ಗಮಕ ಕಲೆ ಪ್ರವರ್ಧಮಾನಕ್ಕೆ ತರುವ ಕೆಲಸವಾಗಲಿ: ಚಂದ್ರಶೇಖರ ಕೆದ್ಲಾಯ

 ಜಿಲ್ಲಾ ಮಟ್ಟದ ಗಮಕ ಸಮ್ಮೇಳನ ಉದ್ಘಾಟನೆ

Team Udayavani, Mar 1, 2020, 5:44 AM IST

GAMAKA-min

ಉಡುಪಿ: ಕರಾವಳಿ ಭಾಗದಲ್ಲಿ ಹಿಂದೆ ಇದ್ದ ಗಮಕ ಕಲೆಯನ್ನು ಪ್ರವರ್ಧಮಾನಕ್ಕೆ ತರುವ ಕೆಲಸ ಆಗಲಿ ಎಂದು ಗಮಕಿ ಚಂದ್ರಶೇಖರ ಕೆದ್ಲಾಯ ತಿಳಿಸಿದರು.

ಬೆಂಗಳೂರು ಕರ್ನಾಟಕ ಗಮಕ ಕಲಾ ಪರಿಷತ್‌, ಉಡುಪಿ ಜಿಲ್ಲಾ ಘಟಕ ಮತ್ತು ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಶನಿವಾರ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಗಮಕ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಾಯಕ ತಾನು ಅರ್ಥ ಮಾಡಿಕೊಂಡು ಭಾವವನ್ನು ಹಾಡಿದರೆ ಕೇಳುಗರಿಗೆ ಮುದ ನೀಡುತ್ತದೆ. ತಾಳ ಬದ್ಧ, ಛಂದೋಬದ್ಧವಾಗಿಯೂ ಹಾಡಬಹುದು. ಆದರೆ ಪದವಿಂಗಡಣೆ ಮಾಡುವಾಗ ಅನರ್ಥವಾಗದಂತೆ ಎಚ್ಚರ ವಹಿಸಬೇಕು. ಗಾಯನ ಹಾವ -ಭಾವ ಮಿತ ಆಗಿರಬೇಕು. ಭಾವವಿಲ್ಲದೆ ಹಾಡಿದಾಗ ಗಾಯನ ಮನ ಮುಟ್ಟುವುದಿಲ್ಲ. ಗಮಕ ಗಾಯನದ ಜತೆ ವ್ಯಾಖ್ಯಾನವು ಇರುತ್ತದೆ. ಕತೆ ಹೇಳುವುದು, ಅರ್ಥವಿವರಣೆ ನೀಡುವುದು ಇಷ್ಟಕ್ಕೆ ಸೀಮಿತವಾಗದೆ ಕಾವ್ಯ ಸೌಂದರ್ಯವನ್ನು ಧ್ವನಿಯಲ್ಲಿ ಬಿಂಬಿಸಬೇಕೆಂದು ಅವರು ಅಭಿಪ್ರಾಯಿಸಿದರು.

ಬೆಂಗಳೂರು ಕರ್ನಾಟಕ ಗಮಕ ಪರಿಷತ್‌ನ ಅಧ್ಯಕ್ಷೆ ಗಂಗಮ್ಮ ಕೇಶವಮೂರ್ತಿ, ಡಾ| ವಾಸುದೇವ ಎಚ್‌. ಆರ್‌. ಹೊಸಹಳ್ಳಿ ಮಾತನಾಡಿದರು.ಸಾಹಿತಿ ಬೆಳಗೋಡು ರಮೇಶ್‌ ಭಟ್‌ ಹಾಗೂ ಚಂದ್ರಶೇಖರ ಕೆದ್ಲಾಯ ಅವರನ್ನು ಸಮ್ಮಾನಿಸಲಾಯಿತು.

ದ.ಕ ಜಿಲ್ಲಾ ಅಧ್ಯಕ್ಷ ಪ್ರೊ| ಮಧೂರು ಮೋಹನ ಕಲ್ಲೂರಾಯ, ಉಡುಪಿ ಜಿಲ್ಲಾ ಗಮಕ ಕಲಾ ಪರಿಷತ್‌ನ ಅಧ್ಯಕ್ಷ ಸತೀಶ್‌ ಕುಮಾರ ಕೆಮ್ಮಣ್ಣು, ತಾ| ಘಟಕದ ಗೌರವಾಧ್ಯಕ್ಷ ಮಧೂರು ಬಾಲಸುಬ್ರಹ್ಮಣ್ಯಂ, ತಾ| ಘಟಕದ ಅಧ್ಯಕ್ಷೆ ಯಾಮಿನಿ ಪಿ.ಭಟ್‌, ಕಾರ್ಕಳ ತಾ| ಘಟಕದ ಅಧ್ಯಕ್ಷ ಪ್ರೋ| ನಾರಾಯಣ ಶೇಡಿಕಜೆ, ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಪ್ರದೀಪ ಕುಮಾರ್‌ ಕಲ್ಕೂರ, ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಪಿ.ಪಿ.ಸಿ ಕಾಲೇಜಿನ ಗೌರವ ಕಾರ್ಯದರ್ಶಿ ಡಾ| ಜಿ.ಎಸ್‌.ಚಂದ್ರಶೇಖರ್‌, ಕೋಶಾಧಿಕಾರಿ ಪ್ರದೀಪ್‌ ಕುಮಾರ್‌, ಪ್ರಾಂಶುಪಾಲ ಡಾ| ರಾಘವೇಂದ್ರ, ಸಮ್ಮೇಳನದ ಜತೆ ಕಾರ್ಯದರ್ಶಿ ಎ. ಶ್ರೀಕಾಂತ ಉಪಸ್ಥಿತರಿದ್ದರು.

ಸಮ್ಮೇಳನದ ಕಾರ್ಯದರ್ಶಿ ಪ್ರೊ| ಎಂ.ಎಲ್‌. ಸಾಮಗ ಸ್ವಾಗತಿಸಿ, ಪಡುಬಿದ್ರಿಯ ಡಾ| ರಾಘವೇಂದ್ರ ರಾವ್‌ ವಂದಿಸಿದರು. ಸುಜಯೀಂದ್ರ ಹಂದೆ ಎಚ್‌. ನಿರೂಪಿಸಿದರು.

ಗಮಕದಲ್ಲಿ ಹಲವು ಪ್ರಭೇದಗಳು: ಸ್ವಾಮೀಜಿ
ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡಿದರು. ಗಮಕವನ್ನು ಬಯಲಾಟ ತಾಳಮದ್ದಳೆ, ಹರಿಕತೆ, ವಾಚನ-ಪ್ರವಚನ ಮೊದಲಾದ ವಿಧಗಳಲ್ಲಿ ಗುರುತಿಸಬಹುದಾಗಿದೆ. ಆಚಾರ್ಯ ಮಧ್ವರ ಕಾಲದಿಂದಲೂ ಗುರುತಿ ಸಿಕೊಂಡಿರುವ ಈ ಗಮಕದ ಮೂಲವನ್ನು ಕಾಪಾಡಿಕೊಂಡು ಹೋಗುವಂತೆ ಅವರು ತಿಳಿಸಿದರು.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.