ಚರಂಡಿಯಲ್ಲಿ ನಿಂತ ಕೊಳಚೆ ನೀರು, ರೋಗ ಭೀತಿ
Team Udayavani, Dec 4, 2020, 8:57 AM IST
ಮಲ್ಪೆ, ಡಿ. 3: ಇಲ್ಲಿನ ಕೊಳ ರಸ್ತೆ ಹನುಮಾನ್ ನಗರದ ಸಮೀಪ ತೋಡಿನಲ್ಲಿ ಕೊಳಚೆ ನೀರು ಹಲವು ಸಮಯದಿಂದ ನಿಂತೇ ಇದ್ದು ಪರಿಸರದಲ್ಲಿ ಅಸಹನೀಯ ವಾತಾವರಣ ಸೃಷ್ಟಿಯಾಗಿದೆ.
ಕೊಳಚೆ ನೀರು ನಿಂತಿರುವುದರಿಂದ ಸೊಳ್ಳೆ ಕಾಟ ಮಿತಿ ಮೀರಿದ್ದು ಸಾಂಕ್ರಾಮಿಕ ರೋಗದ ಭಯ ಕಾಡಿದೆ. ಈ ಭಾಗದಲ್ಲಿ 100ಕ್ಕೂ ಅಧಿಕ ಮನೆಗಳಿದ್ದು ನಿವಾಸಿಗಳು ನರಕಯಾತನೆ ಅನುಭವಿಸುತ್ತಿ ದ್ದಾರೆ. ಮಾರ್ಗದಲ್ಲಿ ಸಂಚರಿಸುವ, ಬೀಚ್ಗೆ ಬರುವ ಪ್ರವಾಸಿಗರಿಗೂ ದುರ್ವಾಸನೆ ಮೂಗಿಗೆ ಬಡಿಯುತ್ತಿದೆ.
ತೋಡಿನಲ್ಲಿ ತ್ಯಾಜ್ಯರಾಶಿ :
ಕೊಳ ಹನುಮಾನ್ನಗರ ಭಾಗದಲ್ಲಿ ತೋಡಿನಲ್ಲಿ ಹರಿದು ಬರುವ ನೀರು ಮಲ್ಪೆ ಬಂದರು ಪಕ್ಕದ ತೋಡಿನ ಮೂಲಕ ಹೊಳೆಯನ್ನು ಸೇರುತ್ತವೆ. ಆದರೆ ತೋಡಿ
ನಲ್ಲಿ ತ್ಯಾಜ್ಯ ರಾಶಿಗಳು ಮತ್ತು ಹೂಳು ತುಂಬಿಕೊಂಡಿರುವುದರಿಂದ ನೀರು ಸರಿಯಾಗಿ ಹರಿದು ಹೋಗುತ್ತಿಲ್ಲ. ತ್ಯಾಜ್ಯ ತೆರವುಗೊಳಿಸುವ ಕಾರ್ಯವೂ ನಡೆದಿಲ್ಲ. ಈ ಹಿಂದೆ ನಗರಸಭೆ ಪ್ರತಿವರ್ಷ ಮಳೆಗಾಲಕ್ಕೆ ಮುನ್ನ ಇಲ್ಲಿನ ತೋಡಿನ ಹೂಳು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗುತ್ತಿತ್ತು. ಕಳೆದ ಎರಡು ವರ್ಷದಿಂದ ಈ ಕೆಲಸ ನಡೆದಿಲ್ಲ.
ಗಂಭೀರವಾಗಿ ಪರಿಗಣಿಸಿ :
ಆಡಳಿತ ಇಲ್ಲಿನ ಸಮಸ್ಯೆಯನ್ನು ಗಂಭೀರವಾಗಿ ಗಣನೆಗೆ ತೆಗೆದುಕೊಂಡು ತೋಡು ಸ್ವತ್ಛಗೊಳಿಸುವ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಇಲ್ಲಿನ ನಾಗರಿಕರು ಆಗ್ರಹಿಸಿದ್ದಾರೆ.
ಸೂಕ್ತ ಕ್ರಮ :
ರಸ್ತೆ ಬದಿಯಲ್ಲಿ ವೀಡ್ ಕಟ್ಟಿಂಗ್ ಕೆಲಸ ನಡೆಯುತ್ತಿದೆ. ಆದ್ಯತೆ ಮೇರೆಗೆ ಚರಂಡಿಗಳ ಸ್ವತ್ಛತೆ ಕೆಲಸ ಕೈಗೊಳ್ಳಲಾಗುತ್ತದೆ. ಮಲ್ಪೆ ಹನುಮಾನ್ನಗರ ಬಳಿ ಚರಂಡಿಯಲ್ಲಿ ಕೊಳಚೆ ನೀರು ನಿಂತಿರುವ ಸಮಸ್ಯೆ ಇರುವುದರಿಂದ ಶುಕ್ರವಾರವೇ ಸ್ಥಳ ಪರಿಶೀಲನೆ ಮಾಡಿ ಶೀಘ್ರ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉಡುಪಿ ನಗರಸಭೆಯ ಆರೋಗ್ಯ ನಿರೀಕ್ಷಕ ಶಶಿರೇಖಾ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು