ಮಳೆಗಾಲ ಎದುರಿಸಲು ಜಿಲ್ಲಾಡಳಿತ ಸನ್ನದ್ಧ

ಚರಂಡಿ ದುರಸ್ತಿ,ಅಪಾಯಕಾರಿ ಮರಗಳ ತೆರವಿಗೆ ಜಿಲ್ಲಾಧಿಕಾರಿ ಆದೇಶ

Team Udayavani, Jun 8, 2019, 6:00 AM IST

Rain-d

ಸಾಂದರ್ಭಿಕ ಚಿತ್ರ

ಉಡುಪಿ: ಮಳೆಗಾಲವನ್ನು ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದೆ. ಮುಂಗಾರು ಪೂರ್ವ ಸಭೆಯು ಮೇ ತಿಂಗಳಲ್ಲಿ ನಡೆದಿದ್ದು ಟಾಸ್ಕ್ಫೋರ್ಸ್‌ ಸಿದ್ಧವಾಗಿದೆ.

ಚರಂಡಿ ದುರಸ್ತಿ, ಅಪಾಯಕಾರಿ ಮರಗಳ ತೆರವಿಗೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ಆ ಕಾರ್ಯಗಳೂ ನಡೆಯುತ್ತಿವೆ.

ಈ ವಾರ ಮುಂಗಾರು ಆಗಮನ ನಿರೀಕ್ಷೆ
ಕರಾವಳಿಗೆ ಈ ವಾರದಲ್ಲಿ ಮುಂಗಾರು ಆಗಮಿಸುವ ನಿರೀಕ್ಷೆ ಹೊಂದಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಕರಾವಳಿಯಲ್ಲಿ ಉತ್ತಮ ಮಳೆ ಸುರಿಯಲಿದೆ ಎಂದು ಈಗಾಗಲೇ ಹವಾಮಾನ ಸಂಸ್ಥೆಗಳು ತಿಳಿಸಿವೆ.

ದಕ್ಷಿಣ ಭಾರತದಲ್ಲಿ ಈ ಬಾರಿ ಮುಂಗಾರು ಉತ್ತಮವಾಗಿರಲಿದ್ದು, ಶೇ. 93ರಷ್ಟು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ ವರ್ಷ ಮುಂಗಾರು ಉತ್ತಮವಾಗಿತ್ತು. ಜಿಲ್ಲೆಯ ವಾಡಿಕೆ ಮಳೆ 4,017 ಮಿ.ಮೀ.ಯಾಗಿದ್ದು, ಕಳೆದ ವರ್ಷ 4,095.6ಮಿ.ಮೀ. ಮಳೆ ಸುರಿದಿತ್ತು. ಜಿಲ್ಲೆಯಲ್ಲಿ 2016ರಲ್ಲಿ 3,484.6ಮಿ.ಮೀ., 2017ರಲ್ಲಿ 3,734.1 ಮಿ.ಮೀ. ಮಳೆಯಾಗಿತ್ತು. ಆದರೆ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಸುರಿದ ಪ್ರಮಾಣ ಅತಿ ಕನಿಷ್ಠವಾಗಿದೆ. ಮಾರ್ಚ್‌ನಿಂದ ಮೇ ತನಕ ಉಡುಪಿಯಲ್ಲಿ ಸುರಿದ ಮಳೆಯ ಪ್ರಮಾಣ 3 ಮಿ.ಮೀ.ಮಾತ್ರ.

4,000 ಮಿ.ಮೀ. ಮಳೆ ಸಂಭವ
ಮಾರ್ಚ್‌ನಿಂದ ಮೇ ವರೆಗೆ ಜಿಲ್ಲೆಯಲ್ಲಿ ವಾಡಿಕೆ ಯಂತೆ 20 ಮಿ.ಮೀ. ಆಗಬೇಕಿತ್ತು. ಆದರೆ ಈ ನಿರೀಕ್ಷೆ ಹುಸಿಯಾಗಿದೆ. ಜೂನ್‌ನಿಂದ ಸೆಪ್ಟಂಬರ್‌ ತಿಂಗಳ ಅವಧಿಯಲ್ಲಿ ಸುಮಾರು 4,000 ಮಿ.ಮೀ.ಮಳೆಯಾಗುವ ನಿರೀಕ್ಷೆ ಹೊಂದಲಾಗಿದೆ. ಸೆಪ್ಟಂಬರ್‌ನಿಂದ ಡಿಸೆಂಬರ್‌ ತಿಂಗಳವರೆಗೆ 300 ಮಿ.ಮೀ. ಮಳೆ ಬರಬಹುದು ಎಂದು ಅಂದಾಜಿಸಲಾಗಿದೆ.

ಕಳೆದ ಬಾರಿ ಕಾರ್ಕಳದಲ್ಲಿ ಹೆಚ್ಚು ಮಳೆ
2018ರಲ್ಲಿ ಕಾರ್ಕಳ ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗಿತ್ತು. 4,828 ಮಿ.ಮೀ. ವಾಡಿಕೆ ಮಳೆ ಯಾಗಬೇಕಿತ್ತು. ಆದರೆ ಸುರಿದದ್ದು ಬರೊಬ್ಬರಿ 4,558.9 ಮಿ.ಮೀ. ಮಳೆ. ಉಡುಪಿಯಲ್ಲಿ 3,931.9 ಹಾಗೂ ಕುಂದಾಪುರ ತಾಲೂಕಿನಲ್ಲಿ 3,888.6 ಮಿ.ಮೀ.ಮಳೆ ಸುರಿದಿತ್ತು.

ಸಂಪೂರ್ಣ ಸನ್ನದ್ಧ
ಮಳೆಗಾಲ ಎದುರಿಸಲು ವಿಪತ್ತು ನಿರ್ವಹಣೆ ತಂಡ ಸಂಪೂರ್ಣ ಸನ್ನದ್ಧವಾಗಿದೆ. ಈಗಾಗಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆದಿದ್ದು, ಚರಂಡಿಗಳ ದುರಸ್ತಿ ಹಾಗೂ ಅಪಾಯಕಾರಿ ಮರಗಳ ತೆರವಿಗೆ ಆದೇಶ ನೀಡಿದ್ದಾರೆ.
-ರವಿ, ವಿಪತ್ತು ನಿರ್ವಹಣೆ ತಜ್ಞರು

ಮೆಸ್ಕಾಂನಿಂದ 105 ಗ್ಯಾಂಗ್‌ಮೆನ್‌ಗಳ ನಿಯೋಜನೆ
ಮಳೆಗಾಲದಲ್ಲಿ ಉಂಟಾಗಬಹುದಾದ ವಿದ್ಯುತ್‌ ಸಂಬಂಧಿ ಅಪಾಯ, ಅವಘಡ‌, ಅಡಚಣೆಗಳನ್ನು ಸಮರ್ಥವಾಗಿ ನಿಭಾಯಿಸುವ ಪ್ರಯತ್ನವಾಗಿ ಮೆಸ್ಕಾಂ ಉಡುಪಿ ವಿಭಾಗವು 105 ಮಂದಿ ಗ್ಯಾಂಗ್‌ಮೆನ್‌ಗಳನ್ನು ನಿಯೋಜಿಸಿದೆ.

ಕಳೆದ ವರ್ಷ ಉಡುಪಿ ಮತ್ತು ಕಾರ್ಕಳ ತಾಲೂಕುಗಳನ್ನೊಳಗೊಂಡ ಉಡುಪಿ ವಿಭಾಗದಲ್ಲಿ 2,300 ಕಂಬಗಳು ಹಾನಿಯಾಗಿದ್ದವು. 6.70 ಕೋ.ರೂ.ಗಳಷ್ಟು ನಷ್ಟ ಉಂಟಾಗಿತ್ತು. ಅಂಬಲಪಾಡಿ, ಕಡೆಕಾರು, ಕಿದಿಯೂರು ಮೊದಲಾದೆಡೆ ಮುಂಗಾರಿನ ಆರಂಭದಲ್ಲೇ ಬಲವಾದ ಗಾಳಿಗೆ ಮರಗಳು ವಿದ್ಯುತ್‌ ಕಂಬ, ತಂತಿಗೆ ಉರುಳಿ ವಿದ್ಯುತ್‌ ಕಂಬಗಳು, ಟ್ರಾನ್ಸ್‌ಫಾರ್ಮರ್‌ಗಳು ಧರಾಶಾಯಿಯಾಗಿದ್ದವು. ಅದನ್ನು ಮರುಸ್ಥಾಪಿಸಲು ವಾರಗಳ ಕಾಲ ಬೇಕಾಗಿತ್ತು.

ಗೆಲ್ಲುಗಳ ತೆರವು
ವಿದ್ಯುತ್‌ ತಂತಿ ಸಮೀಪವಿರುವ ಮರದ ಗೆಲ್ಲುಗಳನ್ನು ಕಡಿಯುವ ಕಾರ್ಯಾಚರಣೆಯನ್ನು ಉಡುಪಿ ಭಾಗದಲ್ಲಿ ಎಪ್ರಿಲ್‌ನಲ್ಲಿಯೇ ಆರಂಭಿಸಲಾಗಿದ್ದು ಅದು ಮುಂದು ವರೆದಿದೆ. ಗ್ಯಾಂಗ್‌ಮೆನ್‌ಗಳನ್ನು ಏಜೆನ್ಸಿ ಮೂಲಕ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗಿದ್ದು ಅವರು ಮಳೆಗಾಲದ 3 ತಿಂಗಳು ಮೆಸ್ಕಾಂ ಅಧಿಕಾರಿ, ಸಿಬಂದಿ ಜತೆ ಕಾರ್ಯನಿರ್ವಹಿಸಲಿದ್ದಾರೆ. ಮಳೆಗಾಲ ಮತ್ತೆ ಮುಂದು ವರಿದರೆ ಅವರ ಕೆಲಸವೂ ಮುಂದುವರಿಯಲಿದೆ.

ವಿದ್ಯುತ್‌ ಜಾಲ ಮೇಲ್ದರ್ಜೆಗೆ
ಉಡುಪಿ ನಗರವೂ ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ವಿದ್ಯುತ್‌ ಸಂಪರ್ಕ ಜಾಲವನ್ನು ಮೇಲ್ದರ್ಜೆಗೇರಿಸುವ ಕೆಲಸ ನಡೆಯುತ್ತಿದೆ. ಹಳೆಯ, ಸವೆದಿರುವ ತಂತಿಗಳನ್ನು ತೆಗೆದು ಹೊಸ ತಂತಿಗಳನ್ನು ಅಳವಡಿಸಲಾಗುತ್ತಿದೆ. ಇದರಿಂದಾಗಿ ವೋಲ್ಟೆàಜ್‌ ಉತ್ತಮವಾಗುವ ಜತೆಗೆ ವಿದ್ಯುತ್‌ ಅವಘಡದ ಅಪಾಯವೂ ಕಡಿಮೆಯಾಗಲಿದೆ ಎನ್ನುತ್ತಾರೆ ಮೆಸ್ಕಾಂ ಅಧಿಕಾರಿಗಳು.

ಟೋಲ್‌ಫ್ರೀ ನಂಬರ್‌
ಸಮರ್ಪಕ ಸೇವೆ, ಸಾರ್ವಜನಿಕರು ಮತ್ತು ಸಿಬಂದಿಯ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸಾರ್ವಜನಿಕರು ಮಳೆಯಿಂದಾಗುವ ಅಪಾಯ, ಹಾನಿ ಸೇರಿದಂತೆ ವಿದ್ಯುತ್‌ ಸರಬರಾಜು ವ್ಯವಸ್ಥೆಗೆ ಸಂಬಂಧಿಸಿ ಟೋಲ್‌ಫ್ರೀ ಸಂಖ್ಯೆ 1912ಕ್ಕೆ ಕರೆ ಮಾಡಿ ದೂರು ದಾಖಲಿಸಬಹುದು ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

– ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.