ಸಾವಿರ ದಿವ್ಯಾಂಗರಿಗೆ ಡ್ರೈವಿಂಗ್‌ ಲೈಸೆನ್ಸ್‌ ಮಾಡಿಸಿದ ದಿವ್ಯಾಂಗ


Team Udayavani, Nov 3, 2018, 3:34 PM IST

3-november-15.gif

ಉಡುಪಿ : ಚಾಲನಾ ಪರವಾನಿಗೆ ಪಡೆಯುವುದು ದಿವ್ಯಾಂಗರಿಗೆ ಅಷ್ಟು ಸುಲಭದ ಕೆಲಸವಲ್ಲ. ಇದನ್ನು ಮನಗಂಡು ಸ್ವತಃ ದಿವ್ಯಾಂಗರಾದ ಅಂಬಲಪಾಡಿಯ ಸಾವಿರಕ್ಕೂ ಹೆಚ್ಚು ಮಂದಿಗೆ ನೆರವಾಗಿದ್ದಾರೆ. ಸುಮಾರು ನೂರು ಮಂದಿಗೆ ಉಚಿತವಾಗಿ ಡ್ರೈವಿಂಗ್‌ ತರಬೇತಿ ಕೊಡಿಸಿದ್ದೂ ಇವರ ಸಾಧನೆ.

ಉದ್ಯಾವರದ ಐಟಿಐ ಕಾಲೇಜಿನಲ್ಲಿ ಉದ್ಯೋಗದಲ್ಲಿರುವ ಜಗದೀಶ್‌ ಭಟ್‌ ಹುಟ್ಟುವಾಗ ಸಾಮಾನ್ಯ ಮಗುವಾಗಿ ಹುಟ್ಟಿದ್ದರು. ಆದರೆ 6ನೇ ವಯಸ್ಸಿಗೆ ಪೋಲಿಯೋ ಕಾಯಿಲೆಗೆ ಈಡಾಗಿದ್ದು, ಪರಿಣಾಮ ಒಂದು ಕಾಲು ಸ್ವಾಧೀನ ಕಳೆದುಕೊಂಡಿತ್ತು. ಆದರೂ ಧೃತಿಗೆಡದ ಜಗದೀಶ್‌ ಕಷ್ಟಪಟ್ಟು ಕಲಿತು ಪದವಿ ಶಿಕ್ಷಣವನ್ನು ಪೂರೈಸಿದರು. ಸ್ವಾವಲಂಬಿ ಜೀವನ ಸಾಗಿಸಬೇಕೆಂದು ದ್ವಿಚಕ್ರ ವಾಹನ ಚಾಲನಾ ತರಬೇತಿಯನ್ನೂ ಪಡೆದರು.

ಚಾಲನಾ ಪರವಾನಿಗೆ ಪಡೆಯಲು ನೆರವು
ದೈಹಿಕವಾಗಿ ಸೂಕ್ಷ್ಮವಾಗಿರುವ ವಿಕಲ ಚೇತನರಿಗೆ ವಾಹನ ತರಬೇತಿ ನೀಡಲು ಸಾಮಾನ್ಯವಾಗಿ ಯಾರೂ ಧೈರ್ಯ ಮಾಡುವುದಿಲ್ಲ. ಇದರಿಂದ ಸಾಕಷ್ಟು ಜನರಿಗೆ ವಾಹನ ತರಬೇತಿ ಪಡೆಯುವ ಕನಸು ಈಡೇರುವುದೇ ಇಲ್ಲ. ಇದಕ್ಕೊಂದು ಪರಿಹಾರ ನೀಡಬೇಕೆಂದು ಸ್ವತಃ ತರಬೇತಿ ನೀಡಲು ನಿಂತರು. ನೂರಕ್ಕೂ ಅಧಿಕ ಮಂದಿ ವಿಕಲಚೇತನರಿಗೆ ಯಾವುದೇ ಪ್ರತಿಫ‌ಲಾಪೇಕ್ಷೆ ಇಲ್ಲದೆ ವಾಹನ ತರಬೇತಿ ನೀಡಿರುವ ಇವರು, ಸುಮಾರು ಸಾವಿರಕ್ಕೂ ಮಿಕ್ಕಿ ವಿಕಲಚೇತನರಿಗೆ ಮತ್ತು ಪರವಾನಿಗೆ ಮಾಡಿಕೊಟ್ಟಿದ್ದಾರೆ. ಎಷ್ಟೋ ಜನ ವಿಕಲಚೇತನರು ಆರ್‌ಟಿಒ ಕಚೇರಿಗೆ ತೆರಳಿದ ಸಂದರ್ಭ ವಾಹನ ಪರವಾನಿಗೆ ಮಾಡಿಸಿಕೊಳ್ಳಲು ಕಷ್ಟಪಡುತ್ತಾರೆ ಆ ಸಂದರ್ಭ ಆರ್‌ಟಿಒ ಸಿಬಂದಿಯೇ ಇವರ ದೂರವಾಣಿ ಸಂಖ್ಯೆ ನೀಡಿ ಇವರ ಸಹಕಾರ ಪಡೆಯಲು ತಿಳಿಸುತ್ತಾರೆ.

ಯಕ್ಷಗಾನ, ಹುಲಿವೇಷದ ಆಸಕ್ತಿ
ಜಿಲ್ಲಾ ವಿಕಲಚೇತನರ ಒಕ್ಕೂಟದ ಉಪಾಧ್ಯಕ್ಷರೂ ಕೂಡ ಆಗಿರುವ ಇವರು, ಹಲವಾರು ಮಂದಿ ದಿವ್ಯಾಂಗರಿಗೆ ಕಾನೂನು, ಸವಲತ್ತು ಮಾಹಿತಿ ನೀಡುತ್ತಾರೆ. ಇದೀಗ ದಿವ್ಯಾಂಗರ ಯಕ್ಷಗಾನ ತಂಡವೊಂದನ್ನು ಕಟ್ಟಿಕೊಂಡು ವಿವಿಧೆಡೆ ಪ್ರದರ್ಶನ ನೀಡಿದ್ದಾರೆ. ಪ್ರತಿ ವರ್ಷ ಕೃಷ್ಣಾಷ್ಟಮಿಗೆ ಹುಲಿವೇಷ ಕುಣಿಯುತ್ತಾರೆ. ಈ ಹಿಂದೆ ವೇಷ ಹಾಕಿದ್ದ ಸಂದರ್ಭ ಶ್ರೀ ಶೀರೂರು ಮಠದ ಲಕ್ಷ್ಮೀವರತೀರ್ಥ ಶ್ರೀಪಾದರೂ ಇವರ ಜೀವನೋತ್ಸಾಹ ಕೊಂಡಾಡಿದ್ದರು.

ಪ್ರತಿಭೆಗೆ ಪ್ರೋತ್ಸಾಹ ನೀಡಿ
ದಿವ್ಯಾಂಗರಲ್ಲಿ ಸಾಕಷ್ಟು ಮಂದಿ ಪ್ರತಿಭಾನ್ವಿತರಿದ್ದಾರೆ. ಇವರಿಗೆ ಸೂಕ್ತ ಬೆಂಬಲ, ಪ್ರೋತ್ಸಾಹ ಸಿಗುತ್ತಿಲ್ಲ. ಅವರನ್ನು ಅನುಕಂಪದ ದೃಷ್ಟಿಯಿಂದ ನೋಡುವ ಬದಲು ಸಾಮಾನ್ಯ ದೃಷ್ಟಿಯಿಂದ ನೋಡಿ ಪ್ರೋತ್ಸಾಹಿಸಿ’
– ಜಗದೀಶ್‌ ಭಟ್‌, ದಿವ್ಯಾಂಗ

ಹಲವರಿಗೆ ತರಬೇತಿ
ಹಲವಾರು ವಿಕಲಚೇತನರಿಗೆ ವಾಹನ ಚಾಲನಾ ತರಬೇತಿ ಮತ್ತು ಪರವಾನಿಗೆ ಮಾಡಿಸಿಕೊಟ್ಟಿದ್ದಾರೆ. ಯಾರಿಂದಲೂ ಹಣವನ್ನು ಪಡೆದಿಲ್ಲ. ನಾನೇ ಹಲವು ಮಂದಿ ವಿಕಲಚೇತನರಿಗೆ ಇವರ ಮೂಲಕ ಲೈಸೆನ್ಸ್‌ ಮಾಡಿಸಿಕೊಟ್ಟಿದ್ದೇನೆ’.
ವಿಲ್ಫ್ರೆಡ್ ಡ್‌ ಗೋಮ್ಸ್‌,
  ಅಧ್ಯಕ್ಷರು, ವಿಕಲಚೇತನ ಒಕ್ಕೂಟ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.