ಅಲ್ತಾರು ಡಾ|ಆನಂದ್‌ ಶೆಟ್ಟಿ ವೈದ್ಯಕೀಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವ


Team Udayavani, Sep 7, 2017, 6:45 AM IST

Dr.-Anand-Shetty-Althar.jpg

ಕೋಟ:  ವೈದ್ಯಕೀಯ ಕ್ಷೇತ್ರದ ಇತಿಹಾಸದಲ್ಲೇ ದಾಖಲೆ ಎಂಬಂತೆ ಸತತ 65ವರ್ಷಗಳ ಕಾಲ, ತನ್ನ 90ನೇ ವಯಸ್ಸಿನ ತನಕ ಕೋಟದ ಗ್ರಾಮಾಂತರ ಪ್ರದೇಶದಲ್ಲಿ  ಜನಾನುರಾಗಿಯಾಗಿ ಸೇವೆ ಸಲ್ಲಿಸಿದ ಅಲ್ತಾರು ಆನಂದ ಶೆಟ್ಟಿ ಅವರು ಸೆ.1ರಂದು ಹೃದಯಾಘಾತದಿಂದ ನಿಧನರಾದರು.  ಮೂಲಭೂತ ಸೌಲಭ್ಯಗಳು ಮರೀಚಿಕೆಯಾಗಿದ್ದ  ಆರು ದಶಕಗಳ ಹಿಂದಿನ ಕಾಲಘಟ್ಟದಲ್ಲಿ ಹೆಚ್ಚಿನ ಫಲಾಪೇಕ್ಷೆಗಳಿಲ್ಲದೆ, ಸೌಮ್ಯ ಸ್ವಭಾವದಿಂದ ಜನರ ಸಂಕಷ್ಟಕ್ಕೆ  ಧ್ವನಿಯಾಗಿದ್ದ ಶೆಟ್ಟರು ಕೋಟದ ಪಾಲಿಗೆ  ಮರೆಯಲಾಗದ ಮಾಣಿಕ್ಯ.  ಹೀಗಾಗಿ ಇವರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವ ಅಗತ್ಯವಿದೆ.

ಕನಕಮ್ಮ ಶೆಡ್ತಿ ಹಾಗೂ ಎಚ್‌.ರಾಮಣ್ಣ ಶೆಟ್ಟಿ ದಂಪತಿಗಳ ಪುತ್ರನಾಗಿ 1927ರಲ್ಲಿ ಯಡ್ತಾಡಿಯ ಅಲ್ತಾರಿನಲ್ಲಿ ಜನಸಿದ ಆನಂದ ಶೆಟ್ಟಿ ಅವರು ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು ಅನಂತರ ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನಲ್ಲಿ ಇಂಟರ್‌ಮೀಡಿಯೆಟ್‌ ಕೋರ್ಸ್‌, ಮದ್ರಾಸ್‌ ಕಾಲೇಜಿನಲ್ಲಿ  ಜಿ.ಸಿ.ಐ.ಎಂ. ತರಬೇತಿ ಪಡೆದು ಮಂಗಳೂರು ವೆನಾÉಕ್‌ ಆಸ್ಪತ್ರೆಯ ಮೂಲಕ ವೈದ್ಯಕೀಯ ವೃತ್ತಿ ಆರಂಭಿಸಿದರು.

ಕೋಟದಲ್ಲಿ  ಸತತ ಆರು ದಶಕಗಳ ಸಾರ್ಥಕ ಸೇವೆ 
1955ರಲ್ಲಿ ಕೋಟದಲ್ಲಿ ಕ್ಲಿನಿಕ್‌ ಆರಂಭಿಸಿ ಕುಗ್ರಾಮದಂತಿದ್ದ  ಈ ಊರಿಗೆ ವೈದ್ಯ ನಾರಾಯಣನಾದರು. ಆ ಕಾಲದಲ್ಲಿ  ಇಲ್ಲಿನ ಹತ್ತಾರು ಕಿ.ಮೀ. ಸುತ್ತ-ಮುತ್ತ  ಆಸ್ಪತ್ರೆಯಾಗಲಿ, ವೈದ್ಯರಾಗಲಿ ಇರಲಿಲ್ಲ ಹಾಗೂ ಮೂಲ ಸೌಕರ್ಯ ಮರೀಚಿಕೆಯಾಗಿತ್ತು. ಆಗ ಕಾಲ್ನಡಿಗೆಯಲ್ಲೇ ಮನೆ-ಮನೆ ತೆರಳಿ, ರಾತ್ರಿ ಹಗಲೆನ್ನದೆ ರೋಗಿಗಳಿಗೆ ಚಿಕಿತ್ಸೆ ನೀಡಿದನ್ನು,  ಅರ್ಥಿಕ ಸಂಕಷ್ಟವಿದ್ದ ರೋಗಿಗಳ ಬಳಿ ಹಣ ಪಡೆಯದೆ  ಸಾಂತ್ವನ ಹೇಳಿ ವಾಪಾಸಾಗುತ್ತಿದ್ದ ಇವರ  ಮಾನವೀಯ ಗುಣಗಳನ್ನು ಕೋಟದ ಜನ ಇಂದಿಗೂ ನೆನಪಿಸಿಕೊಳ್ಳುತ್ತಾರೆ. ಜತೆಗೆ ಸಾವಿರಾರು ಮಂದಿ ಇವರ ಕ್ಲಿನಿಕ್‌ನಲ್ಲಿ ಧರ್ಮಾಥ ಚಿಕಿತ್ಸೆ ಪಡೆದ ಉದಾಹರಣೆ ಇದೆಯಂತೆ. ವೈದ್ಯಕೀಯ ಕ್ಷೇತ್ರವೆನ್ನುವುದು ಸಂಪೂರ್ಣ ವ್ಯಾಪಾರಿಕರಣವಾಗುತ್ತಿರುವ ಈ ಕಾಲಘಟ್ಟದಲ್ಲಿ ಇಂತಹ ವೈದ್ಯರು ಮುಂದಿನ ಪೀಳಿಗೆಗೆ ಆದರ್ಶವಾಗಿ ಉಳಿಯುತ್ತಾರೆ.

90ರ ಹರೆಯದಲ್ಲೂ  ಸೇವೆ 
ಆನಂದ ಶೆಟ್ಟಿ ಅವರು ತನ್ನ ಕೊನೆಯ ದಿನಗಳ ತನಕ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು.  ಹಿಂದೆ ಕೋಟ ಬಸ್ಸು ನಿಲ್ದಾಣದ ಬಳಿ ಇದ್ದ ಇವರ ಉದಯ ಕ್ಲಿನಿಕ್‌ ರಸ್ತೆ ವಿಸ್ತರಣೆಯ ಸಂದರ್ಭ  ತೆರವುಗೊಂಡಿತು. ಅನಂತರ  ಕೋಟ ಪೊಲೀಸ್‌ ಠಾಣೆ ಸಮೀಪ ಇರುವ ಮನೆಯಲ್ಲೇ ಕ್ಲಿನಿಕ್‌ ಆರಂಭಿಸಿದರು. ಕಳೆದ ನಾಲ್ಕೈದು ತಿಂಗಳಿಂದ ಅನಾರೋಗ್ಯದ ಕಾರಣ ವೃತ್ತಿಯಿಂದ ದೂರ ಉಳಿದಿದ್ದು ಬಿಟ್ಟರೆ ತನ್ನ  90ರ ವಯಸ್ಸಿನ ವರೆಗೂ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು.ವೃದ್ಯಕೀಯ ಕ್ಷೇತ್ರದ ಜತೆಗೆ ಪ್ರತಿಷ್ಠಿತ ಕೋಟ ಸಿ.ಎ. ಬ್ಯಾಂಕ್‌ನ ಸ್ಥಾಪಕ ಕೋಶಾಧಿಕಾರಿಯಾಗಿ ಅನಂತರ ಅಧ್ಯಕ್ಷರಾಗಿಯೂ  ಕಾರ್ಯ ನಿರ್ವಹಿಸಿ ಬ್ಯಾಂಕ್‌ನ ಉನ್ನತಿಗೆ ಶ್ರಮಿಸಿದ್ದರು.

ಅವಿಸ್ಮರಣೀಯ ವಿದಾಯ: ಸೆ.1ರಂದು ಆನಂದ ಶೆಟ್ಟಿಯವರಿಗೆ ಕೋಟದ ಜನರು ಅವಿಸ್ಮರಣೀಯ ಅಂತಿಮ ನಮನ ಸಲ್ಲಿಸಿದರು. ಪೇಟೆಯ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಲಾಗಿತ್ತು ಹಾಗೂ ಮನೆಯಿಂದ  ತೆಕ್ಕಟ್ಟೆ ಕರಿಕಲ್‌ ಕಟ್ಟೆ ತನಕ ಹಾಗೂ ಅಲ್ಲಿಂದ ಕೋಟ ಹೈಸ್ಕೂಲ್‌ ತನಕ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ಪಾರ್ಥಿವ ಶರೀರದ ಅಂತಿಮ ಮೆರವಣಿಗೆ ನಡೆಯಿತು. ರಸ್ತೆಯ ಇಕ್ಕೆಲ್ಲಗಳಲ್ಲಿ ನಿಂತಿದ್ದ  ಜನ ಕೈಮುಗಿದು ಗೌರವ ಸಲ್ಲಿಸಿದರು.   ಕೋಟದ ಇತಿಹಾಸದಲ್ಲಿ ಕಡಲ ತೀರದ ಭಾರ್ಗವ ಡಾ| ಕೋಟ ಶಿವರಾಮ ಕಾರಂತರ ಅನಂತರ ಇಂತಹ ಅಂತಿಮ ಗೌರವ  ಸ್ವೀಕರಿಸಿದ  ಮಹಾನ್‌ ವ್ಯಕ್ತಿಯಾಗಿ ಡಾ| ಆನಂದ  ಶೆಟ್ಟರು ಚರಿತ್ರೆಯ  ಪುಟ ಸೇರಿದರು ಎನ್ನುವುದು ಇವರ ಅಭಿಮಾನಿಗಳ ಮನದಾಳದ ಮಾತಾಗಿದೆ.

ಒಟ್ಟಾರೆ ಸುಮಾರು ಆರುವರೇ ದಶಕಗಳ ಕಾಲ ಗ್ರಾಮೀಣ ಪ್ರದೇಶವೊಂದರ ಬಡ ಜನತೆಯ ಸೇವೆಯಲ್ಲಿ  ತೊಡಗಿಸಿಕೊಂಡ, ನಿಸ್ವಾರ್ಥವಾಗಿ ಸೇವೆ ಸಲ್ಲಿಸಿದ ಇಂತಹ ವೈದ್ಯರು ಸಮಾಜಕ್ಕೆ ಆದರ್ಶವಾಗುತ್ತಾರೆ.

– ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.