ಉಡುಪಿ ನಗರ ಗ್ರಂಥಾಲಯಕ್ಕೆ ಡಿಜಿಟಲ್‌ ಸ್ಪರ್ಶ!

ಡಿಜಿಟಲ್‌ ಮಾಧ್ಯಮದ ಬೆಳವಣಿಗೆ ಹಿನ್ನೆಲೆ

Team Udayavani, Jan 31, 2020, 5:53 AM IST

4735AE

ಉಡುಪಿ: ತಂತ್ರಜ್ಞಾನ ಬಳಕೆ ಹೆಚ್ಚಾದಂತೆ ಡಿಜಿಟಲ್‌ ಮಾಧ್ಯಮವೂ ಬೆಳೆಯುತ್ತಿದ್ದು, ಮೊಬೈಲ್‌, ಇಂಟರ್‌ನೆಟ್‌ ಯುಗದಲ್ಲಿ ಇ-ಪುಸ್ತಕಗಳಿಗೂ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಹಾಗೂ ನಗರ ಗ್ರಂಥಾಲಯಕ್ಕೆ ಡಿಜಿಟಲ್‌ ಸ್ಪರ್ಶ ನೀಡಲಾಗಿದೆ.

272 ಗ್ರಂಥಾಲಯ ಡಿಜಿಟಲ್‌
ರಾಜ್ಯ ಸರಕಾರದ 272 ಗ್ರಂಥಾಲಯಗಳಿಗೆ ಡಿಜಿಟಲ್‌ ಸ್ಪರ್ಶ ನೀಡಲು ಸಿದ್ಧತೆ ನಡೆಸಿದ್ದು, ಚಾಮರಾಜ ನಗರ, ತಮಕೂರು, ಹಾವೇರಿಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಂಡಿತ್ತು. ಓದುಗರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆ ರಾಜ್ಯದ 30 ಜಿಲ್ಲಾ ಕೇಂದ್ರಗಳು, 66 ನಗರ ಕೇಂದ್ರಗಳು, ಹೊಸ ತಾಲೂಕು ಸೇರಿದಂತೆ 176 ತಾಲೂಕು ಕೇಂದ್ರಗಳಲ್ಲಿ ಇ-ಲೈಬ್ರರಿ ಪ್ರಾರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ.

ಇ- ಗ್ರಂಥಾಲಯದಲ್ಲಿ ಏನಿದೆ?
ಡಿಜಿಟಲ್‌ ಗ್ರಂಥಾಲಯದಲ್ಲಿ 1ರಿಂದ 12ನೇ ತರಗತಿವರೆಗಿನ ಎÇÉ ರೀತಿಯ ಪಠ್ಯ ಪುಸ್ತಕಗಳನ್ನು ಸಂಗ್ರಹಿಸಲಾಗಿದೆ. ಇದಲ್ಲದೆ ಕೆಎಎಸ್‌ ಮತ್ತು ಐಎಎಸ್‌ ಸೇರಿದಂತೆ ವಿವಿಧ ಬಗೆಯ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕ ಭಂಡಾರ ಹಾಗೂ ನೂರಕ್ಕೂ ಹೆಚ್ಚು ಅಂತಾರಾಷ್ಟ್ರೀಯ ನಿಯತಕಾಲಿಕೆಗಳನ್ನು ಒಳಗೊಂಡಿದೆ. ಬೆರಳ ತುದಿಯಲ್ಲಿಯೇ ಎÇÉ ರೀತಿಯ ಮಾಹಿತಿಗಳನ್ನು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಡಿಜಿಟಲ್‌ ಗ್ರಂಥಾಲಯದಲ್ಲಿ ಪಡೆದುಕೊಳ್ಳಬಹುದಾಗಿದೆ.

ಸದಸ್ಯತ್ವ ಪಡೆಯರಿ
ಓದುಗರು ಟಛls.ಞಜಿnಠಿಚಿಟಟk.cಟಞ ಗೆ ಲಾಗ್‌ಇನ್‌ ಆಗಿ ಗ್ರಂಥಾಲಯದ ಸದಸ್ಯತ್ವ ಪಡೆಯಬಹುದು. ಮೊಬೈಲ್‌, ಕಂಪ್ಯೂಟರ್‌ ಇಂಟರ್‌ನೆಟ್‌ ಸೌಲಭ್ಯ ಇರುವ ವರು ಲಾಗಿನ್‌ ಆಗಿ ಮನೆಯಲ್ಲೇ ಈ ಗ್ರಂಥಾಲಯದ ಪುಸ್ತಕ ಓದಬಹುದು.

ಆ ಸೌಕರ್ಯ ಇಲ್ಲದವರು ಉಡುಪಿ ಡಿಜಿಟಲ್‌ ಗ್ರಂಥಾಲಯದಲ್ಲಿ ಉಚಿತವಾಗಿ ಓದಲು ಅವಕಾಶವಿದೆ.ಗ್ರಂಥಾಲಯಕ್ಕೆ ಲಾಗ್‌ಇನ್‌ ಆಗಲು ಕಂಪ್ಯೂಟರ್‌ನಲ್ಲಿ ಹೆಸರು, ಪೋಷಕರ ಹೆಸರು, ಮೊಬೈಲ್‌ ನಂಬರ್‌, ಇ-ಮೇಲ್‌, ಜನ್ಮ ದಿನಾಂಕ, ವಿಳಾಸದ ಕಾಲಂ ಭರ್ತಿಮಾಡಬೇಕು. ಮೊಬೈಲ್‌ ಅಥವಾ ಇ-ಮೇಲ್‌ಗೆ ಒಟಿಪಿ ಬರುತ್ತದೆ. ಅದನ್ನು ದಾಖಲಿಸಿ ಲಾಗ್‌ಇನ್‌ ಮಾಡಿ ಪಾಸ್ವರ್ಡ್‌ ರಚಿಸಿಕೊಳ್ಳಬೇಕು. ಪ್ರತಿ ಬಾರಿ ಲಾಗ್‌ಇನ್‌ ಆಗುವಾಗ ಹೆಸರು ಅಥವಾ ಮೊಬೈಲ್‌ ನಂಬರ್‌ ಹಾಗೂ ಪಾಸ್ವರ್ಡ್‌ ಬಳಸಬೇಕು.

ಫೇಸ್‌ ಬುಕ್‌ ಜಾಲತಾಣ ಬ್ಲಾಕ್‌
ಡಿಜಿಟಲ್‌ ಗ್ರಂಥಾಲಯದಲ್ಲಿ ಯೂಟ್ಯೂಬ್‌, ಫೇಸುಬುಕ್‌ ಸೇರಿದಂತೆ ಮುಂತಾದ ಮನರಂಜನೆಯಂತಹ ಸಾಮಾಜಿಕ ಜಾಲತಾಣಗಳನ್ನು ಬ್ಲಾಕ್‌ ಮಾಡಲಾಗಿದೆ. ಗಂಭೀರ ಅಧ್ಯಯನಕ್ಕಷ್ಟೇ ಅವಕಾಶ ಕಲ್ಪಿಸಲಾಗಿದೆ. ಉದ್ಯೋಗ ಮಾಹಿತಿ, ಐಎಎಸ್‌, ಕೆಎಎಸ್‌ ಮಾದರಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಧ್ಯಯನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ.

4 ಕಂಪ್ಯೂಟರ್‌-8 ಟ್ಯಾಬ್‌, ಮಾದರಿ ಪ್ರಶ್ನೆಪತ್ರಿಕೆ
ಉಡುಪಿ ಜಿಲ್ಲಾ ಹಾಗೂ ನಗರ ಗ್ರಂಥಾಲಯದಲ್ಲಿ 4 ಕಂಪ್ಯೂಟರ್‌ ಹಾಗೂ 8 ಟ್ಯಾಬ್‌ ಇವೆೆ. ಕನ್ನಡ, ಇಂಗ್ಲಿಷ್‌, ಹಿಂದಿ ಮತ್ತಿತರ ಭಾಷೆಗಳ ಇ-ನ್ಯೂಸ್‌ ಪೇಪರ್‌, 58 ಸಾವಿರಕ್ಕೂ ಹೆಚ್ಚು ಇ-ಮ್ಯಾಗಜಿನ್ಸ್‌, 17,800 ಪುಸ್ತಕಗಳ ಸಾಫ್ಟ್ ಕಾಪಿ, ಕಥೆ, ಕವನ, ಕಾದಂಬರಿ ಸೇರಿದಂತೆ ಪ್ರಸಿದ್ಧ ಲೇಖಕರ ಕೃತಿಗಳು, ಸಾಮಾನ್ಯ ಜ್ಞಾನ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ 200ಕ್ಕೂ ಹೆಚ್ಚು ಮಾದರಿ ಪ್ರಶ್ನೆ ಪತ್ರಿಕೆಗಳು, ಸಂಬಂಧಿಸಿದಂತೆ ಅಧ್ಯಯನದ ಇ-ಪುಸ್ತಕಗಳು ಗ್ರಂಥಾಲಯದಲ್ಲಿ ಓದಲು ಲಭ್ಯ ಇವೆ.

ಪ್ರಯೋಜನ ಪಡೆದುಕೊಳ್ಳಿ
ದೇಶದಲ್ಲಿಯೇ ಕರ್ನಾಟಕ ರಾಜ್ಯ ಅತ್ಯಧಿಕ ಗ್ರಂಥಾಲಯಗಳನ್ನು ಹೊಂದಿದೆ. ಸುಮಾರು 7,000 ಗ್ರಂಥಾಲಯಗಳಿವೆ. ಡಿಜಿಟಲ್‌ ಗ್ರಂಥಾಲಯ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನಕ್ಕೆ ಪೂರಕವಾಗಿದೆ. ಸಾರ್ವಜನಿಕರು ಡಿಜಿಟಲ್‌ ಗ್ರಂಥಾಲಯದ ಪ್ರಯೋಜನ ಪಡೆದುಕೊಳ್ಳಬೇಕು.
– ಸತೀಶ್‌ ಹೊಸಮನಿ,
ನಿರ್ದೇಶಕ, ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು.

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.