ವಿದ್ಯೆ, ಸಂಸ್ಕೃತಿ, ನಾಗರಿಕತೆಯಿಂದ ವಿಶ್ವಮಾನವರಾಗೋಣ     


Team Udayavani, Dec 6, 2017, 11:31 AM IST

25.jpg

ಉಡುಪಿ: ಕುವೆಂಪು ಅವರು ಹೇಳಿದಂತೆ ನಾವು ಹುಟ್ಟುತ್ತಾ ವಿಶ್ವಮಾನವರಾಗಿ ಹುಟ್ಟಿ ಅನಂತರ ಭಾಷೆ, ಧರ್ಮ, ಮತ ಮೊದಲಾದವುಗಳಿಂದಾಗಿ ಅಲ್ಪಮಾನವರಾಗುತ್ತೇವೆ. ಹಾಗಾಗಿ ವಿದ್ಯೆ, ಸಂಸ್ಕೃತಿ ಮತ್ತು ನಾಗರಿಕತೆಯಿಂದ ಮತ್ತೂಮ್ಮೆ ವಿಶ್ವಮಾನವರಾಗಬೇಕಾಗಿದೆ. ಅದಕ್ಕೂ ಮೊದಲು ಮಾನವರಾಗಬೇಕು ಎಂದು ಪದ್ಮಶ್ರೀ ಪುರಸ್ಕೃತ, ನಾಡೋಜ ಕವಿ ಡಾ| ಕೆ.ಎಸ್‌.ನಿಸಾರ್‌ ಅಹಮದ್‌ ಹೇಳಿದ್ದಾರೆ.

ಡಿ.5ರಂದು ಉಡುಪಿಯ ಸಾಂಸ್ಕೃತಿಕ ಸೇವಾ ಮತ್ತು ಸಂಶೋಧನಾ ಟ್ರಸ್ಟ್‌ “ರಂಗಸ್ಥಳ’ ಹಾಗೂ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆ “ಅಮೋಘ ಉಡುಪಿ’ ಆಶ್ರಯದಲ್ಲಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಪಂಪ ಪ್ರಶಸ್ತಿ ಘೋಷಿತ ಗೌರವಾರ್ಥ ಜರಗಿದ ಸಮ್ಮಾನ ಮತ್ತು ವಿಚಾರಗೋಷ್ಠಿಯ ಉದ್ಘಾಟನಾ ಸಮಾರಂಭದಲ್ಲಿ  ಅವರು ಮಾತನಾಡಿದರು.

ಹಣ ಗಳಿಸುವುದೊಂದೇ ಧ್ಯೇಯ ವಾಗಬಾರದು. ಸಾಹಿತ್ಯದಿಂದ ಸಂತೋಷ ಸಿಗುತ್ತದೆ. ಬೆಳಕು, ಸವಿ, ಸೊಗಸಿನೊಂದಿಗೆ ಸದ್ಗುಣದ ಜೀವನ ನಮ್ಮದಾಗಬೇಕು ಎಂದು ಅವರು ಹೇಳಿದರು. 

ಇಂಗ್ಲಿಷ್‌ ಭಾಷೆ ಇರಲಿ, ಸಂಸ್ಕೃತಿ ಬೇಡ
ಇಂಗ್ಲಿಷ್‌ ಕಲಿಯಬೇಕು. ಇಲ್ಲವಾದರೆ ಈ ಜಗತ್ತಿನಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ. ಆದರೆ ಇಂಗ್ಲಿಷ್‌ ಸಂಸ್ಕೃತಿಯ ಜತೆಗೆ ಸೇರಿ ಕೊಳ್ಳಬಾರದು. ಇಂಗ್ಲಿಷ್‌ ಸ್ನೇಹ ಸಂಬಂಧದ ಭಾಷೆಯೇ ಹೊರತು ರಕ್ತ ಸಂಬಂಧದ ಭಾಷೆಯಲ್ಲ. ಕನ್ನಡ ಮತ್ತು ಇತರ ದ.ಕ ಭಾರತೀಯ  ಭಾಷೆಗಳು ರಕ್ತಸಂಬಂಧದ ಭಾಷೆಗಳು ಎಂದು ಡಾ| ನಿಸಾರ್‌ ಅಹಮ್ಮದ್‌ ಅಭಿಪ್ರಾಯಪಟ್ಟರು.

ರವೀಂದ್ರ ಮಂಟಪ ಎ.ಸಿ ಆಗಲಿದೆ 
ಉದ್ಘಾಟನೆ ನೆರವೇರಿಸಿ ಮಾತನಾಡಿದ ಮಣಿಪಾಲ ವಿ.ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌.ಬಲ್ಲಾಳ್‌ ಅವರು, ನಿಸಾರ್‌ ಅಹಮದ್‌ ಅವರು ಪ್ರಪಂಚದಾದ್ಯಂತ ಸಂಚಲನ ಉಂಟು ಮಾಡಿರುವ ಕವಿ. ಈ ಸಮ್ಮಾನ ಕಾರ್ಯಕ್ರಮದಿಂದ ಪೇರಿತರಾಗಿ ಮತ್ತಷ್ಟು ಕವನಗಳನ್ನು ಕೊಡುವಂತಾಗಲಿ. ಇಂತಹ ಕಾರ್ಯಕ್ರಮಕ್ಕೆ ವೇದಿಕೆ ಯಾಗಿರುವ ನೂತನ ರವೀಂದ್ರ ಮಂಟಪವನ್ನು ಮಣಿಪಾಲ ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌ನ 75ನೇ ವರ್ಷಾಚರಣೆ ಪ್ರಯುಕ್ತ ಸಂಪೂರ್ಣ ಹವಾನಿಯಂತ್ರಿತ ಸಭಾಂಗಣವಾಗಿ ರೂಪಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಆರ್‌.ಪಿ.ನಾಯಕ್‌ ಅಧ್ಯಕ್ಷತೆ ವಹಿಸಿದ್ದರು. “ರಂಗಸ್ಥಳ’ದ ಮ್ಯಾನೇಜಿಂಗ್‌ ಟ್ರಸ್ಟಿ  ಯು.ಆರ್‌.ಸಭಾಪತಿ ಸ್ವಾಗತಿಸಿದರು. “ಅಮೋಘ’ ನಿರ್ದೇಶಕಿ ಪೂರ್ಣಿಮಾ ಸುರೇಶ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂಜಿಎಂ ಕಾಲೇಜು ಪ್ರಾಂಶುಪಾಲೆ ಸಂಧ್ಯಾ ನಂಬಿಯಾರ್‌, “ರಂಗಸ್ಥಳ’ದ ಗೌರವಾಧ್ಯಕ್ಷ ಮನೋಹರ ಶೆಟ್ಟಿ, ಅಧ್ಯಕ್ಷ ಕಿಶನ್‌ ಹೆಗ್ಡೆ, ಜತೆ ಕಾರ್ಯದರ್ಶಿ ಪ್ರೊ| ಉದಯ ಕುಮಾರ ಶೆಟ್ಟಿ, ಇನ್ನೋರ್ವ ಜತೆ ಕಾರ್ಯದರ್ಶಿ ಮೇಟಿ ಮುದಿಯಪ್ಪ ಉಪಸ್ಥಿತರಿದ್ದರು. ಶಿಲ್ಪಾ ಜೋಷಿ ಕಾರ್ಯಕ್ರಮ ನಿರ್ವಹಿಸಿದರು. 

ಕರಾವಳಿ ಪ್ರೀತಿಗೆ ಸೋತ ನಿತ್ಯೋತ್ಸವ ಕವಿ
ನಾನು 5 ವರ್ಷಗಳ ಹಿಂದೆ ಆಳ್ವಾಸ್‌ ನುಡಿಸಿರಿಯಲ್ಲಿ ಪಾಲ್ಗೊಂಡಿದ್ದೆ. ಇದು ಕರಾವಳಿಯ ನನ್ನ ಮೊದಲ ಕಾರ್ಯಕ್ರಮ. ಅದರ ಅನಂತರ ಇದುವರೆಗೆ ಕರಾವಳಿಯಲ್ಲಿ 27 ಕಾರ್ಯಕ್ರಮಗಳಲ್ಲಿ ಪಾಲ್ಗೊಂಡೆ. ಇಲ್ಲಿನ ಜನರ ಅದೇನು ಪ್ರೀತಿ, ಅಕ್ಕರೆಯೋ ತಿಳಿಯದು. ತುಳುನಾಡಿನಲ್ಲಿ  ತುಳು ಭಾಷೆ ಇದ್ದರೂ ಕನ್ನಡದ ಮೇಲಿನ ಪ್ರೀತಿ ಅಗಾಧ. ಕನ್ನಡದ ಪ್ರೀತಿ ಪತಾಕೆ ಎತ್ತಿ ಹಿಡಿಯುವವರು ಹಳೆ ಮೈಸೂರಿನವರಲ್ಲ, ಅದು ಕರಾವಳಿಯವರೇ. ಯಕ್ಷಗಾನ, ಭೂತಾರಾಧನೆ, ನಾಗಾರಾಧನೆಗಳಿಂದ ಈ ಪ್ರದೇಶ ವಿಶಿಷ್ಟವಾಗಿ ಗುರುತಿಸಿಕೊಂಡಿದೆ. ನನ್ನ ಉಸಿರು ಇರುವವರೆಗೂ ಕರಾವಳಿಯ ಸೆಳೆತ ಇರುತ್ತದೆ.

– ಡಾ| ಕೆ.ಎಸ್‌.ನಿಸಾರ್‌ ಅಹಮದ್‌, “ಪದ್ಮಶ್ರೀ’ ಪುರಸ್ಕೃತ ಕವಿ

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.