ವಿಪತ್ತು ನಿರ್ವಹಣೆಗೆ ಸಜ್ಜಾಗಲಿರುವ 300 ಮಂದಿ ಸ್ವಯಂಸೇವಕರು

ಅಪದ ಮಿತ್ರ ಯೋಜನೆಯಡಿ 12 ದಿನಗಳ ತರಬೇತಿ

Team Udayavani, Jun 21, 2022, 9:30 AM IST

ವಿಪತ್ತು ನಿರ್ವಹಣೆಗೆ ಸಜ್ಜಾಗಲಿರುವ 300 ಮಂದಿ ಸ್ವಯಂಸೇವಕರು

ಉಡುಪಿ : ವಿಪತ್ತು ನಿರ್ವಹಣೆಗೆ ಸ್ಥಳೀಯರನ್ನೇ ಸಕ್ರಿಯವಾಗಿ ಬಳಸಿ ಕೊಳ್ಳಲು “ಅಪದ ಮಿತ್ರ’ ಯೋಜನೆಯಡಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ 300 ಸ್ವಯಂ ಸೇವಕರಿಗೆ ತರಬೇತಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮೂರು ಬ್ಯಾಚ್‌ಗಳಲ್ಲಿ ತಲಾ 100 ಸ್ವಯಂಸೇವಕರಿಗೆ ಉಡುಪಿಯ ಬ್ರಹ್ಮಗಿರಿಯಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಪ್ರಗತಿ ಸೌಧದಲ್ಲಿ ಜೂ. 20ರಿಂದ ತರಬೇತಿ ಆರಂಭವಾಗಿದೆ. ಜಿಲ್ಲಾಡಳಿತ, ಅಗ್ನಿಶಾಮಕ ದಳ, ಜಿಲ್ಲಾ ವಿಪತ್ತು ನಿರ್ವಹಣ ಘಟಕದ ಜಂಟಿ ಆಶ್ರಯದಲ್ಲಿ ಈ ತರಬೇತಿಯನ್ನು ನೀಡಲಾಗುತ್ತಿದೆ. ತರಬೇತಿ ಪಡೆದು ಸ್ವಯಂಸೇವಕರಿಗೆ ವಿಪತ್ತು ನಿರ್ವಹಣೆ ಸಂದರ್ಭದಲ್ಲಿ ಸೂಕ್ತ ಸ್ಪಂದನೆಗೆ ಬೇಕಾದ ಕಿಟ್‌ ಕೂಡ ನೀಡಲಾಗುತ್ತದೆ.

ವಿಪತ್ತು ಸಂಭವಿಸಿದ ಸಂದರ್ಭ ಅಗ್ನಿಶಾಮಕ ದಳದ ಸಿಬಂದಿ ಅಥವಾ ವಿಪತ್ತು ನಿರ್ವಹಣ ಘಟಕದ ಸಿಬಂದಿ, ಪೊಲೀಸ್‌, ಸೇನೆ ಇತ್ಯಾದಿ ತತ್‌ಕ್ಷಣ ಆಗಮಿಸುವುದು ಕಷ್ಟಸಾಧ್ಯ. ಸ್ಥಳೀಯರನ್ನೇ ಸಜ್ಜುಗೊಳಿಸಿದಾಗ ಆರಂಭಿಕವಾಗಿ ಏನೇನು ಮಾಡಬೇಕು ಅದನ್ನು ಅವರು ಮಾಡಲಿದ್ದಾರೆ. ಅನಂತರದಲ್ಲಿ ಭದ್ರತಾ ಸಿಬಂದಿ ವರ್ಗ ಅವರೊಂದಿಗೆ ಜೋಡಿಸಿಕೊಳ್ಳಲಿದೆ. ಆದಷ್ಟು ಶೀಘ್ರದಲ್ಲಿ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳುವ ಜತೆಗೆ ಪ್ರಾಣಹಾನಿಯಾಗದಂತೆ ಎಚ್ಚರ ವಹಿಸುವುದು ತರಬೇತಿಯ ಮೂಲ ಉದ್ದೇಶವಾಗಿದೆ.

ಇದೇ ಮೊದಲ ಬಾರಿಗೆ ತರಬೇತಿ
ಅಪದ ಮಿತ್ರ ಯೋಜನೆಯನ್ನು ರಾಜ್ಯ ಸರಕಾರ ಜಾರಿಗೆ ತಂದಿದೆ. ಪ್ರತೀ ತರಬೇತಿ 12 ದಿನಗಳದ್ದಾಗಿರುತ್ತದೆ. ತರಬೇತಿ ಸಂದರ್ಭ ಊಟ, ತಿಂಡಿ ಹಾಗೂ ವಸತಿ ಒದಗಿಸಲಾಗುತ್ತದೆ. ತರಬೇತಿ ಪಡೆದವರನ್ನು ವಿಪತ್ತು ನಿರ್ವಹಣ ಘಟಕ ನಿರಂತರ ಸಂಪರ್ಕ ದಲ್ಲಿಟ್ಟುಕೊಳ್ಳಲಿದ್ದು, ಯಾವುದೇ ಸಂದರ್ಭದಲ್ಲಿ ವಿಪತ್ತು ಸಂಭವಿಸಿದಾಗ ಅವರಿಗೆ ಮಾಹಿತಿ ಒದಗಿಸಲಾಗುತ್ತದೆ ಮತ್ತು ಸ್ವಯಂಸೇವಕರಿಂದಲೂ ಮಾಹಿತಿ ಪಡೆಯಲಾಗುತ್ತದೆ.

ಏನೇನು ತರಬೇತಿ?
ಭೂ ಕುಸಿತ, ಪ್ರವಾಹ, ಕಟ್ಟಡ ಕುಸಿತ, ಕಡಲ್ಕೊರೆತ ಸಹಿತ ಪ್ರಕೃತಿ ವಿಕೋಪದಿಂದ ದುರಂತ ಸಂಭವಿಸಿದ ಸಂದರ್ಭ ಪ್ರಾಥಮಿಕವಾಗಿ ಏನೇನು ಮಾಡಬೇಕು ಎಂಬುದರ ತರಬೇತಿ ನೀಡಲಾಗುತ್ತದೆ. ವಿಪತ್ತು ಸಂಭವಿಸಿದಾಗ ಸ್ಥಳೀಯರು ಭಯಭೀತರಾಗದಂತೆ ಅವರನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸುವುದು, ಸಾರ್ವಜನಿಕರೊಂದಿಗೆ ಹೇಗೆ ವರ್ತಿಸಬೇಕು ಮತ್ತು ಇಲಾಖೆ ಅಥವಾ ಭದ್ರತಾ ಸಿಬಂದಿಯೊಂದಿಗೆ ಸಮನ್ವಯ ಸಾಧಿಸುವುದು ಹೇಗೆ ಎಂಬಿತ್ಯಾದಿ ಹಲವು ಮಾಹಿತಿಯನ್ನು ನೀಡಲಾಗುತ್ತದೆ. ನೆರೆಯ ಸಂದರ್ಭ ಬೋಟ್‌ನಲ್ಲಿ ಸಾಗಿ ಪರಿಹಾರ ಕಾರ್ಯಾಚರಣೆ ನಡೆಸುವುದನ್ನು ಕಲಿಸಿಕೊಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಗುರುತಿಸಿರುವ ಸ್ವಯಂಸೇವಕರು
ಉಡುಪಿ ಜಿ.ಪಂ.ನಿಂದ 85, ಜಿಲ್ಲಾ ಪೊಲೀಸ್‌ ಅಧೀಕ್ಷಕರ ಕಚೇರಿಯಿಂದ 26, ಕರಾವಳಿ ಕಾವಲು ಪಡೆಯಿಂದ 20, ಮೀನುಗಾರಿಕೆ ಇಲಾಖೆಯಿಂದ 8, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ 34, ಭಾರತ್‌ ಸ್ಕೌಡ್ಸ್‌ ಮತ್ತು ಗೈಡ್ಸ್‌ನಿಂದ 72, ಗೃಹ ರಕ್ಷಕ ದಳದಿಂದ 35, ಸೈನಿಕ ಕಲ್ಯಾಣ ಮತ್ತು ಪುನರ್‌ ವಸತಿ ಇಲಾಖೆಯಿಂದ 10 ಹಾಗೂ ನೆಹರೂ ಯುವ ಕೇಂದ್ರದಿಂದ 11 ಸ್ವಯಂಸೇವಕರನ್ನು ಈಗಾಗಲೇ ಗುರುತಿಸಿ ಜಿಲ್ಲಾಡಳಿತದಿಂದ ಅಗ್ನಿಶಾಮಕ ದಳಕ್ಕೆ ಪಟ್ಟಿಯನ್ನು ರವಾನಿಸಲಾಗಿದೆ.

ವಿಪತ್ತು ನಿರ್ವಹಣೆಗೆ ಇದೇ ಮೊದಲ ಬಾರಿಗೆ ಅಪದ ಮಿತ್ರ ಯೋಜನೆಯಡಿ 300 ಸ್ವಯಂಸೇವಕರಿಗೆ ತರಬೇತಿ ನೀಡಲಾಗುತ್ತಿದೆ. ವಿವಿಧ ಇಲಾಖೆಯಿಂದ ಸ್ವಯಂಸೇವಕರನ್ನು ಗುರುತಿಸುವ ಪ್ರಕ್ರಿಯೆಯೂ ನಡೆಯುತ್ತಿದೆ.

– ವಸಂತ ಕುಮಾರ್‌ ಎಚ್‌.ಎಂ., ಜಿಲ್ಲಾ ಅಗ್ನಿಶಾಮಕ ಅಧಿಕಾರಿ, ಉಡುಪಿ

– ರಾಜು ಖಾರ್ವಿ ಕೊಡಿರಿ

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.