ವೈದ್ಯರ ಮುಷ್ಕರ: ಕರಾವಳಿಯಲ್ಲಿ  ಆಂಶಿಕ ಪ್ರತಿಕ್ರಿಯೆ


Team Udayavani, Jul 29, 2018, 9:45 AM IST

doctors.png

ಉಡುಪಿ/ಮಂಗಳೂರು: ಕೇಂದ್ರ ಸರಕಾರ ಜಾರಿಗೊಳಿಸಲು ಮುಂದಾಗಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಮಸೂದೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘಟನೆ ನೀಡಿದ ಕರೆಯಂತೆ ಶನಿವಾರ ಉಡುಪಿ ಮತ್ತು ದ.ಕ.  ಜಿಲ್ಲೆಗಳಲ್ಲಿ ಕೆಲವು ಖಾಸಗಿ ವೈದ್ಯರು ಹೊರ‌ಹೋಗಿ ವಿಭಾಗಗಳಲ್ಲಿ ಸೇವೆ ಒದಗಿಸದೆ ಮುಷ್ಕರ ನಡೆಸಿದರು. ಒಟ್ಟಾರೆಯಾಗಿ ಉಭಯ ಜಿಲ್ಲೆಗಳಲ್ಲಿ ಮುಷ್ಕರಕ್ಕೆ ಆಂಶಿಕ ಪ್ರತಿಕ್ರಿಯೆ ದೊರೆತಿದೆ.

ಅಜ್ಜರಕಾಡು ಆಸ್ಪತ್ರೆ ಆಸರೆ
ಉಡುಪಿ ನಗರದ ಹಲವಾರು ಮಂದಿ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆದುಕೊಂಡರು. ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಭಾರೀ ಹೆಚ್ಚಳವಾಗಿರಲಿಲ್ಲ. ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಅಲ್ಲಿ ಚಿಕಿತ್ಸೆ ದೊರೆಯದ ಕೆಲವರು ಜಿಲ್ಲಾಸ್ಪತ್ರೆಗೆ ಬಂದಿದ್ದರು. ಹೊರರೋಗಿ ವಿಭಾಗದಲ್ಲಿ ಸಂಜೆಯವರೆಗೆ 548 ಮಂದಿ ನೋಂದಾಯಿಸಿದ್ದರು. ಎಲ್ಲ ವಿಭಾಗಗಳ ವೈದ್ಯರು ಸೇವೆ ಸಲ್ಲಿಸಿದರು. ರಜೆಯಲ್ಲಿ ತೆರಳಿದ್ದ ಸಿಬಂದಿಯನ್ನು ಕೂಡ ಕರೆಸಿಕೊಳ್ಳಲಾಗಿತ್ತು. ರೋಗಿಗಳಿಗೆ ವಿಳಂಬವಾಗದಂತೆ ಸೇವೆ ಒದಗಿಸಲಾಗಿದೆ ಎಂದು ಜಿಲ್ಲಾ ಸರ್ಜನ್‌ ಡಾ| ಮಧುಸೂದನ್‌ ನಾಯಕ್‌ ತಿಳಿಸಿದ್ದಾರೆ.

“ಉಡುಪಿ ಜಿಲ್ಲೆಯಲ್ಲಿ ಸುಮಾರು 400ರಿಂದ 500 ಮಂದಿ ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡರು. ಸಂಜೆ 6ರ ವರೆಗೂ ಒಪಿಡಿಯನ್ನು ತೆರೆದಿರಲಿಲ್ಲ. ತುರ್ತುಸೇವೆ ಹಾಗೂ ಇತರ ವಿಭಾಗಗಳ ಸೇವೆಗಳನ್ನು ನೀಡಲಾಯಿತು. ಜಿಲ್ಲೆಯಲ್ಲಿ ಮುಷ್ಕರ  ಯಶಸ್ವಿಯಾಗಿದೆ’ ಎಂದು ಭಾರತೀಯ ವೈದ್ಯಕೀಯ ಸಂಘಟನೆ ಉಡುಪಿ ಕರಾವಳಿಯ ಅಧ್ಯಕ್ಷ ಡಾ| ವೈ. ಸುದರ್ಶನ್‌ ರಾವ್‌ ಪ್ರತಿಕ್ರಿಯಿಸಿದ್ದಾರೆ.

ಸಂಘಟನೆಯ ನೇತೃತ್ವದಲ್ಲಿ ಡಿಸಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರ ಮುಖಾಂತರ ಪ್ರಧಾನಿ ಮೋದಿಯವರಿಗೆ ಮನವಿ ಸಲ್ಲಿಸಲಾಯಿತು.

ಕೆಎಂಸಿ ಯಥಾಸ್ಥಿತಿ 
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಎಂದಿನಂತೆ ಸೇವೆ ನೀಡಲಾಯಿತು. ಕುಂದಾಪುರ ತಾಲೂಕಿನಲ್ಲಿಯೂ ಒಪಿಡಿ ಸ್ಥಗಿತ ಕರೆಗೆ ಪೂರ್ಣ ಪ್ರತಿಕ್ರಿಯೆ ದೊರೆಯಲಿಲ್ಲ. ಸರಕಾರಿ ಆಸ್ಪತ್ರೆಯಲ್ಲಿ ಪ್ರತಿದಿನದಂತೆಯೇ ರೋಗಿಗಳ ಸಂಖ್ಯೆ ಇತ್ತು. ಕಾರ್ಕಳದಲ್ಲಿ ಕೆಲವು ಕ್ಲಿನಿಕ್‌ಗಳಲ್ಲಿ ಮಾತ್ರ ಒಪಿಡಿ ಸೇವೆ ಸ್ಥಗಿತವಾಗಿತ್ತು. 

ಸೇವೆ ಅಬಾಧಿತ
ಮಂಗಳೂರು:
ಇಲ್ಲಿನ ಖಾಸಗಿ ವೈದ್ಯರು ನಗರದ ಐಎಂಎ ಸಭಾಂಗಣ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ವೈದ್ಯರ ಮುಷ್ಕರದಿಂದ ನಗರದ ಕೆಲವು ಆಸ್ಪತ್ರೆಗಳಲ್ಲಿ ವೈದ್ಯರು ಅಲಭ್ಯವಾದರೂ ರೋಗಿಗಳಿಗೆ ಯಾವುದೇ ಸಮಸ್ಯೆ ಉಂಟಾಗಲಿಲ್ಲ. 

ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಎಲ್ಲ ವಿಭಾಗಗಳು ಕಾರ್ಯಾಚರಿಸಿದ್ದರೆ, ಕೆಎಂಸಿಯಲ್ಲಿಯೂ ರೋಗಿಗಳಿಗೆ ಸೇವೆ ಲಭ್ಯವಿತ್ತು. ಎ.ಜೆ. ಆಸ್ಪತ್ರೆಯಲ್ಲಿ ಬೆಳಗ್ಗಿನ ಹೊತ್ತು ಹೊರ ರೋಗಿ ವಿಭಾಗ ತೆರೆದಿದ್ದು, ಬಳಿಕ ಈ ವಿಭಾಗದಲ್ಲಿ ಸೇವೆ ಲಭ್ಯವಿರಲಿಲ್ಲ. ನಗರದ ವಿವಿಧ ಆಸ್ಪತ್ರೆಗಳ ವೈದ್ಯರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರೂ, ರೋಗಿಗಳಿಗೆ ಚಿಕಿತ್ಸೆ, ತಪಾಸಣೆಗಳಿಗೆ ಯಾವುದೇ ಸಮಸ್ಯೆಯಾಗಲಿಲ್ಲ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.