ಭಾವನಾತ್ಮಕ ವಿಚಾರಗಳಿಗೆ ಮತ ನೀಡಬೇಡಿ


Team Udayavani, Oct 31, 2018, 8:49 AM IST

bavanatmaka.png

ಕುಂದಾಪುರ: ಹಿಂದುತ್ವದ ರಕ್ಷಣೆಯಲ್ಲಿ ನಾನು ಬಿಜೆಪಿಗಿಂತ ಒಂದು ಹೆಜ್ಜೆ ಮುಂದಿದ್ದೇನೆ. ಕರಾವಳಿಯಲ್ಲಿ ಹಿಂದುತ್ವ, ಧರ್ಮದ ಹೆಸರಿನಲ್ಲಿ ಸಂಘರ್ಷ ಹುಟ್ಟು ಹಾಕಲಾಗುತ್ತಿದ್ದು, ಅಮಾಯಕರ ಸಾವಿನಲ್ಲಿ ಅಧಿಕಾರದ ಗದ್ದುಗೆ ಏರಲಾಗುತ್ತಿದೆ. ಇದರ ಬದಲು ಅಭಿವೃದ್ಧಿ ಆಧಾರದಲ್ಲಿ ಮತ ಚಲಾಯಿಸಿ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಅವರು ಮಂಗಳವಾರ ತ್ರಾಸಿ ಕೊಂಕಣ ಖಾರ್ವಿ ಸಭಾಭವನದಲ್ಲಿ ಜೆಡಿಎಸ್‌ ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.

ಪರಿಹಾರಕ್ಕೆ ಬದ್ಧ
ಕೇಂದ್ರದ ತೀರ್ಮಾನಗಳಿಂದಾಗಿ ಮೀನುಗಾರರಿಗೆ ಸೀಮೆ ಎಣ್ಣೆ ಪಡೆಯಲು ತೊಂದರೆಯಾಗಿದೆ. ಸಬ್ಸಿಡಿ ಸೀಮೆಎಣ್ಣೆ /ಡೀಸೆಲ್‌ಗೆ ಶಾಶ್ವತ ಪರಿಹಾರ, ಮೀನುಗಾರರ ಸಮಸ್ಯೆ, ಕೋಲ್ಡ್‌ ಸ್ಟೋರೇಜ್‌ಗೆ ಆರ್ಥಿಕ ನೆರವು, ಮೀನುಗಾರರ ಸಮಸ್ಯೆ ಬಗೆ ಹರಿಸಲು ಸಲಹೆ ಕೊಡಿ, ಪರಿಹಾರಕ್ಕೆ ಮೈತ್ರಿ ಸರಕಾರ ಬದ್ಧ. ಈ ಕ್ಷೇತ್ರದ ಸಂಸದರಾಗಿದ್ದ ಅಪ್ಪ – ಮಗ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಕೆಲಸ ಮಾಡದಿದ್ದರೆ ಬರಲಾರೆ
ಗೋಪಾಲ ಪೂಜಾರಿ ಕೇಳಿದ ಬಂದರು ಅಭಿವೃದ್ಧಿಗೆ ಅನುದಾನ ನೀಡಬಹುದು. ಮುಂದಿನ ಚುನಾವಣೆ ಒಳಗೆ ಮೀನುಗಾರರ ಸಮಸ್ಯೆ ಬಗೆ ಹರಿಸದಿದ್ದರೆ ಮರಳಿ ಮತಯಾಚನೆಗೆ ಬರುವುದಿಲ್ಲ ಎಂದರು.
ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಸಚಿವ ವೆಂಕಟ್ರಾವ್‌ ನಾಡಗೌಡ ಮಾತನಾಡಿದರು.

ಡಾ| ಜಯಮಾಲಾ, ವಿಧಾನ ಎಸ್‌.ಎಲ್‌. ಭೋಜೇಗೌಡ, ಪ್ರಮೋದ್‌ ಮಧ್ವರಾಜ್‌, ವಿನಯ ಕುಮಾರ್‌ ಸೊರಕೆ, ರಮಾನಾಥ ರೈ, ಗೋಪಾಲ ಭಂಡಾರಿ ಕಾರ್ಕಳ, ಜನಾರ್ದನ ತೋನ್ಸೆ, ಅಬ್ದುಲ್‌ ಗಫ‌ೂರ್‌, ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು, ರಾಜಶೇಖರ ಕೋಟ್ಯಾನ್‌, ಮಾಣಿಗೋಪಾಲ, ಮಹ್ಮದ್‌ ವಿಟ್ಲ, ಮಮತಾ ಗಟ್ಟಿ ಬಂಟ್ವಾಳ, ರಾಜು ಪೂಜಾರಿ ಬೈಂದೂರು, ಜಿ.ಎ. ಬಾವಾ, ಯೋಗೀಶ್‌ ಶೆಟ್ಟಿ, ರವಿ ಶೆಟ್ಟಿ ಇದ್ದರು.

ಮರಳು ದಂಧೆಗೆ ಕ್ರಮ
2006ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ಸಮಸ್ಯೆ ಇರಲಿಲ್ಲ. ಅನಂತರ ಬಂದ ಬಿಜೆಪಿ ಸರಕಾರ ಅದನ್ನು ದಂಧೆಯಾಗಿಸಿತು. ಕೇಂದ್ರದ ನೀತಿ ನಿಯಮದಿಂದಾಗಿ ಮರಳು ತೆಗೆಯುವುದು ಸುಲಭವಲ್ಲ. ಸಾಂಪ್ರದಾಯಿಕ ಮರಳುಗಾರಿಕೆಯ 93 ಕುಟುಂಬಗಳಿಗೆ ಅನುಮತಿ ಕೊಡಲು ಜಿಲ್ಲಾಡಳಿತ ಸಿದ್ಧವಿದೆ. ಆದರೆ ಬಿಜೆಪಿ ಯವರು 170 ಮಂದಿಗೆ ನೀಡಬೇಕೆಂದು ಕೇಳುತ್ತಿದ್ದಾರೆ. ಮರಳು ಸಮಸ್ಯೆಗೆ ತೆರೆ ಎಳೆಯಲು ಕಠಿನ ಕ್ರಮ ಕೈಗೊಳ್ಳುವ ಚಿಂತನೆ ನಡೆದಿದೆ ಎಂದರು.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.