“ಮರಳು ನೀತಿ ರೂಪಿಸುವಲ್ಲಿ ಜಿಲ್ಲಾಡಳಿತ, ಸರಕಾರ ಸಂಪೂರ್ಣ ವಿಫ‌ಲ’


Team Udayavani, Mar 23, 2019, 12:30 AM IST

sunil.jpg

ಕಾರ್ಕಳ : ಮರಳು ನೀತಿ ಕುರಿತಂತೆ ಸ್ಪಷ್ಟವಾದ ನಿಲುವು ತಳೆಯುವಲ್ಲಿ ಉಡುಪಿ ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರ ಸಂಪೂರ್ಣ ವಿಫ‌ಲವಾಗಿದ್ದು, ಮರಳಿನ ಅಭಾವಕ್ಕೆ ನೇರ ಹೊಣೆಯಾಗಿದೆ ಎಂದು ಶಾಸಕ ಸುನಿಲ್‌ ಕುಮಾರ್‌ ಆರೋಪಿಸಿದರು.

ಶಾಸಕರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಿ, ಜನರಿಗೆ ಸುಲಭವಾಗಿ ಮರಳು, ಕಲ್ಲು ಪಡೆಯಲು ಸಹಕಾರಿಯಾಗುವಂತಹ ಯಾವುದೇ ಕ್ರಮವನ್ನು ಜಿಲ್ಲಾಡಳಿತವಾಗಲೀ ಅಥವಾ ರಾಜ್ಯ ಸರಕಾರವಾಗಲಿ ಕೈಗೊಂಡಿಲ್ಲ.
 
ಈ  ನಿಟ್ಟಿನಲ್ಲಿ ಮುಖ್ಯಮಂತ್ರಿ, ಗಣಿಗಾರಿಕೆ ಸಚಿವರನ್ನು ಭೇಟಿ ಮಾಡಿ ಜನರ ಸಮಸ್ಯೆ ಕುರಿತು ಮನವರಿಕೆ ಮಾಡಿದ್ದಾಗ್ಯೂ ಪ್ರಯೋಜನವಾಗಿಲ್ಲ ಎಂದು  ಅವರು ಅಸಮಾಧಾನ ವ್ಯಕ್ತಪಡಿಸಿದರು.

ಸ್ಪಂದನೆಯಿಲ್ಲ
ಮನೆ ನಿರ್ಮಾಣ, ಸರಕಾರಿ ಕಾಮಗಾರಿಗಳು ಮರಳು, ಕಲ್ಲಿನ ಅಭಾವದಿಂದಾಗಿ ಸ್ಥಗಿತಗೊಂಡಿವೆ. ಇದರಿಂದಾಗಿ ಜನಸಾಮಾನ್ಯರು, ವ್ಯಾಪಾರಿಗಳು, ಕಾರ್ಮಿಕರಿಗೆ ಸಾಕಷ್ಟು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ  ಕಳೆದ 10 ತಿಂಗಳ ಅವಧಿಯಲ್ಲಿ ಅದೆಷ್ಟೋ ಬಾರಿ ಸಂಬಂಧಪಟ್ಟ ಇಲಾಖಾ ಕಾರ್ಯದರ್ಶಿ, ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸಲಾಗಿದೆ. ಆದರೆ, ಇಲಾಖೆಯಿಂದ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

6 ಕಡೆ ಮಾತ್ರ ಮರಳುಗಾರಿಕೆ
ತಾ.ಪಂ., ಗ್ರಾ.ಪಂ. ಸಹಕಾರದೊಂದಿಗೆ ಸುಮಾರು 20 ಕಡೆಗಳಲ್ಲಿ ಮರಳುಗಾರಿಕೆ ನಡೆಸಬಹುದೆಂದು ಸ್ಥಳಗಳನ್ನು ಗುರುತಿಸಿದ್ದರೂ ಮುಂಡ್ಕೂರು, ಕಸಬಾ, ಕೌಡೂರು, ಮುದ್ರಾಡಿ ಸೇರಿದಂತೆ ಕೇವಲ 6 ಕಡೆಗಳಲ್ಲಿ ಮರಳು ತೆಗೆಯಲು ಅವಕಾಶ ನೀಡಲಾಗಿದೆ. ಅಲ್ಲಿಂದ ಕೂಡ ಇಲಾಖೆ ಮರಳು ಪೂರೈಸಲು ಮುಂದಾಗಿಲ್ಲ ಎಂದು  ಹೇಳಿದರು.

ಮಂಗಳೂರಿನಿಂದ ಮರಳು
ಕಾರ್ಕಳ  ಪ್ರದೇಶಕ್ಕೆ ಈ ಹಿಂದೆ ಮಂಗಳೂರು ಭಾಗದಿಂದ ನಿಗದಿಪಡಿಸಿದ ದರ ಪಾವತಿಸಿ ಹೆಚ್ಚಿನ ಪ್ರಮಾಣದಲ್ಲಿ ಮರಳು ಪೂರೈಕೆಯಾಗುತ್ತಿತ್ತು. 

ಆದರೆ, ಇದೀಗ ಅದಕ್ಕೂ ನಿರ್ಬಂಧ ಹೇರಲಾಗಿದೆ. ಕಾನೂನಿನ ನೆಪದಲ್ಲಿ ಮರಳು ಸಾಗಾಟದ ಲಾರಿಗಳಿಗೆ ಪೊಲೀಸರು ತೊಂದರೆ ನೀಡುತ್ತಿದ್ದಾರೆ. ಇದರಿಂದಾಗಿ ಕಾರ್ಕಳ ಭಾಗದ ಜನರಿಗೆ ಮರಳು ಸಿಗದಂತಾಗಿದೆ ಎಂದರು.

ಅಧಿಕಾರಿಗಳ ವರ್ತನೆ ಸಹಿಸಲು ಸಾಧ್ಯವಿಲ್ಲ
ಸ್ಥಳೀಯ ಹೊಳೆ, ತೋಡುಗಳಿಂದ ಬುಟ್ಟಿಗಳಲ್ಲಿ ಮರಳು ತೆಗೆದು ಸಾಗಾಟ ಮಾಡುವವರ ವಿರುದ್ಧವೂ ಮೊಕದ್ದಮೆ ಹೂಡಲಾಗುತ್ತಿದೆ. ಕಾನೂನಿನ ನೆಪದಲ್ಲಿ ಅಧಿಕಾರಿಗಳು ಅಮಾಯಕರನ್ನು ಸತಾಯಿಸುತ್ತಿದ್ದಾರೆ. ಹೊಸತಾಗಿ ಜಿಲ್ಲೆಗೆ ಬಂದ ಅಧಿಕಾರಿಗಳು ನಾಗರಿಕರೊಂದಿಗೆ ಸೌಜನ್ಯತೆಯೊಂದಿಗೆ ವರ್ತಿಸದೇ ಹದ್ದುಮೀರಿ ವರ್ತಿಸುತ್ತಿದ್ದಾÃÉ ಎಂದು  ಹೇಳಿದರು.

ಕ್ರಮಕ್ಕೆ ಆಕ್ಷೇಪವಿಲ್ಲ
ಮರಳು ದಂಧೆಕೋರರ ವಿರುದ್ಧ ಇಲಾಖೆ ಯಾವುದೇ ಕ್ರಮ ಕೈಗೊಂಡರೂ ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ನೀತಿ ಸಂಹಿತೆಯ ನೆಪವೊಡ್ಡಿ, ಮರಳು, ಜಲ್ಲಿ, ಕೆಂಪು ಕಲ್ಲು ಸಾಗಾಟದ ವೇಳೆ ಸಾಮಾನ್ಯ ಜನರಿಗೆ ತೊಂದರೆ ಕೊಡಬಾರದು. ಇದು ಸರಿಯಲ್ಲ . ಕಲ್ಲು ಗಣಿಗಾರಿಕೆ, ಮರಳುಗಾರಿಕೆಗಾಗಿ ಇರುವಂತಹ ಪರವಾನಿಗೆಯನ್ನು ಅರ್ಹರಿಗೆ ನೀಡಿ ಜನರಿಗೆ ಸುಲಭವಾಗಿ ಮರಳು ಕಲ್ಲು ದೊರೆಯುವಂತೆ ಮಾಡುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮುತುವರ್ಜಿ ವಹಿಸಬೇಕೆಂದು ಸುನಿಲ್‌ ಕುಮಾರ್‌ ಆಗ್ರಹಿಸಿದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.