ಇಂದು ರೈತ ದಿನಾಚರಣೆ : ಡಿಪ್ಲೊಮಾ ಪದವೀಧರನ ಕೈ ಹಿಡಿದ ಕೃಷಿ


Team Udayavani, Dec 23, 2018, 1:45 AM IST

diploma-krushi-22-12.jpg

ಕುಂದಾಪುರ: ಓದಿದ್ದು ಎಲೆಕ್ಟ್ರಿಕಲ್‌ ಡಿಪ್ಲೋಮಾ. ಉದ್ಯೋಗ ದೊರೆತದ್ದು ಬಿಎಸ್‌ಎನ್‌ಎಲ್‌ನಲ್ಲಿ. ಆದರೆ ಸೆಳೆದದ್ದು ಕೃಷಿ, ಕೈ ಹಿಡಿದು ಪೋಷಿಸಿ ಬೆಳೆಸಿದ್ದು ಕೃಷಿಯಲ್ಲಿನ ಆಸಕ್ತಿ. ಪರಿಣಾಮ ಇಂದು ತಾಲೂಕು, ಜಿಲ್ಲಾ ಮಟ್ಟದ ಕೃಷಿಕ ಪುರಸ್ಕಾರಗಳು ಅರಸಿ ಬರುತ್ತಿವೆ. ರಾಜ್ಯದ ನಾನಾ ಭಾಗದಿಂದ ಇವರ ಕೃಷಿಯನ್ನು ವೀಕ್ಷಿಸಲು ರೈತರು ಆಗಮಿಸುತ್ತಿದ್ದಾರೆ.

ನಷ್ಟವಿಲ್ಲ
ಅಮಾಸೆಬೈಲು ಗ್ರಾಮದ ಕೆಳಸುಂಕದ ಸತೀಶ್‌ ಹೆಗ್ಡೆ ಅವರು ಸಣ್ಣ ಜಾಗದಲ್ಲಿ ತರಹೇವಾರಿ ಕೃಷಿ ಮಾಡುವ ಮೂಲಕ ಮಾದರಿಯಾದವರು. 4 ಸಾವಿರದಷ್ಟು ಅಡಿಕೆ ಗಿಡ ಬೆಳೆಸಿದ್ದಾರೆ. ಅದಕ್ಕೆ ಕಾಳುಮೆಣಸಿನ ಬಳ್ಳಿ ಬಿಟ್ಟಿದ್ದಾರೆ. 250 ಗಿಡ ಥೈವಾನ್‌ ಪಪ್ಪಾಯಿ ಬೆಳೆಸಿದ್ದಾರೆ. ಇದು ಹತ್ತು ದಿನಕ್ಕೊಮ್ಮೆ 2 ಕ್ವಿಂಟಾಲ್‌ನಷ್ಟು ಕಟಾವಿಗೆ ಬರುತ್ತದೆ. ಸಾಮಾನ್ಯ ಪಪ್ಪಾಯಿ 3.9 ಕೆಜಿ ತೂಗುತ್ತದೆ. 6 ತಿಂಗಳಲ್ಲಿ ಫ‌ಲ ಕೊಡಲು ಆರಂಭಿಸಿದರೆ ಒಂದು ಗಿಡ 4 ವರ್ಷ ಬಾಳಿಕೆ ಬರುತ್ತದೆ. 1 ಗಿಡಕ್ಕೆ 1 ದಿನಕ್ಕೆ 1 ರೂ.ವಿನಂತೆ ಖರ್ಚು ಮಾಡಿ 1 ಕೆಜಿಗೆ 1 ರೂ.ವಿನಂತೆ ಮಾರಾಟ ಮಡಿದರೂ ಪಪ್ಪಾಯ ಬೆಳೆ ನಷ್ಟವಿಲ್ಲ ಎನ್ನುತ್ತಾರೆ ಸತೀಶ್‌ ಅವರು. ಪೂರ್ಣವಾಗಿ ಸಾವಯವ ಮಾದರಿಯ ಕೃಷಿಯನ್ನು ಅನುಸರಿಸುತ್ತಿದ್ದಾರೆ.

ಬೇಸರವಿಲ್ಲ
ಉದ್ಯೋಗದಲ್ಲಿನ ಮಾಸಿಕ ವೇತನ ಪಡೆಯದ ಕುರಿತು ಅವರಿಗೆ ಕಿಂಚಿತ್ತೂ ಬೇಸರವಿಲ್ಲ. ಒಂದೇ ಬೆಳೆಯನ್ನು ಮಾಡಿ ಬೆಲೆಯಿಲ್ಲ ಎಂದು ನಷ್ಟ ಅನುಭವಿಸುವ ಬದಲು ಏಕರೂಪದ ಕೃಷಿಯ ಬದಲು ಹತ್ತಾರು ಕೃಷಿ ಎಂಬ ಪ್ರಯೋಗಾತ್ಮಕ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಣ್ಣ ಜಾಗದಲ್ಲಿ ಬೇರೆ ಬೇರೆ ಮಿಶ್ರ ಕೃಷಿ ಮಾಡುವ ಮೂಲಕ ಕೃಷಿಯೂ ಲಾಭದಾಯಕ ಎಂದು ಅರಿವು ಮೂಡಿಸಿದ್ದಾರೆ. ಗೇರು, ಮೆಣಸು, ತೆಂಗು, ಬಾಳೆ ಬೆಳೆದ ಅವರು ಸುವರ್ಣಗಡ್ಡೆ ಬೆಳೆಸುವ ಚಿಂತನೆಯಲ್ಲಿದ್ದಾರೆ. ಸಿಹಿನೀರಿನ ಮೀನು ಸಾಕಾಣಿಕೆ ಮಾಡಬೇಕೆಂದು ಮುಂದಾಗಿ ಅದರಲ್ಲೂ ಯಶಸ್ವಿಯಾಗಿದ್ದಾರೆ. ತೋಟದ ಅಲ್ಲಲ್ಲಿ ಜೇನುಪೆಟ್ಟಿಗೆ ಇಟ್ಟಿದ್ದಾರೆ. ಸಾಂಪ್ರದಾಯಿಕ ಹೈನುಗಾರಿಕೆ, ನಾಟಿಕೋಳಿ ಸಾಕಣೆ ಎಂದು ಕೃಷಿಯ ಇಂಚಿಂಚಿನಲ್ಲೂ ತೊಡಗಿಸಿಕೊಂಡಿದ್ದಾರೆ.

ಸತೀಶ್‌ ಹೆಗ್ಡೆ ಅವರಿಗೆ ಕೃಷಿ ಜಾಗ ಹಿರಿಯರಿಂದ ಬಂದ ಬಳುವಳಿಯಲ್ಲ. 3 ಲಕ್ಷ ರೂ. ಸಾಲ ಮಾಡಿ ಖರೀದಿಸಿದ ಭೂಮಿ ಇಂದು ಹಸಿರುಸಿರಿಯಿಂದ ಕಂಗೊಳಿಸುವಂತೆ ಮಾಡಿದ್ದು ಅವರ ಬೆವರ ಹನಿ ಸೋಕಿದ್ದರ ಫ‌ಲ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷತೆ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ತೊಡಗಿಸಿಕೊಂಡು ಯೋಜನೆಯ ಪ್ರಗತಿನಿಧಿಯ ಸದುಪಯೋಗಪಡಿಸಿಕೊಂಡಿದ್ದಾರೆ. 

ಪ್ರಶಸ್ತಿ
2015ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೃಷಿ ಪ್ರಶಸ್ತಿ, 2017ರಲ್ಲಿ ಪ್ರತಿಷ್ಠಿತ ಸಬ್ಲಾಡಿ ಶೀನಪ್ಪ ಶೆಟ್ಟಿ ಕೃಷಿ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಮಾದರಿ ಕೃಷಿಕ
ಸತೀಶ್‌ ಹೆಗ್ಡೆ ಅವರು ಯೋಜನೆಯ ಸದಸ್ಯರಾಗಿದ್ದು ಮಾದರಿ ಕೃಷಿಕರಾಗಿದ್ದಾರೆ. ಯೋಜನೆ ಅನುಷ್ಠಾನಕ್ಕೆ ತಂದ ತುಂಡು ಭೂಮಿ ಹಿಂಡು ಬೆಳೆ ಕಾರ್ಯಕ್ರಮದ ಅನುಷ್ಠಾನ ಇಲ್ಲಿ ನಿಜ ಅರ್ಥದಲ್ಲಿ ಆಗಿದ್ದು ರಾಜ್ಯದ ಬೇರೆ ಬೇರೆ ಕಡೆಯಿಂದ ಇಲ್ಲಿಗೆ ಕೃಷಿ ವೀಕ್ಷಣೆಗೆ ಬರುತ್ತಾರೆ.
– ಚೇತನ್‌ ಕುಮಾರ್‌, ಕೃಷಿ ಅಧಿಕಾರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಕೃಷಿಯಲ್ಲಿ ಖುಷಿಯಿದೆ
ಕೃಷಿಯಲ್ಲಿ ಖುಷಿಯಿದೆ. ಹಾಗಾಗಿ ನನಗೆ ಇನ್ನಷ್ಟು ಪ್ರಯೋಗಾತ್ಮಕ ಕೃಷಿ, ಬೆಳೆ ಬೆಳೆಯಲು ಅನುಕೂಲವಾಗಿದೆ. ಸಣ್ಣ ಪುಟ್ಟ ಜಾಗದಲ್ಲಿ ತರಹೇವಾರಿ ಕೃಷಿ ಪ್ರಯೋಗ ಮಾಡಿ ಅದರಲ್ಲಿ ಯಶಸ್ವಿಯಾಗಬೇಕೆನ್ನುವುದೇ ನನ್ನ ಆಶಯ.
– ಸತೀಶ್‌ ಹೆಗ್ಡೆ, ಅಮಾಸೆಬೈಲು

— ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.