ರಸ್ತೆಯಲ್ಲೇ ಹರಿಯುವ ಚರಂಡಿ ನೀರು


Team Udayavani, Jun 12, 2019, 6:10 AM IST

charandi-neeru

ಸಿದ್ದಾಪುರ: ಮಳೆಯೊಂದಿಗೆ ಸಿದ್ದಾಪುರದಲ್ಲಿ ಈ ಬಾರಿ ಸಂಕಷ್ಟದ ಸುರಿಮಳೆಯೂ ಖಂಡಿತ. ಮಳೆಗಾಲ ಪೂರ್ವದಲ್ಲಿ ನಡೆಸಬೇಕಿದ್ದ ಚರಂಡಿ ಹೂಳೆತ್ತುವ ಕಾಮಗಾರಿ ಯಾವ ಭಾಗದಲ್ಲೂ ನಡೆಸದ್ದರಿಂದ ಒಳಚರಂಡಿಯಲ್ಲಿ ಕೊಳಚೆ ತುಂಬಿ ಗಬ್ಬೆದ್ದು ನಾರುತ್ತಿದೆ. ಜತೆಗೆ ಮಳೆ ನೀರು ರಸ್ತೆಗೆ ನುಗ್ಗಿ ಸಮಸ್ಯೆ ಜಟಿಲವಾಗುವ ಸಾಧ್ಯತೆ ಹೆಚ್ಚಿದೆ.

ಚರಂಡಿಯಲ್ಲಿ ಬೆಳೆದ ಕಳೆ
ಚರಂಡಿ ನಿರ್ವಹಣೆ ಇಲ್ಲದಿರುವುದರಿಂದ ಕಳೆ ಬೆಳೆದಿದೆ. ಕೆಲವು ಕಡೆಗಳಲ್ಲಿ ಚರಂಡಿ ಮೇಲೆ ಹಾಕಿರುವ ಸಿಮೆಂಟ್‌ ಹಲಗೆ ಕುಸಿದು ಬಿದ್ದಿದೆ. ಬಸ್‌ ನಿಲ್ದಾಣದ ಬಲ ಭಾಗದ ಚರಂಡಿಯಲ್ಲಿ ಹೂಳು ತುಂಬಿ, ಮೊದಲ ಮಳೆಗೆ, ನೀರು ಹೊರಗೆ ಹರಿದಿದೆ. ಪಕ್ಕದಲ್ಲಿರುವ ರಿಕ್ಷಾ ನಿಲ್ದಾಣ ಹಿಂಭಾಗ ಕಳೆ ಬೆಳೆದ ಪರಿಣಾಮ ಕೊಳಚೆ ನೀರು ಸಂಗ್ರಹವಾಗಿ ಸೊಳ್ಳೆ ಉತ್ಪತ್ತಿಯಾಗುತ್ತಿ¤ವೆ. ಪರಿಸರ ವಾಸನೆ ಬೀರುತ್ತಿದೆ.

ರೋಗ ಭೀತಿ
ನೀರು ಹರಿದು ಹೋಗದೆ ಇರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಜನರನ್ನು ಕಾಡುತ್ತಿದೆ. ಬಸ್‌ ನಿಲ್ದಾಣದ ಮುಂಭಾಗ ಹಾಗೂ ಕಡ್ರಿ ರಸ್ತೆ ಒಳ ಚರಂಡಿಯಲ್ಲಿ ಹೂಳು ತುಂಬಿ ಕೊಳಚೆ ನೀರು ಸಂಗ್ರಹವಾಗಿದೆ. ಗಣೇಶ ದರ್ಶನ್‌ ಹೋಟಲ್‌ ಮುಂಭಾಗ, ಗಿರಿಜಾ ಟೆಕ್ಸ್‌ಟೈಲ್ಸ್‌, ಕಾಮತ್‌ ಹಾರ್ಡ್‌ವೇರ್‌ ಮತ್ತು ಸದಾನಂದ ಭಟ್‌ ಅಂಗಡಿಯ ಮುಂಭಾಗ ಕೊಳಚೆ ತುಂಬಿದೆ. ದುರ್ಗಾ ಕಾಂಪ್ಲೆಕ್ಸ್‌ನ ಹಿಂಭಾಗವೂ ಕೊಳಚೆ ಸಂಗ್ರಹ ಕೇಂದ್ರವಾಗಿದೆ.

ಆರೋಗ್ಯ ಇಲಾಖೆ ಎಲ್ಲಿ?
ಕೊಳಚೆಯಿಂದಾಗಿ ಸಾಂಕ್ರಾಮಿಕ ರೋಗದ ಭೀತಿ ಸ್ಥಳೀಯರನ್ನು ಕಾಡುತ್ತಿದ್ದರೂ, ಆರೋಗ್ಯ ಇಲಾಖೆ ಮಾತ್ರ ಎಚ್ಚರಿಸುವ ಕೆಲಸ ಮಾಡುತ್ತಿಲ್ಲ. ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತೆ ಕೈಗೊಳ್ಳಬೇಕು ಎನ್ನುವುದು ಜನರ ಆಗ್ರಹ.

ಒಳಚರಂಡಿಯ ವಾಸನೆಯ ಬಗ್ಗೆ ದೂರುಗಳು ಬರುತ್ತಿವೆ. ಹೂಳೆತ್ತುವ ಕಾಮಗಾರಿ ಜೂನ್‌ ಪ್ರಥಮ ವಾರದಲ್ಲಿ ಶುರುಮಾಡಬೇಕಾಗಿತ್ತು. ಚರಂಡಿಯಲ್ಲಿರುವ ಕೊಳಚೆ ಮೇಲಕ್ಕೆತ್ತಲು ಕಾರ್ಮಿಕರು ಸಿಗದೆ ಇರುವುದರಿಂದ ಕಾಮಗಾರಿ ಕೂಡ ತಡವಾಗಿದೆ. ಮಳೆ ಆರಂಭವಾಗುತ್ತಿರುವುದರಿಂದ ಕೂಡಲೆ ಕಾಮಗಾರಿ ಶುರುಮಾಡುತ್ತೇವೆ.
-ಸತೀಶ್‌ ನಾಯ್ಕ ಪಿಡಿಒ, ಗ್ರಾ. ಪಂ. ಸಿದ್ದಾಪುರ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.