ಕರಾವಳಿಯಲ್ಲಿ ಇಂದಿನಿಂದ ದೀಪಾವಳಿ ಸಂಭ್ರಮ


Team Udayavani, Nov 14, 2020, 5:59 AM IST

Udupi-Dee

ಮಂಗಳೂರು/ಉಡುಪಿ: ಕರಾವಳಿಯಲ್ಲಿ ಶನಿವಾರದಿಂದ ದೀಪಾವಳಿ ಸಂಭ್ರಮ. ಬೆಳಕಿನ ಹಬ್ಬಕ್ಕಾಗಿ ಜನ ಬಿರುಸಿನ ಸಿದ್ಧತೆ ನಡೆಸುತ್ತಿದ್ದು, ವಿವಿಧೆಡೆ ಖರೀದಿ ಪ್ರಕ್ರಿಯೆಯೂ ಶುಕ್ರವಾರ ಜೋರಾಗಿತ್ತು.

ಲಕ್ಷ್ಮೀಪೂಜೆ ಹಿನ್ನೆಲೆಯಲ್ಲಿ ಜನ ಹೂ, ಹಣ್ಣು ಖರೀದಿಯಲ್ಲಿ ತೊಡಗಿದ್ದರು. ಆಪೆ¤àಷ್ಟರಿಗೆ ಉಡುಗೊರೆ ನೀಡಲು ಸಿಹಿತಿಂಡಿ ಖರೀದಿಯೂ ಜೋರಾಗಿತ್ತು. ದೇಗುಲಗಳಲ್ಲಿ ಲಕ್ಷ್ಮೀಪೂಜೆ, ವಾಹನ ಪೂಜೆ ಸಹಿತ ವಿವಿಧ ಪೂಜೆ ಪುನಸ್ಕಾರಗಳು ನಡೆಯಲಿದ್ದು, ಸಿದ್ಧತೆಗಳು ಅಂತಿಮಗೊಂಡಿವೆ. ಮನೆಮನೆಗಳಲ್ಲಿಯೂ ಬೆಳಕಿನ ಹಬ್ಬವನ್ನು ಸ್ವಾಗತಿಸಲು ಜನ ಲೈಟಿಂಗ್ಸ್‌ ಅಳವಡಿಸಿ ಹಬ್ಬವನ್ನು ಆಕರ್ಷಣೀಯ ಗೊಳಿಸಲು ಅಣಿಯಾಗಿದ್ದಾರೆ.

ನಾಡಿನ ವಿವಿಧ ಭಾಗಗಳಿಂದ ತರಕಾರಿಗಳು ಮಾರುಕಟ್ಟೆಗೆ ಬಂದಿರುವುದರಿಂದ ನವರಾತ್ರಿ, ಗಣೇಶ ಚತುರ್ಥಿಯಂತೆ ತರಕಾರಿಗಳ ಬೆಲೆ ಏರಿಕೆ ಕಂಡುಬರಲಿಲ್ಲ. ಹೂವುಗಳೂ ವಿವಿಧ ಕಡೆಗಳಿಂದ ಆಗಮಿಸಿದ್ದು ಪೂಜೆಗಾಗಿ ಹೂವುಗಳ ಖರೀದಿ ನಡೆಯಿತು. ಮಣ್ಣಿನ ಮತ್ತು ಗೋಮಯದ ಹಣತೆ, ಸಾಂಪ್ರದಾಯಿಕ ಗೂಡು ದೀಪಗಳ ಮಾರಾಟವೂ ನಡೆಯಿತು. ಇದೇ ಮೊದಲ ಬಾರಿಗೆಂಬಂತೆ ಕೊರೊನೋತ್ತರದಲ್ಲಿ ಜನರು ಮಾರುಕಟ್ಟೆಗೆ ಭಾರೀ ಸಂಖ್ಯೆಯಲ್ಲಿ ತೆರಳಿದ್ದು ಬಹುತೇಕ ಕಡೆಗಳಲ್ಲಿ ವಾಹನ ಸಂಚಾರ ದಟ್ಟಣೆ ಕಂಡುಬಂತು. ಆಯುರ್ವೇದ ಕಾಲೇಜುಗಳಲ್ಲಿ ಶುಕ್ರವಾರ ರಾಷ್ಟ್ರೀಯ ಆಯುರ್ವೇದ ದಿನದ ಅಂಗವಾಗಿ ಧನ್ವಂತರಿ ಜಯಂತಿಯನ್ನು ಆಚರಿಸಲಾಯಿತು.

ಉಡುಪಿ ಶ್ರೀಕೃಷ್ಣಮಠದಲ್ಲಿ ಶುಕ್ರವಾರ ರಾತ್ರಿ ಜಲಪೂರಣ- ಗಂಗಾಪೂಜೆಯನ್ನು ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಸಲಾಯಿತು. ಇದೇ ರೀತಿ ಮನೆಗಳಲ್ಲಿಯೂ ಜಲಪೂರಣವನ್ನು ನಡೆಸಲಾಯಿತು. ಶನಿವಾರ ಬೆಳಗ್ಗೆ ತೈಲಾಭ್ಯಂಗವನ್ನು ನಡೆಸಲಾಗುತ್ತದೆ. ಮನೆ ಹೊರಗೆ ಗೂಡುದೀಪಗಳಲ್ಲಿ ದೀಪಗಳನ್ನಿ ರಿಸುವುದು ಶನಿವಾರದಿಂದ ಆರಂಭ ವಾಗಲಿದೆ. ಕೆಲವೆಡೆ ಶನಿವಾರ ಸಂಜೆ, ಕೆಲವೆಡೆ ರವಿವಾರ ಸಂಜೆ ಬಲೀಂದ್ರ ಪೂಜೆಯನ್ನು ನಡೆಸಲಾಗುತ್ತದೆ. ರವಿವಾರ, ಸೋಮವಾರ ಗೋಪೂಜೆ ನಡೆಯುತ್ತವೆ.

ಬಿರುಸಿನ ವ್ಯವಹಾರ
ಸರಕಾರವು ಹಸುರು ಪಟಾಕಿಯನ್ನೇ ಉಪಯೋಗಿಸಬೇಕು ಎಂದು ಆದೇಶಿಸಿರುವ ಹಿನ್ನೆಲೆಯಲ್ಲಿ ಹಸುರು ಪಟಾಕಿಗಳ ಮಾರಾಟ ಬಿರುಸಾಗಿತ್ತು. ಗೋಮಯ ಹಣತೆಗಳು, ಸಾದಾ ಮಣ್ಣಿನ ಹಣತೆಗಳಿಗಾಗಿ ಜನರು ಹೆಚ್ಚು ಬೇಡಿಕೆ ಮಂಡಿಸುತ್ತಿರುವುದು ಕಂಡುಬಂತು. ಚೀನೀ ಉತ್ಪನ್ನಗಳ ಬಳಕೆಗೆ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಗೂಡುದೀಪಗಳನ್ನು ಜನರು ಹೆಚ್ಚು ಖರೀದಿಸುತ್ತಿದ್ದುದು ಕಂಡುಬಂತು. ಶುಕ್ರವಾರ ಸಂಜೆಯ ವೇಳೆಗೆ ದ.ಕ. ಮತ್ತು ಉಡುಪಿಯ ಕೆಲವು ಭಾಗಗಳಲ್ಲಿ ಮಳೆಯಾಗಿದ್ದು, ದೀಪಾವಳಿಗೆ ನಾಲ್ಕು ಹನಿಯಾದರೂ ಮಳೆಯಾಗುತ್ತದೆ ಎಂಬ ವಾಡಿಕೆಯ ಮಾತಿಗೆ ಬಲ ನೀಡಿತ್ತು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.