ಹೊಯ್ಸಳ -ಕೆಳದಿ ಚೆನ್ನಮ್ಮ ಪ್ರಶಸ್ತಿ ವಿತರಣೆ
Team Udayavani, May 10, 2019, 6:30 AM IST
ಉಡುಪಿ: ಜಿಲ್ಲೆಯಲ್ಲಿ ಅಸಾಧಾರಣ ಸಾಧನೆ ತೋರಿದ 14 ಮಕ್ಕಳಿಗೆ 2018-19 ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಜಿ.ಪಂ. ಸಿಇಒ ಸಿಂಧೂ ಬಿ. ರೂಪೇಶ್ ಬಾಲಭವನದಲ್ಲಿ ಪ್ರದಾನ ಮಾಡಿದರು.
ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಹಯೋಗದಲ್ಲಿ ಗುರುವಾರ ನಡೆದ ಬೇಸಗೆ ಶಿಬಿರದ ಸಮಾರೋಪ ಸಮಾರಂಭ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಶಿಕ್ಷಣದ ಜತೆಗೆ ಪಠ್ಯೇಟರ ಚಟುವಟಿಕೆಯಲ್ಲಿ ತೊಡಿಗಿಸಿಕೊಂಡಾಗ ವ್ಯಕ್ತಿತ್ವ ವಿಕಾಸವಾಗುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಗೆ ಶಿಬಿರ ಸಹಾಯಕ ಎಂದರು.
ಬೇಸಗೆ ಶಿಬಿರಕ್ಕೆ 75 ಮಕ್ಕಳು ದಾಖಲಾಗಿದ್ದು, ಮಕ್ಕಳಿಗೆ ಚಿತ್ರಕಲೆ, ಸಂಗೀತ,ಯೋಗ, ಕರಾಟೆ, ನೃತ್ಯ ತರಬೇತಿ ನೀಡಲಾಗಿದೆ. ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಅನಂತರ ನಡೆದ ಅಭಿರಂಗ ಮಕ್ಕಳ ನಾಟಕೋತ್ಸವದಲ್ಲಿ ಕಪ್ಪುಕಾಗೆಯ ಹಾಡುಗಳು ಮತ್ತು ಜೈ ಬೇತಾಳ ಎಂಬ ಸಾಮಾಜಿಕ ನಾಟಕವನ್ನು ಮಕ್ಕಳು ಪ್ರದರ್ಶಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಶಿಕ್ಷಣಾಧಿಕಾರಿ ಜಾಹ್ನವಿ, ಜಿಲ್ಲಾ ತಾ.ಶಿಶು ಅಭಿವೃದ್ದಿಯೋಜನಾಧಿಕಾರಿ ವೀಣಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾ ಉಪಸ್ಥಿತರಿದ್ದರು.
ವಿದ್ಯಾರ್ಥಿ ಅಮೃತ್ ಸ್ವಾಗತಿಸಿದರು, ಅಬ್ದುಲ್ಲಾ ಕಾರ್ಯಕ್ರಮ ನಿರ್ವಹಿಸಿದರು.
ಪ್ರಶಸ್ತಿ ವಿಜೇತರು
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಕ್ರೀಡೆ – ತನುಶ್ರೀ, ಮನೋಜ್, ಕಲಾ ವಿಭಾಗ- ಪಾವನ ಐತಾಳ್, ಆದರ್ಶ ಭಟ್, ಸಂಗೀತ ವಿಭಾಗ- ಮಹತಿ. ರಕ್ಷಿತ್ಆರ್. ಭಟ್, ನಾವೀನ್ಯತೆ ವಿಭಾಗ- ಸೃಜನ್ , ಉದ್ಭ ಯು. ಶೆಟ್ಟಿ, ಸಾಂಸ್ಕೃತಿಕ ಭಾಗ- ಅಭಿನವ, ವೀಣಾ, ತಾರ್ಕಿಕ ವಿಭಾಗ ದೀûಾ ಹೋಬಳಿದಾರ್, ನಚಿಕೇತ ನಾಯಕ್, ಸಮಾಜ ಸೇವೆಯಲ್ಲಿ ಸುಖೇಶ್ ರಚಿತ ಅವರಿಗೆ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್