ನೀರಿಗೆ ಬರವಿಲ್ಲ; ಆದರೆ ಕುಡಿಯಲು ಬರಲ್ಲ

ಕನ್ನಡಕುದ್ರುವಿನಲ್ಲಿ ಕುಡಿಯುವ ನೀರಿನ ಸಮಸ್ಯೆ

Team Udayavani, Apr 10, 2019, 6:30 AM IST

bara

ಹೆಮ್ಮಾಡಿ: ಇಲ್ಲಿ ನೀರಿಗೆ ಯಾವುದೇ ರೀತಿಯ ಬರವಿಲ್ಲ. ಮೂರು ಸುತ್ತಲೂ ಸಮೃದ್ಧ ವಾದ ನೀರಿದೆ. ಆದರೆ ಅದು ಕುಡಿಯಲು ಮಾತ್ರ ಯೋಗ್ಯವಲ್ಲ. ಕಾರಣ ಉಪ್ಪು ನೀರು. ಇದು ಹೆಮ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಕನ್ನಡಕುದ್ರು ಜನರ ದುಃಸ್ಥಿತಿ.

ಕನ್ನಡಕುದ್ರುವಿನಲ್ಲಿ ಸುಮಾರು 40 – 50 ಮನೆಗಳಿವೆ. ಸಾವಿರಾರು ಮಂದಿ ಇಲ್ಲಿ ನೆಲೆಸಿದ್ದಾರೆ. ಸುತ್ತಲೂ ನೀರಿದ್ದರೂ ಒಂದು ಕೊಡಪಾನ ನೀರಿಗೆ ಕಾಯುವ ಪರಿಸ್ಥಿತಿ ಇಲ್ಲಿನ ಜನರದ್ದು.

ಎರಡು ದಿನಕ್ಕೊಮ್ಮೆ ನೀರು
ಹೆಮ್ಮಾಡಿ ಗ್ರಾ.ಪಂ. ವತಿಯಿಂದ ದಿನ ಬಿಟ್ಟು ದಿನ ನಳ್ಳಿ ನೀರು ಪೂರೈಸಲಾಗುತ್ತಿದೆ. ಆದರೆ ಅದು ಎಲ್ಲಿಯೂ ಸಾಲದು ಎನ್ನುವ ಜನ, ಕೆಲವರಿಗೆ 7-8 ಕೊಡ ಸಿಕ್ಕಿದರೆ, ಇನ್ನು ಕೆಲವು ಮನೆಗಳಿಗೆ 2-3 ಕೊಡ ಅಷ್ಟೇ ಸಿಗುತ್ತಿದೆ. ಇದು ಎರಡು ದಿನಕ್ಕೆ ಎಲ್ಲಿ ಸಾಕು ಎಂಬುದು ಇಲ್ಲಿನ ನಿವಾಸಿ ಲಲಿತಾ ಅವರ ಪ್ರಶ್ನೆ.

15 ದಿನಗಳಿಂದ ಬಂದಿರಲಿಲ್ಲ ನೀರು
ಇಲ್ಲಿ ಒಂದು ವಾರದ ಹಿಂದೆ 15 ದಿನಗಳ ಕಾಲ ಪಂಚಾಯತ್‌ನಿಂದ ನೀರೇ ಬಂದಿರಲಿಲ್ಲ. ನಳ್ಳಿ ಮೂಲಕ ಪೂರೈಸುವ ನೀರು ಸ್ಥಗಿತಗೊಂಡಿತ್ತು. ಆ ಬಳಿಕ ಇಲ್ಲಿನ ಜನರೆಲ್ಲ ಸೇರಿ ಪಂಚಾಯತ್‌ಗೆ ಮನವಿ ಸಲ್ಲಿಸಿದ ಬಳಿಕ ಈಗ ವಾರದಿಂದ ಅಂದರೆ ಎ. 1ರಿಂದ ಎರಡು ದಿನಕ್ಕೊಮ್ಮೆ ನೀರು ಕೊಡಲಾಗುತ್ತಿದೆ ಎನ್ನುತ್ತಾರೆ ಶಾರದಾ.

ಶಾಶ್ವತ ಪರಿಹಾರಕ್ಕೆ ಆಗ್ರಹ
ಪ್ರತೀ ವರ್ಷ ಫೆಬ್ರವರಿಯಿಂದ ಆರಂಭಗೊಂಡು ಮಾರ್ಚ್‌, ಎಪ್ರಿಲ್‌, ಮೇ ನಲ್ಲಿ ಕನ್ನಡಕುದ್ರುವಿನ ಜನ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಸಮಸ್ಯೆಗೆ ಮುಂದಿನ ದಿನಗಳಲ್ಲಿಯಾದರೂ ಶಾಶ್ವತ ಪರಿಹಾರ ಸಿಗಲಿ ಎನ್ನುವುದು ಇಲ್ಲಿನ ಜನರ ಆಗ್ರಹ.

ಗರಿಷ್ಠ ಪ್ರಯತ್ನ
ಕನ್ನಡಕುದ್ರುವಿಗೆ ಈಗ ಪಂಚಾಯತ್‌ ವತಿಯಿಂದ ಎರಡು ದಿನಕ್ಕೊಮ್ಮೆ ನಳ್ಳಿ ನೀರು ಕೊಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಸ್ವಲ್ಪ ಸಮಸ್ಯೆಯಾಗಿತ್ತು. ಆದರೆ ಈಗ ಕೊಡಲಾಗುತ್ತಿದೆ. ಅಲ್ಲಿರುವ ನೀರಿನ ಮೂಲಗಳಾದ ಬಾವಿ, ಕೊಳವೆ ಬಾವಿಗಳಲ್ಲಿ ಉಪ್ಪು ನೀರಿನಿಂದಾಗಿ ನೀರಿನ ಸಮಸ್ಯೆಯಿದೆ. ಪಂಚಾಯತ್‌ನಿಂದ ನೀರಿನ ಸಮಸ್ಯೆಯಾಗದಂತೆ ಗರಿಷ್ಠ ಪ್ರಯತ್ನ ಮಾಡಲಾಗುವುದು.
-ಮಂಜಯ್ಯ ಬಿಲ್ಲವ, ಹೆಮ್ಮಾಡಿ ಗ್ರಾ.ಪಂ. ಪಿಡಿಒ

ನೂರಲ್ಲ ಐನೂರು ಕೊಡ್ತೇವೆ
ಪಂಚಾಯತ್‌ನಿಂದ ಸರಿಯಾಗಿ ನೀರು ಕೊಡ್ತಿಲ್ಲ. 2 ದಿನಕ್ಕೊಮ್ಮೆ ಕೊಡುತ್ತಿದ್ದರೂ ಅದು ಇಲ್ಲಿರುವ 40ಕ್ಕೂ ಹೆಚ್ಚಿನ ಮನೆಗಳಿಗೆ ಸಾಕಾಗುತ್ತಿಲ್ಲ. ಆದರೂ ತಿಂಗಳು – ತಿಂಗಳು ನೀರಿನ ಬಿಲ್‌ ತೆಗೆದುಕೊಂಡು ಬರುತ್ತಾರೆ. ನೀವು ನಮಗೆ ಸರಿಯಾಗಿ ಕುಡಿಯುವ ನೀರು ಕೊಡಿ. ನಾವು ತಿಂಗಳಿಗೆ ನೂರಲ್ಲ, ಐನೂರು ರೂಪಾಯಿ ಬೇಕಾದರೆ ನೀರಿನ ಬಿಲ್‌ ಕೊಡ್ತೇವೆ.
-ಗಣೇಶ್‌, ಕನ್ನಡಕುದ್ರು ನಿವಾಸಿ

  • ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.