌ ಪಕ್ಷ ಗಟ್ಟಿಯಾಗಿದ್ದರೆ ಮಾತ್ರ ದೇಶ ಭದ್ರವಾಗಿರಲು ಸಾಧ್ಯ ಎಂದು ಅವರು ಹೇಳಿದರು.

ಈ ಸಂದರ್ಭ ಮಾಜಿ ಸಿಎಂ ಸಿದ್ದರಾಮಯ್ಯ, ಸಾಧಕ ಜನಪ್ರತಿನಿಧಿಗಳನ್ನು ಸಮ್ಮಾನಿಸಲಾಯಿತು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು ಸ್ವಾಗತಿಸಿದರು. ರಾಜೀವ್‌ ಗಾಂಧಿ ಪಂಚಾಯತ್‌ ರಾಜ್‌ ಸಂಘಟನೆಯ ರೋಶ್ನಿ ಓಲಿವೆರಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವಿಷ್ಣುನಾಧನ್‌, ಬಿ.ಎಂ. ಸಂದೀಪ್‌, ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ, ಮಹಿಳಾ ಕಾಂಗ್ರೆಸ್‌ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಯು.ಆರ್‌.ಸಭಾಪತಿ, ಪ್ರಮುಖರಾದ ರಂಗಸ್ವಾಮಿ, ನಾರಾಯಣ ಸ್ವಾಮಿ, ಎಂ.ಎ.ಗಫ‌ೂರ್‌ ಸಹಿತ ಹಲವಾರು ಮಂದಿ ಕಾಂಗ್ರೆಸ್‌ ಮುಖಂಡರು ಉಪಸ್ಥಿತರಿದ್ದರು. ಡಾ| ಸುನೀತಾ ಶೆಟ್ಟಿ, ದಿನೇಶ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.