Zilla Panchayath 14, ತಾ.ಪಂ. 49 ಸ್ಥಾನ ಮಹಿಳೆಯರಿಗೆ ಮೀಸಲು

ಜಿ.ಪಂ., ತಾ. ಪಂ. ಶೀಘ್ರ ಚುನಾವಣೆ ಅನುಮಾನ; ತಲೆಕೆಳಗಾದ ರಾಜಕೀಯ ಪಕ್ಷಗಳ ಲೆಕ್ಕಾಚಾರ

Team Udayavani, Feb 7, 2024, 7:15 AM IST

Zilla Panchayath 14, ತಾ.ಪಂ. 49 ಸ್ಥಾನ ಮಹಿಳೆಯರಿಗೆ ಮೀಸಲು

ಉಡುಪಿ: ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾಯಿತ ಸದಸ್ಯ ಸ್ಥಾನಗಳಿಗೆ ರಾಜ್ಯ ಸರಕಾರ ಮೀಸಲು ನಿಗದಿಪಡಿಸಿ ಆದೇಶ ಹೊರಡಿಸಿದ್ದರೂ ಲೋಕಸಭೆ ಚುನಾವಣೆ ಬಳಿಕ ಈ ಸ್ಥಾನಗಳಿಗೆ ಚುನಾವಣೆ ನಡೆಯುವ ಸಾಧ್ಯತೆಗಳು ಹೆಚ್ಚಿವೆ.

ಸದ್ಯ ಲಭ್ಯ ಮಾಹಿತಿ ಪ್ರಕಾರ ಎಲ್ಲ ಪಕ್ಷಗಳೂ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿವೆ. ಇದರ ಮಧ್ಯದಲ್ಲಿ ಜಿ.ಪಂ.,ತಾ.ಪಂ. ಗಳ ಸ್ಥಾನಕ್ಕೆ ಚುನಾವಣೆ ನಡೆದರೆ ನಿರ್ವಹಣೆ ಕಷ್ಟ. ಹಾಗಾಗಿ ಸದ್ಯಕ್ಕೆ ಈ ಚುನಾವಣೆ ಕನಿಷ್ಠ ಐದಾರು ತಿಂಗಳು ಮುಂದಕ್ಕೆ ಹೋಗುವ ಸಾಧ್ಯತೆ ಇದೆ.

ಮುಂದಿನ ಹಂತದಲ್ಲಿ ಜಿ. ಪಂ. ತಾ. ಪಂ. ಚುನಾವಣೆಗೆ ಸಂಬಂಧಿಸಿ ಕ್ಷೇತ್ರವಾರು ಮೀಸಲು ನಿಗದಿ ಆಗಬೇಕಿದ್ದು, ಬಳಿಕ ಆಕ್ಷೇಪಣೆ ಆಹ್ವಾನಿಸಿ ಅಂತಿಮಗೊಳಿಸುವುದು ಬಾಕಿ ಇದೆ. ಈ ಪ್ರಕ್ರಿಯೆ ಯಾವಾಗ ಪೂರ್ಣಗೊಳ್ಳಲಿದೆ ಮತ್ತು ಚುನಾವಣೆ ಯಾವಾಗ ನಡೆಯಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಫೆಬ್ರವರಿ ಮೊದಲ, ಎರಡನೇ ವಾರದಲ್ಲಿ ಮಿಸಲು ನಿಗದಿ ಬಿಡುಗಡೆಯಾದರೆ 15 ಅಥವಾ 7 ದಿನ ಅಕ್ಷೇಪಣೆಗೆ ಕಾಲಾವಕಾಶ ಇರಬಹುದು.

ಯಾರೂ ಆಕ್ಷೇಪ ಸಲ್ಲಿಸದಿದ್ದರೆ ತತ್‌ಕ್ಷಣ ಚುನಾವಣೆ ಪ್ರಕ್ರಿಯೆ ನಡೆಸಲು ಅಡ್ಡಿಯಿಲ್ಲ. ಇಲ್ಲದಿದ್ದರೆ ಮಾರ್ಚ್‌ ತಿಂಗಳಲ್ಲಿ ಪರೀಕ್ಷೆ ಸಮಯವಾದ್ದರಿಂದ ಚುನಾವಣೆ ಪ್ರಕ್ರಿಯೆ ಸಾಮಾನ್ಯವಾಗಿ ನಡೆಯದು. ಮಾರ್ಚ್‌ ತಿಂಗಳ ವೇಳೆಗೆ ಲೋಕಸಭೆ ಚುನಾವಣೆಗೆ ಕಾವು ಏರಿರುವ ಸಂಭವವಿದೆ. ಹಾಗಾಗಿ ಜಿ. ಪಂ. , ತಾ. ಪಂ. ಚುನಾವಣೆ ಆಗಸ್ಟ್‌, ಸೆಪ್ಟಂಬರ್‌ನಲ್ಲಿ ನಡೆಯಬಹುದು ಎಂಬ ಲೆಕ್ಕಾಚಾರ ರಾಜಕೀಯ ಪಡಸಾಲೆಯ ವಲಯದಲ್ಲಿ ಇದೆ.
ಈಗಾಗಲೇ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌, ಮತದಾರರ ಪಟ್ಟಿ ಅಂತಿಮವಾದ ಹಿನ್ನೆಲೆಯಲ್ಲಿ ಆಕಾಂಕ್ಷಿಗಳಲ್ಲಿ ಜಾತಿವಾರು ಹಾಗೂ ಕ್ಷೇತ್ರ ವಾರು ಸ್ಥಿತಿಗತಿಗಳ ಲೆಕ್ಕಾಚಾರ ಆರಂಭವಾಗಿದ್ದವು. ಯಾವ ಕ್ಷೇತ್ರದಲ್ಲಿ ಹೇಗಿದೆ ಎಂಬುದರ ಲೆಕ್ಕಾಚಾರವನ್ನೂ ಮುಖಂಡರು ಹಾಕಿದ್ದರು. ಲೋಕಸಭೆ ಚುನಾವಣೆಗೂ ಮುನ್ನ ಸ್ಥಳೀಯ ಅಧಿಕಾರವನ್ನು ಭದ್ರಪಡಿಸಲು ರಣತಂತ್ರ ರೂಪಿಸಲಾಗಿತ್ತು. ಆದರೀಗ ಎಲ್ಲ ರಾಜಕೀಯ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಉಡುಪಿ ಜಿಲ್ಲಾ ಪಂಚಾಯತ್‌ನ 28 ಕ್ಷೇತ್ರಗಳ ಪೈಕಿ 14 ಹಾಗೂ ತಾಲೂಕು ಪಂಚಾಯ ತ್‌ನ 95 ಕ್ಷೇತ್ರಗಳ ಪೈಕಿ 49 ಸ್ಥಾನಗಳು ಮಹಿಳೆಯರಿಗೆ ಮೀಸಲಿ ರಿಸಿ ಆದೇಶ ಹೊರಡಿಸಿದೆ.

ಜಿ.ಪಂ. -ತಾ.ಪಂ. ಚುನಾಯಿತ ಸದಸ್ಯರ ಕ್ಷೇತ್ರಗಳ ಸೀಮಾ ಗಡಿ ಹಾಗೂ ಚುನಾಯಿ ತರಾಗಬೇಕಾದ ಸದಸ್ಯರ ಸಂಖ್ಯೆಯನ್ನು ನಿರ್ಧರಿಸಿ ಆಯೋಗ ಶಿಫಾರಸು ಮಾಡಿರುವ ವರದಿ ಯನ್ನು ಅಂಗೀಕರಿಸಿರುವ ರಾಜ್ಯ ಸರಕಾರ ಮೀಸಲು ನಿಗದಿಪಡಿಸಿ ಈ ಅಧಿಸೂಚನೆ ಹೊರಡಿಸಿದೆ.

ಜಿ.ಪಂ. ಮೀಸಲಾತಿ ವಿವರ
ಜಿ.ಪಂ.ನ 26 ಕ್ಷೇತ್ರಗಳಲ್ಲಿ ಮಹಿಳೆಯರಿಗೆ 14 ಸ್ಥಾನಗಳು ಸಿಕ್ಕಿವೆ. ಅನುಸೂಚಿತ ಜಾತಿಗೆ ಎರಡು ಸ್ಥಾನಗಳನ್ನು ನೀಡಿದ್ದು. ಅದರಲ್ಲಿ ಒಂದು ಮಹಿಳೆಗೆ ಮೀಸಲಿಟ್ಟಿದೆ. ಅನುಸೂಚಿತ ಪಂಗಡ ಒಂದು ಸ್ಥಾನದಲ್ಲಿ ಒಂದು ಮಹಿಳೆಗೆ, ಹಿಂದುಳಿದ ವರ್ಗ (ಅ)ದಲ್ಲಿರುವ ಒಟ್ಟು 7 ಸ್ಥಾನಗಳಲ್ಲಿ 4 ಮಹಿಳೆಯರಿಗೆ ಹಾಗೂ ಹಿಂದುಳಿದ ವರ್ಗ (ಬಿ) 2 ಸ್ಥಾನದಲ್ಲಿ ಒಬ್ಬ ಪುರುಷ, ಒಬ್ಬ ಮಹಿಳೆಗೆ ಮೀಸಲಿಡಲಾಗಿದೆ. ಸಾಮಾನ್ಯ ಸ್ಥಾನಗಳನ್ನು ಒಟ್ಟು 15ರಲ್ಲಿ 7 ಸ್ಥಾನಗಳು ಮಹಿಳೆಯರಿಗೆ ಮೀಸಲಿಟ್ಟಿದೆ.

ತಾ.ಪಂ. ವಿವರ
7 ತಾಲೂಕು ಪಂಚಾಯತ್‌ಗಳಲ್ಲಿ ಒಟ್ಟು ಇರುವ 95 ಸ್ಥಾನಗಳ ಪೈಕಿ ಮಹಿಳೆಯರಿಗೆ 49 ಸ್ಥಾನಗಳು ನಿಗದಿಯಾಗಿವೆ. ಹೆಬ್ರಿ 7 ಸ್ಥಾನದಲ್ಲಿ 4 ಮಹಿಳೆಯರಿಗೆ, ಬೈಂದೂರು 11 ಸ್ಥಾನದಲ್ಲಿ 6 ಮಹಿಳೆಯರಿಗೆ, ಕಾಪು 12 ಸ್ಥಾನದಲ್ಲಿ 6 ಮಹಿಳೆಯರಿಗೆ, ಉಡುಪಿ 13 ಸ್ಥಾನದಲ್ಲಿ 7 ಮಹಿಳೆ ಯರಿಗೆ, ಬ್ರಹ್ಮಾವರ, ಕಾರ್ಕಳ ತಲಾ 16 ಸ್ಥಾನದಲ್ಲಿ 8 ಮಹಿಳೆಯರಿಗೆ, ಕುಂದಾಪುರ 20 ಸ್ಥಾನದಲ್ಲಿ 10 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.

-ಅವಿನ್‌ ಶೆಟ್ಟಿ

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.