ಕಳಸದ ಬಸದಿಯಲ್ಲಿ ಜೈನ ಶಾಸನ ಪತ್ತೆ


Team Udayavani, Sep 12, 2019, 5:24 AM IST

KALASA

ಶಿರ್ವ: ಚಿಕ್ಕಮಗಳೂರು ಜಿಲ್ಲೆ ಕಳಸದ ಚಂದ್ರನಾಥ ತೀರ್ಥಂಕರರ ಬಸದಿಯಲ್ಲಿನ ಒಂದು ಚಿಕ್ಕ ಚಂದ್ರನಾಥ ತೀರ್ಥಂಕರರ ಪ್ರತಿಮೆಯ ಹಿಂಭಾಗದಲ್ಲಿ ಜೈನ ಶಾಸನವೊಂದು ಪತ್ತೆಯಾಗಿದೆ. ಈ ಪುಟ್ಟ ಶಾಸನದಲ್ಲಿ ಪ್ರತಿ ಸಾಲನ್ನು ಒಂದು ಸೊನ್ನೆಯಿಂದ ಆರಂಭಿಸಲಾಗಿದೆ.

ಕನ್ನಡ ಲಿಪಿ ಮತ್ತು ಭಾಷೆಯ 10 ಸಾಲಿನ ಶಾಸನದಲ್ಲಿ ಕಿವಿಯಲಿ ಕೇಳಿ, ಕಂಣಲಿ ನೋಡಿದ ಪಾಪಕೆ ಪ್ರಾಯಶ್ಚಿತ್ತವಾಗಿ ಪ್ರತಿ ಚಂದ್ರನಾಥನ ಅಂದರೆ, ಮೂಲ ಚಂದ್ರನಾಥ ವಿಗ್ರಹದ ಪ್ರತಿರೂಪದ ಚಿಕ್ಕ ಪ್ರತಿಮೆಯನ್ನು ಮಾಡಿಸಲಾಯಿತು ಎಂದು ಶಾಸನದಲ್ಲಿ ಹೇಳಲಾಗಿದೆ ಎಂದು ಶಿರ್ವದ ಮುಲ್ಕಿ ಸುಂದರ್‌ ರಾಮ್‌ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಮುಖ್ಯಸ್ಥ ಪೊ| ಟಿ.ಮುರುಗೇಶಿ ತಿಳಿಸಿದ್ದಾರೆ.

ಶಾಸನದ ಆರಂಭದಲ್ಲಿಯೇ, ಅಂಗೀರಸ ಸಂವತ್ಸರ, ಆಷಾಢ ಶುದ್ಧ ದಶಮಿ ಮೂರು ಎಂದು ಕಾಲವನ್ನು ಉಲ್ಲೇಖೀಸಲಾಗಿದೆ. ಇದು ಕ್ರಿ.ಶ. 1512 ಜು.2 ಶುಕ್ರವಾರಕ್ಕೆ ಸರಿಹೊಂದುತ್ತದೆ. ಶಾಸನದಲ್ಲಿ ಕಳಸದ ದೇವಚಂದ್ರ ಜೈನ ಮುನಿಗಳನ್ನು ಹೆಸರಿಸಲಾಗಿದೆ. ಇದೇ ಬಸದಿಯ ಪ್ರಧಾನ ಅಧಿದೇವತೆಯಾದ ಚಂದ್ರನಾಥ ವಿಗ್ರಹದ ಎರಡೂ ಪಾರ್ಶ್ವಗಳಲ್ಲಿ ಬರೆದ ಶಾಸನದಲ್ಲಿ ಮೂಲಸಂಘ, ಪನಸೋಗೆ ಬಳಿ,ದೇಶೀಯ ಗಣ, ಪುಸ್ತಕ ಗಚ್ಚ, ಕುಂದ ಕುಂದಾನ್ವಯ ಲಲಿತಕೀರ್ತಿ ದೇವರ ಶಿಷ್ಯರಾಗಿದ್ದ ದೇವಚಂದ್ರ ದೇವರು ಈ ವಿಗ್ರಹವನ್ನು ಪ್ರತಿಷ್ಠಾಪಿಸಿದ ವಿಷಯವನ್ನು ಹೇಳ ಲಾಗಿದೆ.ಪ್ರಮುಖ ಜೈನ ತೀರ್ಥಕ್ಷೇತ್ರಗಳಲ್ಲಿ ಕಳಸವನ್ನೂ ಹೆಸರಿಸಲಾಗಿದೆ.

ಈ ಶಾಸನವನ್ನು ಪತ್ತೆ ಹಚ್ಚುವಲ್ಲಿ ಹಂಪೆ ಕನ್ನಡ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿನಿ ಕಳಸದ ಸುಪ್ರೀತಾ ಕೆ. ಎನ್‌. ಹಾಗೂ ಕಳಸದ ಚಂದ್ರನಾಥ ಬಸದಿಯ ಅರ್ಚಕ ಅಜಿತ್‌ ಸಹಕರಿಸಿದ್ದಾರೆ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.