ಕುಂದಾಪುರ: ಫ್ಲೈ ಓವರ್‌ ಅಡಿಯಲ್ಲಿ ಕೊಳಚೆ ನೀರು


Team Udayavani, Oct 30, 2018, 2:05 AM IST

fly-over-29-10.jpg

ಕುಂದಾಪುರ: ಇಲ್ಲಿನ ಶಾಸ್ತ್ರಿ ಸರ್ಕಲ್‌ ಬಳಿಯ ಶೆರೋನ್‌, ಶೆಲೊಮ್‌ ಹೋಟೆಲ್‌ ಎದುರು ಫ್ಲೈ ಓವರ್‌ ಅಡಿ ಈಗ ರೋಗ ರುಜಿನಗಳ ಉತ್ಪಾದನಾ ತಾಣವಾಗಿದೆ. ಕೊಳಚೆ ನೀರು ಸಂಗ್ರಹಾಗಾರವಾಗಿದೆ. ಫ್ಲೈ ಓವರ್‌ ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸುವವರು ಒಂದಷ್ಟು ಸಾಮಗ್ರಿಗಳನ್ನು ರಾಶಿ ಹಾಕಿದ್ದಾರೆ. ಮಳೆಗಾಲದಲ್ಲಿ ಕೂಡ ಇಲ್ಲಿ ನೀರು ಸಂಗ್ರಹ ಆಗುತ್ತಿತ್ತು. ಈಗ ತ್ಯಾಜ್ಯ ನೀರು ಸಂಗ್ರಹವಾಗತೊಡಗಿದೆ. ಸಂಗ್ರಹವಾದ ತ್ಯಾಜ್ಯ ನೀರು ಹೊರಹೋಗದಂತೆ ಸರ್ವೀಸ್‌ ರಸ್ತೆ ಕಾಮಗಾರಿ ಮಾಡಲಾಗಿದೆ. 

ಚರಂಡಿ ನೀರು
ಚರಂಡಿಗೆ ಹರಿಯ ಬಿಡುವ ನೀರಿನ ಪೈಪ್‌ಲೈನ್‌ ಒಡೆದು ಇಲ್ಲಿ ತ್ಯಾಜ್ಯ ನೀರು ಸಂಗ್ರಹವಾಗುತ್ತದೆ. ಇದರಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿದ್ದು ಹುಳ ಹುಪ್ಪಟೆಗಳು ರಾಶಿ ರಾಶಿಯಾಗಿವೆ. ಇಡೀ ಪರಿಸರವೇ ದುರ್ನಾತ ಬೀರುತ್ತಿದೆ. ಬೇರೆ ಬೇರೆ ಕಡೆಯಿಂದ ಆಗಮಿಸಿದ ಕಾರ್ಮಿಕರು ಕೂಡ ಇಲ್ಲಿದ್ದು ಇಂತಹ ವಾತಾವರಣ ಇದ್ದರೆ ಸಾಂಕ್ರಾಮಿಕ ಖಾಯಿಲೆ ಹರಡುವ ಆತಂಕ ನಾಗರಿಕರನ್ನು ಕಾಡಿದೆ.

ಪುರಸಭೆಯ ಚರಂಡಿ ಕಾಮಗಾರಿ ನಡೆಯುತ್ತಿದೆ. ಒಂದೆಡೆ ಕೆಎಸ್‌ಆರ್‌ಟಿಸಿ ಬಳಿಯಿಂದ ಶಾಸ್ತ್ರಿ ಸರ್ಕಲ್‌ವರೆಗೆ, ಬಸ್ರೂರು ಮೂರುಕೈ ಕಡೆಗೆ, ಇನ್ನೊಂದೆಡೆ ಬೊಬ್ಬರ್ಯನಕಟ್ಟೆ ಬಳಿ ಕಾಮಗಾರಿ ನಡೆಯುತ್ತಿದೆ. ಫ್ಲೈ ಓವರ್‌ ಕೆಳಗೆ ಚರಂಡಿ ಪೈಪ್‌ಗೆ ಸಮಸ್ಯೆಯಾದ ಕಾರಣ ನೀರು ನಿಂತಿದ್ದು ಇದನ್ನು ಜೆಕೆ ಟವರ್‌ ಬಳಿ ಸಕ್ಕಿಂಗ್‌ ಯಂತ್ರ ಮೂಲಕ ಪಂಪ್‌ ಮಾಡಿ ತ್ಯಾಜ್ಯ ನೀರು ತೆಗೆಯಲಾಗುತ್ತಿದೆ. ಹಾಗಿದ್ದರೂ ಫ್ಲೈ ಓವರ್‌ ಅಡಿಯಲ್ಲಿ ಕೊಳಚೆ ನೀರಿನ ಸಂಗ್ರಹ ಕಡಿಮೆಯಾಗಿಲ್ಲ.

ಕ್ರಮ ಕೈಗೊಳ್ಳಲಾಗುವುದು
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಫ್ಲೈಓವರ್‌ ಅಡಿಯಲ್ಲಿ ನೀರು ನಿಂತ ಕುರಿತು ದೂರು ಬಂದಿರಲಿಲ್ಲ. ತತ್‌ ಕ್ಷಣ ವಿಲೇವಾರಿಗೆ ಕ್ರಮವಹಿಸಲಾಗುವುದು. ರೋಗ ಹರಡದಂತೆ ರಾಸಾಯನಿಕ ಹಾಕಲಾಗುವುದು.
– ಗೋಪಾಲಕೃಷ್ಣ ಶೆಟ್ಟಿ, ಮುಖ್ಯಾಧಿಕಾರಿ, ಪುರಸಭೆ, ಕುಂದಾಪುರ

ನಿಲ್ಲಲು ಅಸಾಧ್ಯ
ಈ ಪ್ರದೇಶದಲ್ಲಿ ಸ್ವಲ್ಪ ಹೊತ್ತು ಕೂಡಾ ನಿಲ್ಲಲು ಅಸಾಧ್ಯವಾಗುವಷ್ಟು ಕ್ರಿಮಿಗಳು ಹಾರಾಡುತ್ತಿರುವುದು ಕಾಣುತ್ತಿದೆ. ವಾಸನೆ ಬರುತ್ತಿದೆ. ರೋಗ ಹರಡಲು ಬೇರೆ ಕೇಂದ್ರವೇ ಬೇಡ.
– ರಾಘವೇಂದ್ರ ಮದ್ದುಗುಡ್ಡೆ, ಸ್ಥಳೀಯರು

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.