ಹೂಳು ತೆರವಿಗೆ ರಾಜ್ಯದಲ್ಲಿಲ್ಲ ಡ್ರೆಜ್ಜಿಂಗ್‌ ಯಂತ್ರ

ಮೀನುಗಾರಿಕೆ ಬಂದರುಗಳಲ್ಲಿ ತುಂಬಿದೆ ಹೂಳು ರಾಶಿ

Team Udayavani, Feb 25, 2020, 6:30 AM IST

drejjing

ಕುಂದಾಪುರ: ಸರಿಸುಮಾರು 320 ಕಿ.ಮೀ. ಕರಾವಳಿ ತೀರ, 21,891 ಮೀನುಗಾರಿಕೆ ದೋಣಿಗಳು, ಎಂಟು ಮೀನು ಗಾರಿಕೆ ಬಂದರು ಮತ್ತು 26 ಮೀನು ಗಾರಿಕೆ ಇಳಿದಾಣಗಳನ್ನು ಹೊಂದಿರುವ ಕರ್ನಾಟಕದಲ್ಲಿ ಒಂದೂ ಡ್ರೆಜಿಂಗ್‌ ಯಂತ್ರವಿಲ್ಲ ಎಂಬುದು ವಿಚಿತ್ರವಾದರೂ ನಿಜ. ಬಂದರು ಮತ್ತು ಮೀನುಗಾರಿಕೆ ಇಲಾಖೆಯು ಈವರೆಗೆ ಯಂತ್ರ ಖರೀದಿಗೆ ಮುಂದಾಗಿಯೇ ಇಲ್ಲ!

ಮೀನುಗಾರಿಕೆ ಬಂದರುಗಳಲ್ಲಿ ವರ್ಷದಿಂದ ವರ್ಷಕ್ಕೆ ಹೂಳು ಹೆಚ್ಚುತ್ತಲೇ ಇದೆ. ಪ್ರತಿ ವರ್ಷ ಅದನ್ನು ಮೇಲೆತ್ತಬೇಕು. ಆದರೆ ಇದನ್ನು ಮುಂಬಯಿ, ಕೇರಳದ ಖಾಸಗಿಯವರಿಗೆ ಟೆಂಡರ್‌ಗೆ ಕೊಡಬೇಕಾದ ಸ್ಥಿತಿ ನಮ್ಮದು. ಉಡುಪಿ, ದಕ್ಷಿಣ ಕನ್ನಡ ಮತ್ತು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಮಲ್ಪೆ, ಮಂಗಳೂರು, ಕಾರವಾರ ಮೀನುಗಾರಿಕೆಯ ಬೃಹತ್‌ ನೆಲೆಗಳು. ಇಲ್ಲೆಲ್ಲ ಸಮರ್ಪಕ ಡ್ರೆಜ್ಜಿಂಗ್‌ ನಡೆಯದೇ ಹಲವು ವರ್ಷಗಳು ಕಳೆದಿವೆ.

ಅಲ್ಪ ಸ್ವಲ್ಪ ತೆರವು
ಇಲಾಖೆ ಪ್ರತಿ ವರ್ಷ ನೆಪ ಮಾತ್ರಕ್ಕೆ ಖಾಸಗಿಯವರ ಮೂಲಕ ಅಲ್ಪಸ್ವಲ್ಪ ಹೂಳೆತ್ತುತ್ತದೆ. ಅದು ಸರಿಯಾಗಿ ಆಗದ ಕಾರಣ ಹೂಳು ತೆರವಾದ ಬಂದರು ಒಂದೂ ಇಲ್ಲ. ಸಾಮಾನ್ಯವಾಗಿ ಬೋಟಿನ ಕೆಳಭಾಗವು ನೀರಿನ ಮಟ್ಟಕ್ಕಿಂತ 3 ಮೀ.ನಷ್ಟು ಕೆಳಗಿರುತ್ತದೆ. ಅದಕ್ಕಿಂತಲೂ ಎರಡೂವರೆ ಮೀ.ನಷ್ಟು ಆಳವಾಗಿ ಹೂಳೆತ್ತಿದರೆ ಮಾತ್ರ ಸುಗಮ ಸಂಚಾರ ಸಾಧ್ಯ ಎನ್ನುತ್ತಾರೆ ಮೀನುಗಾರರು.

ಕೋಡಿ- ಗಂಗೊಳ್ಳಿಯಲ್ಲಿ ದಿಬ್ಬ
ಕೋಡಿ- ಗಂಗೊಳ್ಳಿಯಲ್ಲಿ ಬ್ರೇಕ್‌ವಾಟರ್‌ಗಳಿಂದಾಗಿ ಇವರೆಡರ ಮಧ್ಯದ ಅಳಿವೆಯಲ್ಲಿ ಹೂಳು ತುಂಬಿ ಮರಳು ದಿಬ್ಬಗಳಾಗಿವೆ. ಇದನ್ನು ತೆರವುಗೊಳಿಸಲಾಗುವುದು ಎಂದು ಸಚಿವರು, ಶಾಸಕರು, ಅಧಿಕಾರಿಗಳು ನೀಡಿದ ಭರವಸೆಯೂ ಹಳೆಯದಾಗಿದೆ.

ಕೇರಳ ಮಾತ್ರ
ಕರ್ನಾಟಕದಲ್ಲೆಲ್ಲೂ ಸರಕಾರಿ ಅಥವಾ ಖಾಸಗಿ ಡ್ರೆಜ್ಜಿಂಗ್‌ ಯಂತ್ರ ಇಲ್ಲ. ಕೇರಳದ ಸರಕಾರ ಸ್ವಂತ ಯಂತ್ರ ಹೊಂದಿದೆ. ಮಹಾ ರಾಷ್ಟ್ರ, ಗೋವಾ ಮತ್ತಿತರ ಕಡೆ ಖಾಸಗಿಯವರು ಹೂಳೆತ್ತುವುದನ್ನು ನಿರ್ವಹಿಸುತ್ತಿದ್ದಾರೆ.

ಮೀನುಗಾರಿಕೆಗೆ ಅಡ್ಡಿ
ಬಂದರು ಪ್ರದೇಶಗಳಲ್ಲಿ ಹೂಳು ತುಂಬಿರುವುದರಿಂದ ಇಳಿತದ ಸಂದರ್ಭದಲ್ಲಿ ಬೋಟುಗಳ ಸಂಚಾರ ಮತ್ತು ಲಂಗರಿಗೆ ತೊಂದರೆಯಾಗುತ್ತಿದೆ. ಬೋಟ್‌, ದೋಣಿಗಳ ತಳಕ್ಕೆ ಹೂಳು ತಾಗಿ ಹಾನಿಯಾಗುತ್ತದೆ. ಮತ್ಸéಕ್ಷಾಮ, ಪ್ರತಿಕೂಲ ಹವಾಮಾನ ಮಾತ್ರ ವಲ್ಲದೆ ಹೂಳು ಕೂಡ ಮೀನುಗಾರಿಕೆಗೆ ತೊಡಕಾಗಿದೆ. ಹೂಳು ಬೋಟ್‌ ಅವಘಡಗಳಿಗೂ ಕಾರಣವಾಗಿದ್ದು, ಹಲವೆಡೆ ಇಂತಹ ಘಟನೆ ಗಳು ಈಗಾಗಲೇ ಸಂಭವಿಸಿವೆ.

ಕೋಡಿ – ಗಂಗೊಳ್ಳಿ ಸೇರಿದಂತೆ ಜಿಲ್ಲೆಯ ಎಲ್ಲ ಪ್ರಮುಖ ಮೀನುಗಾರಿಕೆ ಬಂದರುಗಳಲ್ಲಿ ಹೂಳೆತ್ತುವ ಸಂಬಂಧ ಸರ್ವೇ ನಡೆಸಲಾಗಿದೆ. ಅದರ ಆಧಾರದ ಮೇಲೆ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗುವುದು.
– ಗಣೇಶ್‌ ಕೆ., ಉಪ ನಿರ್ದೇಶಕರು, ಬಂದರು ಮತ್ತು ಮೀನುಗಾರಿಕಾ ಇಲಾಖೆ ಉಡುಪಿ

ಡ್ರೆಜ್ಜಿಂಗ್‌ ಯಂತ್ರ ಖರೀದಿಗಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೇರಳದಲ್ಲಿ ಯಂತ್ರವಿದ್ದು, ಅಲ್ಲಿನ ಇಲಾಖೆಗೆ ಅದರ ನಿರ್ವಹಣೆ ಸಮಸ್ಯೆಯಾಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಇದರ ಸಾಧಕ- ಬಾಧಕಗಳನ್ನು ಪರಿಶೀಲಿಸಲಾಗುವುದು. ಹೊರಗುತ್ತಿಗೆ ಆಧಾರದಲ್ಲಿ ಡ್ರೆಜ್ಜಿಂಗ್‌ ಯಂತ್ರ ಬಳಸುವ ಸಂಬಂಧ ಪ್ರಯತ್ನಿಸಲಾಗುವುದು. ಹೂಳು ತೆರವಿಗೆ ಈ ಬಾರಿಯ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಲಾಗಿದೆ.
– ಕೋಟ ಶ್ರೀನಿವಾಸ ಪೂಜಾರಿ, ಬಂದರು ಮತ್ತು ಮೀನುಗಾರಿಕೆ ಸಚಿವರು

– ಪ್ರಶಾಂತ್ ಪಾದೆ

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.