ತಾಲೂಕು ಘೋಷಣೆ ಸಾಲದು, ಅನುಷ್ಠಾನಗೊಳ್ಳಲಿ: ಭಟ್‌


Team Udayavani, Apr 10, 2017, 3:25 PM IST

bhat.jpg

ಬ್ರಹ್ಮಾವರ: ಹೊಸ ತಾಲೂಕು ರಚನೆ ಅಭಿವೃದ್ಧಿ ದೃಷ್ಟಿಯಿಂದ ಪೂರಕ. ಆದರೆ ಕೇವಲ ಘೋಷಣೆಯಾದರೆ ಸಾಲದು, ಶೀಘ್ರ ಸಮರ್ಪಕ ಅನುಷ್ಠಾನ ಅತ್ಯಗತ್ಯ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್‌ ಹೇಳಿದರು.

ಅವರು ಶನಿವಾರ ಬ್ರಹ್ಮಾವರ ತಾಲೂಕು ಹೋರಾಟಗಾರರ ಅಭಿನಂದನಾ ಸಮಿತಿ ಆಶ್ರಯದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮುಂದೆ ಬ್ರಹ್ಮಾವರಕ್ಕೆ ಪುರಸಭೆ ಮಂಜೂರಾಗಬೇಕು ಎಂದರು. ಸುಸಜ್ಜಿತ ಕಚೇರಿ ತಾಲೂಕು ರಚನೆ ಸಂದರ್ಭ ಸುಸಜ್ಜಿತ ತಾ. ಪಂ. ಕಟ್ಟಡ, ತಾಲೂಕು ನ್ಯಾಯಾಲಯ, ತಾಲೂಕು ಆಸ್ಪತ್ರೆ, ವಿವಿಧ ಇಲಾಖೆಗಳ ಕಚೇರಿ ನಿರ್ಮಾಣವಾಗಬೇಕು. ಬ್ರಹ್ಮಾವರ ತಾಲೂಕಿಗೆ ಈಗಾಗಲೇ ವಾರಂಬಳ್ಳಿಯಲ್ಲಿ ಮೀಸಲಿರಿಸಿದ 13 ಎಕ್ರೆ ಜಾಗದಲ್ಲಿ ಸುಮಾರು 6 ಎಕ್ರೆಯನ್ನು ಗೃಹ ಮಂಡಳಿಗೆ ನೀಡಲಾಗಿದೆ. ಇದನ್ನು ಹಿಂಪಡೆದು ತಾಲೂಕಿಗಾಗಿ ವಿನಿಯೋಗಿಸಬೇಕು ಎಂದು ರಘುಪತಿ ಭಟ್‌ ಆಗ್ರಹಿಸಿದರು.

ರೋಟರಿ ಮಾಜಿ ಗವರ್ನರ್‌ ಜ್ಞಾನವಸಂತ ಶೆಟ್ಟಿ ಪ್ರಸ್ತಾವನೆಗೈದರು. ವಾರಂಬಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ರಾಜೇಶ್‌ ಶೆಟ್ಟಿ ಬಿರ್ತಿ ಅಭಿನಂದನ ಭಾಷಣ ಮಾಡಿದರು. ಇದಕ್ಕೂ ಮೊದಲು ಸಚಿವ ಪ್ರಮೋದ್‌ ಮಧ್ವರಾಜ್‌, ಜಿ.ಪಂ. ಮಾಜಿ ಅಧ್ಯಕ್ಷ ಬಿ. ಭುಜಂಗ ಶೆಟ್ಟಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ ಶುಭಹಾರೈಸಿದ್ದರು.

ಬ್ರಹ್ಮಾವರ ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಬಾರಕೂರು ಸತೀಶ್‌ ಪೂಜಾರಿ, ಪದಾಧಿಕಾರಿಗಳು, ಸಮಿ
ತಿಗೆ ನಿರಂತರ ಬೆಂಬಲ ನೀಡಿದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಗೌರವಿಸಲಾಯಿತು.

ಎಸ್‌.ಎಂ.ಎಸ್‌. ಚರ್ಚ್‌ನ ರೆ| ಫಾ| ಲಾರೆನ್ಸ್‌ ಡಿ’ಸೋಜಾ, ಎಪಿಎಂಸಿ ಅಧ್ಯಕ್ಷ ನಿರಂಜನ್‌ ಹೆಗ್ಡೆ ಅಲ್ತಾರು, ತಾ.ಪಂ. ಸದಸ್ಯ ಸುಧೀರ್‌ ಕುಮಾರ್‌ ಶೆಟ್ಟಿ, ಸವಿತಾ ಸಮಾಜ ಜಿಲ್ಲಾಧ್ಯಕ್ಷ ಅರುಣ್‌ ಭಂಡಾರಿ ಪರ್ಕಳ, ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷ ಆನಂದ ಮಟಪಾಡಿ, ಆರೂರು ಗ್ರಾ.ಪಂ. ಅಧ್ಯಕ್ಷ ರಾಜೀವ ಕುಲಾಲ್‌, ಯಡ್ತಾಡಿ ಗ್ರಾ.ಪಂ. ಅಧ್ಯಕ್ಷ ಎಚ್‌. ಪ್ರಕಾಶ್‌ ಶೆಟ್ಟಿ, ಮಾಜಿ ಅಧ್ಯಕ್ಷ ಗೌತಮ್‌ ಹೆಗ್ಡೆ, ಪಾಂಡೇಶ್ವರ ಪಂಚಾಯತ್‌ ಅಧ್ಯಕ್ಷ ಗೋವಿಂದ ಪೂಜಾರಿ ಉಪಸ್ಥಿತರಿದ್ದರು.

ಸಮಿತಿ ಪ್ರ. ಕಾರ್ಯದರ್ಶಿ ಸಂತೋಷ್‌ ಪೂಜಾರಿ ಹಂದಾಡಿ ಸ್ವಾಗತಿಸಿ, ಉಪಾ ಧ್ಯಕ್ಷ ಉದಯ ಕುಮಾರ್‌ ಬ್ರಹ್ಮಾವರ ಸಮ್ಮಾನಿತರ ಹೆಸರು ವಾಚಿಸಿದರು. ಬಾರಕೂರು ಸುಧಾಕರ ರಾವ್‌ ಕಾರ್ಯ ಕ್ರಮ ನಿರೂಪಿಸಿ, ಸದಾಶಿವ ಶೆಟ್ಟಿ ಹೇರೂರು ವಂದಿಸಿದರು.

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.