ನಾಟಕ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ
Team Udayavani, Apr 25, 2017, 11:36 AM IST
ಉಡುಪಿ: ರಂಗಭೂಮಿ ಕೊಡುಗೆಗಾಗಿ ರಾಜ್ಯೋತ್ಸವ ಪ್ರಶಸ್ತಿ ದೊರಕಬೇಕು ಎಂದು ಹಿರಿಯ ರಂಗಕರ್ಮಿ ಪಿ. ವಾಸುದೇವ ರಾವ್ ಆಗ್ರಹಿಸಿದ್ದಾರೆ.
ಅವರು ಸೋಮವಾರ ಎಂಜಿಎಂ ಕಾಲೇಜಿನ ಆವರಣದಲ್ಲಿ ರಂಗಭೂಮಿ ಆಯೋಜಿಸಿದ “ಆನಂದೋತ್ಸವ’ದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಗೌರವ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ರಂಗತಾಲೀಮು ನಡೆಸಲು ಅಗತ್ಯ ವೇದಿಕೆ ನಿರ್ಮಿಸಲು 30×20 ಅಡಿ ಸ್ಥಳವನ್ನು ರಂಗಭೂಮಿಗೆ ನೀಡಿದ ಸ್ಥಳದ ಪಕ್ಕದಲ್ಲಿ ನೀಡುತ್ತೇನೆ ಎಂದು ಅವರು ಭರವಸೆ ನೀಡಿದ್ದಾರೆ.
ರಂಗಮಂದಿರಕ್ಕೆ ಅನುದಾನ
ಅಧ್ಯಕ್ಷತೆ ವಹಿಸಿದ್ದ ನಾಟಕ ಅಕಾಡೆಮಿ ಸದಸ್ಯ ಉಮೇಶ ಸಾಲ್ಯಾನ್, ರಂಗ ಮಂದಿರ ನಿರ್ಮಾಣಕ್ಕೆ ಮಂಗಳೂರಿಗೆ 1 ಕೋ. ರೂ., ಉಡುಪಿಗೆ 50 ಲ. ರೂ. ಮಂಜೂರಾಗಿದೆ. ಆದರೆ ಉಡುಪಿಯಲ್ಲಿ ಸ್ಥಳದ ಕೊರತೆ ಇದೆ. ರಂಗತಾಲೀಮು ಕೇಂದ್ರವೂ ಇಲ್ಲ ಎಂದರು.
ಸ್ಥಳ ಗುರುತಿಸುವ ಕೆಲಸ
ತಹಶೀಲ್ದಾರ್ ಮಹೇಶ್ಚಂದ್ರ ರಂಗ ಮಂದಿರ ನಿರ್ಮಾಣಕ್ಕೆ ಸ್ಥಳ ಗುರುತಿಸುವ ಕೆಲಸ ನಡೆಯುತ್ತಿದೆ. ಇದು ಚರ್ಚೆಯಲ್ಲಿದೆ. ಸದ್ಯವೇ ಸ್ಥಳ ಗುರುತಿಸುತ್ತೇವೆ ಎಂದರು. ರಂಗಭೂಮಿ ನಡೆಸುತ್ತಿರುವ ರಂಗ ಚಟುವಟಿಕೆಗಳ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಮೆಚ್ಚುಗೆ ಸೂಚಿಸಿದರು. ರಂಗಭೂಮಿ ಗೌರವಾಧ್ಯಕ್ಷ ಡಾ| ಎಚ್. ಶಾಂತಾರಾಮ್ ಪ್ರಸ್ತಾವನೆಗೈದರು. ಜತೆ ಕಾರ್ಯದರ್ಶಿ ಎಚ್.ಪಿ. ರವಿರಾಜ್ ಸ್ವಾಗತಿಸಿ ಕಾರ್ಯದರ್ಶಿ ಪ್ರದೀಪ್ಚಂದ್ರ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ