ಜಿಲ್ಲಾ ಒಕ್ಕೂಟ ರಾಜ್ಯದಲ್ಲೇ ಪ್ರಥಮ: ರವಿರಾಜ ಹೆಗ್ಡೆ
Team Udayavani, Jul 24, 2017, 8:50 AM IST
ಬೆಳ್ಮಣ್: ಹಾಲಿನ ಗುಣಮಟ್ಟ, ದರ, ಲಾಭಾಂಶ ಹಾಗೂ ವ್ಯವಹಾರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ರಾಜ್ಯದಲ್ಲಿಯೇ ಒಂದನೇ ಸ್ಥಾನದಲ್ಲಿದೆಯೆಂದು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಹೇಳಿದರು.
ಅವರು ಶುಕ್ರವಾರ ಕಾರ್ಕಳದ ಪ್ರಕಾಶ್ ಹೊಟೇಲ್ನಲ್ಲಿ ನಡೆದ ಕಾರ್ಕಳ ತಾಲೂಕು ಹಾಲು ಉತ್ಪಾದಕರ ಸಂಘಗಳ ಆಧ್ಯಕ್ಷ-ಕಾರ್ಯದರ್ಶಿಗಳ ಸಮಾಲೋಚನಾ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು.
ಒಕ್ಕೂಟದಿಂದ ಹೈನುಗಾರರಿಗೆ ವಿಶೇಷ ಯೋಜನೆಗಳನ್ನು ಪ್ರಾರಂಭಿಸಲಾಗಿದ್ದು ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರಕಾರವೂ ಹತ್ತು ಹಲವು ಯೋಜನೆಗಳನ್ನು ರೂಪಿಸಿದೆಯೆಂದ ಅವರು ಒಕ್ಕೂಟದ ವ್ಯವಹಾರದ ಆಂಕಿ ಅಂಶಗಳನ್ನು ವಿವರಿಸಿದರು. ಉತ್ತಮ ಗುಣಮಟ್ಟದ ಹಾಲು ನೀಡುವ ಹೈನುಗಾರ ಎಂದೂ ಸೋಲಲಾರ ಎಂದು ಪ್ರೇರಣೆ ನೀಡಿದರು.
ಇದೇ ಸಂದರ್ಭ ತಾ| ಮಟ್ಟದ ಪ್ರಶಸ್ತಿ ಪುರಸ್ಕೃತ ಸಂಘಗಳನ್ನು, ಹೈನುಗಾರರನ್ನು ಗುರುತಿಸಲಾಯಿತು.ಅಧಿಕ ಅಂಕ ಗಳಿಸಿದ ಹೈನುಗಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.
ಒಕ್ಕೂಟದ ನಿರ್ವಾಹಕ ನಿರ್ದೇಶಕ ಡಾ| ಬಿ.ವಿ. ಸತ್ಯನಾರಾಯಣ, ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ಉದಯ ಎಸ್. ಕೋಟ್ಯಾನ್, ನವೀನಚಂದ್ರ ಜೈನ್, ಜಾನಕಿ ಹಂದೆ, ಅಶೋಕ್ ಕುಮಾರ ಶೆಟ್ಟಿ,ಸೂರ್ಯ ಶೆಟ್ಟಿ, ಡೈರಿ ಮೆನೇಜರ್ ಡಾ| ನಿತ್ಯಾನಂದ ಭಕ್ತ, ಶಿವಶಂಕರ ಸ್ವಾಮಿ, ಡಾ| ಆನಿಲ್ ಕುಮಾರ್ ಶೆಟ್ಟಿ ಮತ್ತಿತರರಿದ್ದರು. ಉದಯ ಕೋಟ್ಯಾನ್ ಸ್ವಾಗತಿಸಿ, ನವೀನಚಂದ್ರ ಜೈನ್ ವಂದಿಸಿದರು. ಶಂಕರ ನಾಯಕ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ