3 ಝೋನ್‌ಗಳಿಗೆ ನಿಗದಿತ ಅವಧಿಯಲ್ಲಿ ನೀರು ವಿತರಣೆ

ಬಜೆ ಡ್ಯಾಂನಲ್ಲಿ ಸಾಕಷ್ಟು ನೀರು

Team Udayavani, Mar 5, 2020, 5:05 AM IST

3 ಝೋನ್‌ಗಳಿಗೆ ನಿಗದಿತ ಅವಧಿಯಲ್ಲಿ ನೀರು ವಿತರಣೆ

ಉಡುಪಿ: ನಗರಕ್ಕೆ ನೀರು ಣಿಸುವ ಹಿರಿಯಡ್ಕದ ಬಜೆ ಅಣೆ ಕಟ್ಟಿನಲ್ಲಿ ಮಾ. 4ರಂದು ನೀರಿನ ಮಟ್ಟ 5.61 ಮೀಟರ್‌ ಇದ್ದು, ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದು ರಾಗದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ.

ನಗರಸಭೆ ವ್ಯಾಪ್ತಿಯ 35 ವಾರ್ಡ್‌ ಗಳಿಗೆ ಕುಡಿಯುವ ನೀರು ಪೂರೈಕೆಯ ಏಕೈಕ ಮೂಲವಾಗಿರುವ ಬಜೆ ಅಣೆಕಟ್ಟು ಒಳಹರಿವು ನಿಂತು ಒಂದು ತಿಂಗಳು ಕಳೆದಿದೆ. ಸದ್ಯಕ್ಕೆ 5.61 ಮೀಟರ್‌ ನೀರು ಡ್ಯಾಂನಲ್ಲಿ ನಿಲ್ಲಿಸಲಾಗಿದೆ. ನಿತ್ಯ 2 ಸೆಂ. ಮೀಟರ್‌ ನೀರು ಬಳಕೆಯಾಗುತ್ತದೆ. 2019 ಮಾ.4ರಂದು 4.91 ಮೀ. ನೀರು ಸಂಗ್ರಹವಾಗಿತ್ತು. ಒಟ್ಟು ಪರಿಸ್ಥಿತಿ ಯನ್ನು ಅವಲೋಕಿಸಿದರೆ ಈ ಬಾರಿ ನಗರಕ್ಕೆ ಸುಗಮ ಕುಡಿಯುವ ನೀರು ಪೂರೈಕೆಯ ಆಶಾವಾದ ಮೂಡಿದೆ.ಬಜೆಯಲ್ಲಿ ನೀರು ಪ್ರಮಾಣ ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ನೀರಿನ ಒತ್ತಡ ಕಡಿಮೆಯಾಗಿದ್ದು, ಇದರಿಂದ ಎತ್ತರ ಪ್ರದೇಶಗಳಿಗೆ ನೀರು ಸರಬರಾಜು ಆಗುತ್ತಿಲ್ಲ.

ಈ ಹಿನ್ನೆಲೆಯಲ್ಲಿ ನಗರಸಭೆ ಮಾ. 4ರಿಂದ 35 ವಾರ್ಡ್‌ಗಳನ್ನು ಮೂರು ಝೋನ್‌ಗಳಾಗಿ ವಿಗಂಡಿಸಿ, ನಿಗದಿತ ಅವಧಿಯಲ್ಲಿ ನೀರು ಸರಬರಾಜು ಮಾಡಲು ನಿರ್ಧರಿಸಿದೆ.

ಶಿರೂರು ಡ್ಯಾಂನಲ್ಲಿ ನೀರು
ಪ್ರಸ್ತುತ ಬಜೆಗೆ ಶಿರೂರು ಡ್ಯಾಂನಲ್ಲಿ ಸಾಕಷ್ಟು ನೀರು ಸಂಗ್ರಹವಿದೆ. ಮಾ.2 ರಂದು ಶಿರೂರು ಡ್ಯಾಂ ಒಂದು ಬಾಗಿಲಿನಿಂದ ನೀರು ಹರಿ ಬಿಡ ಲಾಗುತ್ತಿದೆ. ಇದರಿಂದ ಬಜೆ ಅಣೆಕಟ್ಟಿನಲ್ಲಿಯೂ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಕಳೆದ ಬಾರಿ ಮಾರ್ಚ್‌ ನಲ್ಲಿ ಶಿರೂರು ಡ್ಯಾಂ ನಲ್ಲಿ ನೀರು ಸಂಪೂರ್ಣವಾಗಿ ಬರಿದಾಗಿತ್ತು.

ನೀರಿಗೆ ಮುನ್ನೆಚ್ಚರಿಕೆ
ಕಳೆದ ಬೇಸಗೆಯಲ್ಲಿ ಕುಡಿಯುವ ನೀರು ಪೂರೈಸುವಲ್ಲಿ ವಿಫ‌ಲಗೊಂಡ ನಗರಸಭೆ, ಈ ಬಾರಿ ಮುಂಜಾಗೃತ ಕ್ರಮವಾಗಿ ಬಜೆ ಹೂಳು ತೆಗೆಸುವಲ್ಲಿ ಸಫ‌ಲವಾಗಿದೆ. ಬಜೆ ಡ್ಯಾಂ ತಳಮಟ್ಟದ ಹೂಳು ತೆಗೆದಿರುವುದರಿಂದ ಡ್ಯಾಂ ತಳಭಾಗದಲ್ಲಿ ನೀರಿನ ಸಂಗ್ರಹ ಪ್ರಮಾಣ ಹೆಚ್ಚಿದೆ ಎನ್ನುವುದು ನಗರಸಭೆ ಅಧಿಕಾರಿಗಳ ಅಭಿಪ್ರಾಯ. ಈ ಬಾರಿ ನೀರಿನ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಡ್ಯಾಂ ಬಾಗಿಲುಗಳನ್ನು ದುರಸ್ತಿಗೊಳಿಸಿ ಭದ್ರಗೊಳಿಸಿದೆ.

18 ದಶಲಕ್ಷ ಲೀ. ನೀರು ಸಾಕು
ನಗರದಲ್ಲಿ ಸುಮಾರು 10,500 ಮನೆಗಳು, ಮಣಿಪಾಲ ಕೈಗಾರಿಕಾ ವಲಯದಲ್ಲಿ 70ರಿಂದ 80 ಕೈಗಾರಿಕಾ ಘಟಕ, 570 ಫ್ಲ್ಯಾಟ್‌ಗಳಿವೆ. ಸುಮಾರು 1,000 ವಾಣಿಜ್ಯ ಸಂಸ್ಥಾಪನೆಗಳು ಇವೆ. ಸುಮಾರು 600 ಹೊಟೇಲ್‌, 40 ಲಾಡ್ಜ್ಗಳಿವೆ. ಸರಕಾರದ ಪ್ರಕಾರ ಪ್ರತಿ ಪ್ರಜೆಗೆ ದಿನಕ್ಕೆ 135 ಲೀ. ನೀರು ಒದಗಿಸಬೇಕು. ನಗರದ ಜನಸಂಖ್ಯೆ 1.6 ಲಕ್ಷ. ಅದರ ಪ್ರಕಾರ ಪ್ರತಿನಿತ್ಯ ನಗರಕ್ಕೆ ಸುಮಾರು 18 ದಶಲಕ್ಷ ಲೀ. ನೀರು ಸಾಕಾಗುತ್ತದೆ. ಆದರೆ ಪ್ರತಿದಿನ 24 ದಶಲಕ್ಷ ಲೀ. ನೀರು ಪೂರೈಸಲಾಗುತ್ತದೆ.

ಪ್ರತಿ ತಿಂಗಳು 1 ಲ.ಲೀ.
ಬೇಸಗೆ ಕಾಲದಲ್ಲಿ ಇಡೀ ನಗರದ ಜನರು ನೀರಿಗಾಗಿ ತತ್ತರಿಸಿ ಹೋಗುತ್ತಾರೆ. ಕಳೆದ ಬಾರಿ ಮಣಿಪಾಲದಲ್ಲಿ ಶೇ.68ರ ಪೈಕಿ ಪ್ರತಿಯೊಬ್ಬರೂ ಪ್ರತಿ ತಿಂಗಳು 1 ಲ.ಲೀ. ನೀರು ಬಳಕೆ ಮಾಡುತ್ತಿದ್ದಾರೆ. ಮೂರ್‍ನಾಲ್ಕು ಜನರು ವಾಸಿಸುವ ಮನೆಗಳಲ್ಲಿ ಭಾರೀ ನೀರು ಬಳಕೆ ಮಾಡಲಾಗುತ್ತಿದೆ. ಬಿಲ್ಲು ಕಟ್ಟುತ್ತೇವೆಂಬ ನೆಪವೊಡ್ಡಿ ಬೇಕಾಬಿಟ್ಟಿ ನೀರು ಬಳಕೆ ಮತ್ತು ಗಿಡಗಳಿಗೆ ಹಾಕುವುದರಿಂದ ಕೊರತೆಯಾಗುತ್ತಿದೆ ಎನ್ನುವುದು ನಗರಸಭೆ ಅಧಿಕಾರಿಗಳ ಅಭಿಪ್ರಾಯ.

ಸಿಬಂದಿಗಳಿಗೆ ಎಇಇ- ಸ್ಪೆಶಲ್‌ ಕ್ಲಾಸ್‌
ಬಜೆ ಡ್ಯಾಂನಲ್ಲಿ ಮೂರು ಮೂರು ಶಿಫ್ rನಲ್ಲಿ 14 ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರಲ್ಲಿ ಇಬ್ಬರು ವಾಚ್‌ಮ್ಯಾನ್‌ ಬಾಕಿ 12 ಮಂದಿ ಒಂದು ಶಿಫ್ಟ್ಗೆ 4 ಜನರಂತೆ 3 ಶಿಫ್ಟ್ನಲ್ಲಿ ಕೆಲಸ ಮಾಡುತ್ತಾರೆ. ಈ ಸಿಬಂದಿಗಳು ಕೆಲಸಕ್ಕೆ ಬಾರದೆ ಇರುವುದರಿಂದ ಡ್ಯಾಂನಲ್ಲಿ ಉಂಟಾಗುವ ಸಮಸ್ಯೆ ಅಧಿಕಾರಗಳ ಗಮನಕ್ಕೆ ಬಾರದೆ ತಿಂಗಳುಗಟ್ಟಲೆ ನೀರು ಸೋರಿಕೆಯಾಗುತ್ತಿತ್ತು. ಬಯೋಮೆಟ್ರಿಕ್‌, ಸಿಸಿ ಕೆಮರಾ ಅಳವಡಿಸಿದರೂ ವಿವಿಧ ನೆಪವೊಡ್ಡಿ ಹಿಂದೆ ಕಳುಹಿಸಿದ್ದಾರೆ. ಇದೀಗ ಪ್ರತಿ ಶಿಫ್ಟ್ ಸಿಬಂದಿಗಳು ಕೆಲಸಕ್ಕೆ ಬರುವ ಸಮಯ ಹಾಗೂ ಹೋಗುವ ಸಮಯ ಗಡಿಯಾರದ ಮುಂಭಾಗದಲ್ಲಿ ನಿಂತು ಸೆಲ್ಫಿ ತೆಗೆದು ಕಳುಹಿಸುವಂತೆ ಆದೇಶ ಮಾಡಿದ್ದೇನೆ. ಇದೀಗ ಡ್ಯಾಂನಲ್ಲಿ ಏನೇ ಸಮಸ್ಯೆ ಬಂದರೂ ಸಿಬಂದಿಗಳು ತತ್‌ಕ್ಷಣ ಮಾಹಿತಿ ನೀಡುತ್ತಾರೆ. ಇದರಿಂದಾಗಿ ನೀರಿನ ಸೋರಿಕೆ ಕಡಿಮೆಯಾಗಿದೆ ಎಂದು ನಗರಸಭೆ ಎಇಇ ಮೋಹನ್‌ ರಾಜ್‌ ತಿಳಿಸಿದ್ದಾರೆ.

ನೀರಿನ ಕಡಿತವಿಲ್ಲ !
ಕಳೆದ 2017 ಮತ್ತು 2019 ವರ್ಷವೂ ನಗರಕ್ಕೆ ನೀರಿನ ಸಮಸ್ಯೆ ತಲೆದೋರಿದ್ದು, ಮಾರ್ಚ್‌ ಮೊದಲ ವಾರದಿಂದಲೇ ಕೆಲವು ಕಡೆಗಳಿಗೆ 2 ದಿನಕ್ಕೊಮ್ಮೆ ನೀರು ಕೊಡಲಾಗುತ್ತಿತ್ತು. ಪ್ರಸ್ತುತ ಬಜೆಯಲ್ಲಿ 5.61 ಮೀಟರ್‌ ನೀರಿದ್ದು, ಶಿರೂರು ಡ್ಯಾಂನಲ್ಲಿ ನೀರು ಸಂಗ್ರಹವಿರುವ ಕಾರಣದಿಂದ ನಗರಸಭೆ ನೀರಿನ ಕಡಿತ ಪ್ರಕ್ರಿಯೆ ಆರಂಭಗೊಂಡಿಲ್ಲ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.