‘ಕೊಡುಗೆ ಸದುಪಯೋಗದಿಂದ ದಾನಿಗಳಿಗೆ ಸಂತೃಪ್ತಿ’
Team Udayavani, Jun 23, 2019, 5:16 AM IST
ಸಿದ್ದಾಪುರ: ಸಮಾಜದಲ್ಲಿರುವ ಹಣವಂತರು ದಾನ ಮಾಡಬೇಕೆಂಬ ನಿಯಮ ಇಲ್ಲ. ಒಳ್ಳೆಯ ಮನಸ್ಸಿರುವವರು ಸಮಾಜಕ್ಕಾಗಿ ದಾನ ಮಾಡುತ್ತಾರೆ. ದಾನ ಮಾಡಿದವರ ದಾನ ಸದುಪಯೋಗವಾದಾಗ ದಾನಿಗಳಿಗೆ ಅದೇ ಸಂತೃಪ್ತಿ ಎಂದು ಗೀತಾ ಎಚ್.ಎಸ್.ಎನ್. ಫೌಂಡೇಶನ್ ಕೋಟೇಶ್ವರ ಇದರ ಅಧ್ಯಕ್ಷ ಶಂಕರ ಐತಾಳ್ ಅಮಾಸೆಬೈಲು ಹೇಳಿದರು.
ಅವರು ಬೆಳ್ವೆ ಶ್ರೀ ಸಂದೇಶ ಕಿಣಿ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಬೆಳ್ವೆ ಹಾಗೂ ಗೀತಾ ಎಚ್.ಎಸ್.ಎನ್. ಫೌಂಡೇಶನ್ ಕೋಟೇಶ್ವರ ಇವುಗಳ ಜಂಟಿ ಆಶ್ರಯದಲ್ಲಿ ಉಳ್ಳೂರು-74 ಗ್ರಾಮದ ವಾರಾಹಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕೊಡಮಾಡಿದ ಸಮವಸ್ತ್ರ, ನೋಟ್ ಪುಸ್ತಕ ವಿತರಣೆ ಮಾಡಿ ಮಾತನಾಡಿದರು.
ಉದ್ಯಮಿ ಸತೀಶ ಕಿಣಿ ಬೆಳ್ವೆ ಅವರು ತಮ್ಮ ಸಂಪಾದನೆಯಲ್ಲಿ ಸಮಾಜಕ್ಕಾಗಿ ಖರ್ಚು ಮಾಡುತ್ತಿದ್ದಾರೆ. ತಮ್ಮ ಮಗನ ಹೆಸರಿನಲ್ಲಿ ಬೆಳ್ವೆ ಶ್ರೀ ಸಂದೇಶ ಕಿಣಿ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಎನ್ನುವ ಟ್ರಸ್ಟ್ನ್ನು ಆರಂಭಿಸಿ, ಸಾವಿರಾರು ರೋಗಿಗಳಿಗೆ ನೆರವಾಗಿದ್ದಾರೆ. ಹಲವು ವಿದ್ಯಾರ್ಥಿ ಗಳಿಗೆ ಪ್ರತಿ ವರ್ಷ ಕಲಿಕಾ ಸಾಮಗ್ರಿ ವಿತರಿಸುತ್ತಿದ್ದಾರೆ ಎಂದರು.
ಎಸ್ಡಿಎಂಸಿ ಅಧ್ಯಕ್ಷ ರತ್ನಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದರು.
ಎಸ್ಡಿಎಂಸಿ ಮಾಜಿ ಅಧ್ಯಕ್ಷೆ ಅಂಬಿಕಾ ರಾಜೇಂದ್ರ ಆಚಾರ್ಯ, ಸದಸ್ಯೆ ವಿಜಯಲಕ್ಷ್ಮೀ, ಗೌರವ ಶಿಕ್ಷಕಿಯರಾದ ಪೂರ್ಣಿಮಾ, ವಿದ್ಯಾ, ಪತ್ರಕರ್ತ ಸತೀಶ್ ಆಚಾರ್ ಉಳ್ಳೂರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಸುನೀತಾ ಜಿ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್