ಉಡುಪಿಯಲ್ಲಿ 16 ಸಾವಿರ ಬಿಪಿಎಲ್ ಕಾರ್ಡ್ ವಿತರಣೆ
Team Udayavani, Jul 22, 2017, 8:25 AM IST
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ 4 ವರ್ಷಗಳಿಂದ 16 ಸಾವಿರ ಬಡಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ವಿತರಿಸಲಾಗಿದೆ. ಈಗ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಕೆ ವಿಧಾನವನ್ನು ಸುಲಭಗೊಳಿಸಲಾಗಿದೆ. ಆಧಾರ್ ಕಾರ್ಡ್, ವಾರ್ಷಿಕ ಆದಾಯ1.20 ಲ. ರೂ. ಹಾಗೂ 1000 ಚದರಡಿಯೊಳಗಿದ್ದವರು ಬಿಪಿಎಲ್ ಕಾರ್ಡ್ ಪಡೆಯಬಹುದು ಎಂದು ಮೀನು ಗಾರಿಕಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಪರ್ಕಳದ ವಿಘ್ನೇಶ್ವರ ಸಭಾಭವನ ದಲ್ಲಿ ಶುಕ್ರವಾರ ನಡೆದ ನಗರಸಭಾ ವ್ಯಾಪ್ತಿಯ ಪರ್ಕಳ ವಾರ್ಡಿನ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮನೆಯಿಲ್ಲದವರಿಗೆ ಮನೆ ಕಟ್ಟಲು 2.70 ಲ. ರೂ. ಹಾಗೂ ಎಸ್ಸಿ ಹಾಗೂಎಸ್ಟಿ ವರ್ಗದವರಿಗೆ 3.30 ಲ. ರೂ.
ಅನುದಾನ ನೀಡಲಾಗುತ್ತಿದೆ.ಹೆರ್ಗದಲ್ಲಿ 10 ಎಕರೆ ಸೈಟ್ಗುರುತಿಸ ಲಾಗಿದ್ದು, ವಸತಿ ರಹಿತ 400 ಮಂದಿಗೆ 2 ತಿಂಗಳೊಳಗೆ ಅದನ್ನು ನೀಡಲಾಗುವುದು ಎಂದರು.
ಛೀಮಾರಿ ಹಾಕಿದ್ರೂ ಬಸ್ ನಿಲ್ಲಿಸಲ್ಲ
ಖಾಸಗಿಯವರ ಭಾರೀ ಲಾಬಿ ನಡುವೆಯೂ ಜಿಲ್ಲೆಗೆ ತಂದಿರುವ ಜೆ- ನರ್ಮ್ಬಸ್ಗಳ ಪರವಾನಿಗೆಗೆ ಹೈಕೋರ್ಟ್ ತಡೆ ನೀಡಿದ್ದು, ಸದ್ಯ ಕೋರ್ಟ್ ಆರ್ಟಿಎಗೆ ಪುನರ್ ಪರಿಶೀಲನೆಗೆ ಅವಕಾಶ ನೀಡಿದೆ. ಈಗ ಜಿಲ್ಲಾಧಿಕಾರಿಯವರು ಎಲ್ಲ 55 ಬಸ್ಗಳಿಗೂ ತಾತ್ಕಾಲಿಕ ಪರ್ಮಿಟ್ ನೀಡಿ ಶೀಘ್ರ ಆದೇಶ ಹೊರಡಿಸಲಿದ್ದಾರೆ. ಹಿರಿಯರು, ಮಕ್ಕಳಿಗೆ, ಜನ ಸಾಮಾನ್ಯರಿಗೆ ನರ್ಮ್ ಬಸ್ನಿಂದ ಸಾಕಷ್ಟು ಅನುಕೂಲವಾಗು ತ್ತಿದೆ. ಹೈಕೋರ್ಟ್ ಛೀಮಾರಿ ಹಾಕಿ ದರೂ ಬಸ್ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಹೇಳಿದರು.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹಮೂರ್ತಿ, ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಸದಸ್ಯರಾದ ಸುಮಿತ್ರಾ ಆರ್. ನಾಯಕ್, ಜನಾರ್ದನ ಭಂಡಾರ್ಕರ್, ನಾರಾಯಣ ಕುಂದರ್, ಗಣೇಶ್ ನೆರ್ಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ, ಉಡುಪಿ ತಹಶೀಲ್ದಾರ್ ಮಹೇಶ್ಚಂದ್ರ, ಸರ್ಕಲ್ ಇನ್ಸ್ಪೆಕ್ಟರ್ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ಪೌರಾಯುಕ್ತ ಡಿ. ಮಂಜುನಾಥಯ್ಯ ಸ್ವಾಗತಿಸಿದರು. ಸುಧಾಕರ್ ಪೆರಂಪಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಸುಧಾಕರ್ ಶೆಟ್ಟಿ ವಂದಿಸಿದರು.
ಪರ್ಕಳ ರಸ್ತೆ : ಕೇಂದ್ರಕ್ಕೆ ಪ್ರಸ್ತಾವನೆ
ಪರ್ಕಳ- ಮಣಿಪಾಲ ರಸ್ತೆ ಅವ್ಯವಸ್ಥೆ ಬಗ್ಗೆ ಮಾತನಾಡಿದ ಸಚಿವ ಪ್ರಮೋದ್ ಅವರು ಮಲ್ಪೆಯಿಂದ ತೀರ್ಥಹಳ್ಳಿಯವರೆಗಿನ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿದ್ದು, ಇದರ ಸಂಪೂರ್ಣ ನಿರ್ವಹಣೆ ಕೇಂದ್ರ ಸರಕಾರದ್ದಾಗಿದೆ. ಅದಾಗಿಯೂ ಜನರ ಸಂಚಾರಕ್ಕೆ ತೊಂದರೆಯಾಗಿರುವುದರಿಂದ ಶೀಘ್ರ ದುರಸ್ತಿಗೆ ರಾಜ್ಯದಿಂದ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಇದೇ ವೇಳೆ ಬೆಂಗಳೂರಿನಿಂದ ಆಗಮಿಸಿದ್ದ ರಾಷ್ಟ್ರೀಯ ಹೆದ್ದಾರಿ ಪಿಡಬ್ಲೂéಡಿ ಮುಖ್ಯ ಎಂಜಿನಿಯರ್ ಸಭೆಗೆ ಮಾಹಿತಿ ನೀಡಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಮಳೆ ಕಡಿಮೆಯಾದ ತತ್ಕ್ಷಣ ಕಾಮಗಾರಿ ಆರಂಭಿಸಲಾಗುವುದು ಎಂದರು. ಸದ್ಯ ಹೊಂಡ ಮುಚ್ಚಲು ಕ್ರಮ ಕೈಗೊಳ್ಳಿ ಎಂದು ಸಚಿವರು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು