ತಡೆ ತೆರವಿಗೆ ಎಸಿಯೊಂದಿಗೆ ಚರ್ಚಿಸಿ ಕ್ರಮ : ಡಿವೈಎಸ್ಪಿ
Team Udayavani, Jun 7, 2019, 6:12 AM IST
ಕುಂದಾಪುರ: ಬೈಂದೂರು – ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಗಮ್ ಜಂಕ್ಷನ ಬಳಿ ಆನಗಳ್ಳಿಯಿಂದ ಕುಂದಾಪುರಕ್ಕೆ ಸಂಚರಿಸುವ ರಸ್ತೆಗೆ ಹಾಕಿರುವ ತಡೆಯನ್ನು ತೆರವುಗೊಳಿಸುವ ಸಂಬಂಧ ಎಸಿಯವರ ಬಳಿ ಚರ್ಚಿಸಿ, ಸೂಕ್ತವಾದ ಕ್ರಮ ಕೈಗೊಳ್ಳಲಾಗುವುದು ಎಂದು ಕುಂದಾಪುರದ ಡಿವೈಎಸ್ಪಿ ಬಿ.ಪಿ. ದಿನೇಶ್ ಕುಮಾರ್ ಅವರು ಹೇಳಿದರು.
ಗುರುವಾರ ಇಲ್ಲಿನ ಶಶಿಧರ ಹೋಟೆಲ್ನಲ್ಲಿ ನಡೆದ ಸಂಗಮ್ ಪರಿಸರದ ಸಾರ್ವಜನಿಕರೊಂದಿಗಿನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಡಾ| ಮಧುಕೇಶ್ವರ್ ಅವರೊಂದಿಗೆ ಜೂ. 10 ರಂದು ಭೇಟಿ ಮಾಡಿ, ಅವರಿಗೂ ಈ ವಿಚಾರದ ಕುರಿತು ಮನವರಿಕೆ ಮಾಡಿಕೊಡಲಾಗುವುದು. ಆ ಬಳಿಕ ಅವರ ಸಮಕ್ಷಮದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಇದೇ ವೇಳೆ ಸಂಗಮ್ ಪರಿಸರದ ಜನರು ತಮಗೆ ರಸ್ತೆಗೆ ತಡೆ ಹಾಕಿರುವುದರಿಂದ ಆಗುತ್ತಿರುವ ತೊಂದರೆಗಳ ಕುರಿತು ಗಮನ ಸೆಳೆದರು.
ಹೆದ್ದಾರಿಯಲ್ಲಿ ತಾತ್ಕಲಿಕವಾಗಿ ಅಂದರೆ ಹಳೆ ಸೇತುವೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಹಂಪ್ ಹಾಕಿ, ವಾಹನಗಳ ವೇಗ ತಡೆದರೆ, ಅಪಘಾತ ಸಂಭವಿಸುವ ಸಾಧ್ಯತೆ ಕಡಿಮೆ. ಆ ಬಳಿಕ ಇಲ್ಲಿನ ತಡೆಯನ್ನು ತೆರವುಗೊಳಿಸಬಹುದು ಎಂದು ಒತ್ತಾಯಿಸಿದರು.
ಇದಕ್ಕೆ ಸಮ್ಮತಿಸಿದ ಡಿವೈಎಸ್ಪಿಯವರು, ಹೆದ್ದಾರಿಯಲ್ಲಿ ಹಂಪ್ ಹಾಕುವ ಕ್ರಮ ಇಲ್ಲದಿದ್ದರೂ, ತಾತ್ಕಲಿಕವಾಗಿ ಹಾಕಿ ಎಂದು ಐಆರ್ಬಿ ಅಧಿಕಾರಿಗಳಿಗೆ ಸೂಚಿಸಿದ ಅವರು, 15 ದಿನದೊಳಗೆ ಹಳೆ ಸೇತುವೆ ದುರಸ್ತಿ ಕಾಮಗಾರಿಗೆ ಗಡುವು ನೀಡಿದ್ದರೂ, ಇನ್ನೂ ಪೂರ್ಣಗೊಂಡಿಲ್ಲ. ಇನ್ನು ಯಾವಾಗ ಮಾಡುವುದು. ಮಳೆಗಾಲದಲ್ಲೂ ಕಷ್ಟ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಹಳೆ ಸೇತುವೆ ದುರಸ್ತಿಗೆ ಹೊಸ ಸೇತುವೆ ಕಾಮಗಾರಿಗಿಂತಲೂ ಹೆಚ್ಚಿನ ಸಮಯ ತೆಗೆದುಕೊಂಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದರು.
ಸಭೆಯಲ್ಲಿ ಸಂಚಾರಿ ಠಾಣಾ ಎಸ್ಐ ಸುಧಾ ಅಘನಾಶಿನಿ, ಐಆರ್ಬಿ ಅಧಿಕಾರಿ ಸಂದೀಪ್, ದಿವಾಕರ ಕಡ್ಗಿಮನೆ, ಶ್ರೀಧರ್ ಶೇರಿಗಾರ್, ಸುನೀಲ್ ಶೆಟ್ಟಿ ಹೇರಿಕುದ್ರು, ಗಣೇಶ್ ಸಂಗಮ್, ರಾಜೇಶ, ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024
Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ
Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ
ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′
Udupi: ವಿಡಿಯೋ ಕರೆ ರೆಕಾರ್ಡ್ ಮಾಡಿ ಹಣಕ್ಕೆ ಬೇಡಿಕೆ
MUST WATCH
ಹೊಸ ಸೇರ್ಪಡೆ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ