ಸಮುದ್ರದಲ್ಲಿ ಡೀಸೆಲ್ ಅಂಶ ಪತ್ತೆ ವದಂತಿ: ಗೋವಾಕ್ಕೆ ತೆರಳಿದ ತಂಡ
Team Udayavani, Jan 23, 2019, 12:50 AM IST
ಮಲ್ಪೆ: ಗೋವಾದ ಪಣಜಿ ಬೈತುಲ್ ಸಮೀಪ ಸಮುದ್ರದಲ್ಲಿ ಡೀಸೆಲ್ ಸೋರಿಕೆಯಾಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹರಡಿದ್ದು, ಅದು ನಾಪತ್ತೆಯಾಗಿರುವ ಮಲ್ಪೆಯ ಸುವರ್ಣ ತ್ರಿಭುಜ ಬೋಟ್ಗೆ ಸಂಬಂಧಿಸಿದ್ದಾಗಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ.
ಈ ನಿಟ್ಟಿನಲ್ಲಿ ಉಡುಪಿ ನಗರ ವೃತ್ತ ನಿರೀಕ್ಷಕ ಮಂಜುನಾಥ್ ನೇತೃತ್ವದ ತಂಡ ಸೋಮವಾರ ರಾತ್ರಿ ಗೋವಾಕ್ಕೆ ತೆರಳಿ ಮಾಹಿತಿ ಕಲೆಹಾಕಿತು. ಕರಾವಳಿ ರಕ್ಷಣಾ ಪಡೆಯ ಸಿಬಂದಿ ತಮ್ಮ ನೌಕೆಯ ಮೂಲಕ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಆದರೆ ಡೀಸೆಲ್ ಸೋರಿಕೆಯಾಗಿರುವ ಬಗ್ಗೆ ಯಾವುದೇ ಕುರುಹುಗಳು ಕಂಡು ಬಂದಿಲ್ಲ ಎಂದು ತಿಳಿಸಿವೆ. ನೌಕಾಪಡೆ ಹಡಗಿನ ಮೂಲಕ ಬೋಟ್ ಪತ್ತೆ ಕಾರ್ಯಾಚರಣೆಯನ್ನು ಮುಂದುವರಿಸಿದೆ.
ಕುಟುಂಬಿಕರ ಆಕ್ರೋಶ
ಸುವರ್ಣ ತ್ರಿಭುಜ ಬೋಟ್ , 7 ಮಂದಿ ಮೀನುಗಾರರು ಮಲ್ಪೆಯ ಕಡಲತೀರದಿಂದ ಹೊರಟು ಹೋಗಿ ಕಾಣೆಯಾಗಿ ತಿಂಗಳು ಕಳೆದರೂ ಇನ್ನೂ ಪತ್ತೆ ಯಾಗಿಲ್ಲ. ಮೀನುಗಾರರ ಕುಟುಂಬದಲ್ಲಿ ಮೂಡಿದ್ದ ಆತಂಕ, ದುಃಖಗಳು ಆಕ್ರೋಶವಾಗಿ ಬದಲಾಗುತ್ತಿವೆೆ. ನಾಪತ್ತೆಯಾದ ಮೀನುಗಾರರ ಕುಟುಂಬಗಳು ನಮ್ಮವರು ಎಲ್ಲಿದ್ದಾರೆ, ಏನಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿಗಳನ್ನು, ಇಲಾಖೆ ಅಧಿಕಾರಿಗಳನ್ನು ದಿನನಿತ್ಯದ ಕಾಯಕ ಎಂಬಂತೆ ಭೇಟಿಯಾಗಿ ಕೇಳುತ್ತಲೇ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ