ಜಿಲ್ಲೆಯಾದ್ಯಂತ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೋಡೆಬರಹಕ್ಕೆ ಸೂಚನೆ‌: ಜಿಲ್ಲಾಧಿಕಾರಿ

ಜಿಲ್ಲಾ ಮಟ್ಟದ ಮಕ್ಕಳ ಸಹಾಯವಾಣಿ ಸಲಹಾ ಸಮಿತಿ ಸಭೆ

Team Udayavani, Dec 18, 2019, 7:53 PM IST

xc-7

ಉಡುಪಿ: ಮಕ್ಕಳ ಹಕ್ಕುಗಳ ಬಗ್ಗೆ ಎಲ್ಲರೂ ತಿಳಿಯಲು ಹಾಗೂ ಮಕ್ಕಳ ಮೇಲಾಗುವ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ ಶಾಲಾ -ಕಾಲೇಜು, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಸರಕಾರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಸ್ಟಿಕ್ಕರ್‌ ಅಳವಡಿಕೆ ಹಾಗೂ ಮಕ್ಕಳ ಸಹಾಯವಾಣಿಯ ಬಗ್ಗೆ ಗೋಡೆ ಬರಹಗಳನ್ನು ಬರೆಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಹೇಳಿದರು.

ವಿ.ಎಸ್‌. ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಮಕ್ಕಳ ಸಹಾಯವಾಣಿ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಮನೆ, ಶಾಲೆ, ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳ ಮೇಲಾಗುವ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಆದಷ್ಟು ಪ್ರಚಾರಗೊಳಿಸಿ ಮಕ್ಕಳ ಏಳಿಗೆಗೆ ಎಲ್ಲರೂ ಶ್ರಮಿಸಬೇಕು. ಶಾಲಾ ವಾಹನ ಹಾಗೂ ಬಸ್‌, ರಿಕ್ಷಾ ಸೇರಿದಂತೆ ಸಾರ್ವಜನಿಕ ಹಾಗೂ ಸರಕಾರಿ ವಾಹನಗಳಲ್ಲಿ ಸಹಾಯವಾಣಿ ಸಂಖ್ಯೆಯ ಸ್ಟಿಕ್ಕರ್‌ ಅಳವಡಿಸಬೇಕು. ಮಕ್ಕಳ ಹಕ್ಕುಗಳ ಬಗ್ಗೆ ಸೂಕ್ಷ್ಮವಾಗಿ ತಿಳಿಯಲು ಎಲ್ಲರೂ ಮಕ್ಕಳ ಮನದ ಅಂತರಂಗ ಪುಸ್ತಕವನ್ನು ಓದಬೇಕು. ಶಾಲಾ ಕಾಲೇಜು ಶಿಕ್ಷಕರುಗಳಿಗೆ ಪುಸ್ತಕ ವಿತರಿಸಬೇಕು ಎಂದು ಸಲಹೆ ನೀಡಿದರು.

ಮಕ್ಕಳ ಗ್ರಾಮಸಭೆಗಳಲ್ಲಿ ಮಕ್ಕಳ ಸಹಾಯವಾಣಿ ಬಗ್ಗೆ ಹೆಚ್ಚಿನ ಮಾಹಿತಿ ನೀಡಬೇಕು. ತಾಲೂಕು ಮಟ್ಟದಲ್ಲಿ ಚೈಲ್ಡ್‌ಲೈನ್‌ ಸಲಹಾ ಸಮಿತಿಗಳನ್ನು ರಚಿಸಿ ಸಭೆ ನಡೆಸಬೇಕು. ಜಿಲ್ಲೆಯಲ್ಲಿ ಬಾಲಕರ ಭವನಕ್ಕೆ ಪ್ರಸ್ತಾವ ಕಳುಹಿಸುವಂತೆ ಹಾಗೂ ಬಾಲಕಿಯ ಬಾಲ ಮಂದಿರಗಳನ್ನು ಪುನಶ್ಚೇತನಗೊಳಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್‌.ಶೇಷ‌ಪ್ಪ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಸಭೆಯಲ್ಲಿ ಚೈಲ್ಡ್‌ ಲೈನ್‌ ಇಂಡಿಯಾ ಫೌಂಡೇಶನ್‌ನ ಕೋರ್ಡಿನೇಟರ್‌ ಚಿತ್ರಅಂಚನ್‌ ಚೈಲ್ಡ್‌ ಲೈನ್‌ ಇಂಡಿಯಾ ಫೌಂಡೇಶನ್‌ನ ಕುರಿತು ಮಾಹಿತಿ ನೀಡಿದರು.

ಮುಖ್ಯಕಾರ್ಯನಿರ್ವಣಾಧಿಕಾರಿ ಪ್ರೀತಿ ಗೆಹಲ್ಲೋತ್‌, ಮಕ್ಕಳ ರಕ್ಷಣಾ ಘಟಕದ ಅದ್ಯಕ್ಷ ಸದಾನಂದ ನಾಯಕ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ಮತ್ತು ಹಿರಿಯ ಸಿವಿಲ್‌ ನ್ಯಾಯಾಧೀಶೆ ಕಾವೇರಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷ ಬಿ.ಕೆ. ನಾರಾಯಣ, ಅಮೃತ ಕಲಾ, ರಾಜೇಶ್‌, ಮೋಹನ್‌, ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.

ಜಿಲ್ಲಾ ಚೈಲ್ಡ್‌ ಲೈನ್‌ ಸಂಯೋಜಕಿ ಕಸ್ತೂರಿ ವರದಿ ಮಂಡಿಸಿದರು. ಜಿಲ್ಲಾ ಮಕ್ಕಳ ಸಹಾಯವಾಣಿ ನಿರ್ದೇಶಕ ರಾಮಚಂದ್ರ ಸ್ವಾಗತಿಸಿ, ವಂದಿಸಿದರು.

ಮಲ್ಪೆ ಬಂದರಿನಲ್ಲಿ ಮೀನು ಕದಿಯುತ್ತಿರುವ ಮಕ್ಕಳ ಬಗ್ಗೆ ಕ್ರಮ ಕೈಗೊಳ್ಳಬೇಕು. ವಲಸೆ ಕಾರ್ಮಿಕರ ಮಕ್ಕಳ ರಕ್ಷಣೆ ಜಿಲ್ಲಾಡಳಿತದ ಕರ್ತವ್ಯವಾಗಿದ್ದು ಈ ಬಗ್ಗೆ ಶೀಘ್ರ ಕ್ರಮಕೈಗೊಂಡು, ನಿಯಮಿತವಾಗಿ ತಪಾಸಣೆ ನಡೆಸಿ ವರದಿ ಸಲ್ಲಿಸಬೇಕು. ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಮತ್ತೆ ಶಾಲೆಗಳತ್ತ ಮುಖ ಮಾಡಬೇಕು. ಸರಕಾರಿ ಇಲಾಖೆ, ಖಾಸಗಿ ಶಾಲಾ ಕಾಲೇಜುಗಳು ಮಕ್ಕಳ ಸಹಾಯವಾಣಿಗೆ ಸೂಕ್ತ ಸ್ಪಂದನೆ ನೀಡಬೇಕು, ತುರ್ತು ಸಂದ‌ರ್ಭಗಳಲ್ಲಿ ಸರಕಾರಿ ಇಲಾಖೆಯ ಸಿಬಂದಿಗಳು ರಜಾ ದಿನಗಳಲ್ಲಿಯೂ ಮಕ್ಕಳ ಸಹಾಯವಾಣಿ ದೂರುಗಳಿಗೆ ಸ್ಪಂದಿಸಬೇಕು.
ಜಿ. ಜಗದೀಶ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.