‘ಕುಡಿಯುವ ನೀರು ಕೃಷಿಗೆ ಬಳಸಿದರೆ ಸಂಪರ್ಕ ಕಡಿತ’
Team Udayavani, Feb 7, 2019, 12:55 AM IST
ಅಜೆಕಾರು: ಯರ್ಲಪಾಡಿ ಗ್ರಾ.ಪಂ.ನ ಗ್ರಾಮ ಸಭೆ ಪಂಚಾಯತ್ ಸಭಾಭವನದಲ್ಲಿ ಫೆ. 6ರಂದು ಪಂಚಾಯತ್ ಅಧ್ಯಕ್ಷರಾದ ವಸಂತ ಕುಲಾಲ್ ಅಧ್ಯಕ್ಷತೆಯಲ್ಲಿ ನಡೆಯಿತು.
ವಸಂತ ಕುಲಾಲ್ ಮಾತನಾಡಿ, ಯರ್ಲಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದ್ದು ಕುಡಿಯುವ ನೀರಿಗೆ ಸಂಪರ್ಕ ಪಡೆದು ಕೃಷಿ ಸೇರಿದಂತೆ ಇತರ ಉದ್ದೇಶಕ್ಕೆ ನೀರನ್ನು ಬಳಕೆ ಮಾಡಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದರು.
ಹಲವು ವರ್ಷಗಳಿಂದ ಸರಕಾರಿ ಕಂದಾಯ ಭೂಮಿಯಲ್ಲಿ ಕೃಷಿ ಮಾಡಿ ಕೊಂಡು ಬಂದಿರುವ ರೈತರು ಅಕ್ರಮ ಸಕ್ರಮಕ್ಕಾಗಿ ನಮೂನೆ 57ರಲ್ಲಿ ಅರ್ಜಿ ಸಲ್ಲಿಸುವಂತೆ ಕಂದಾಯ ಇಲಾಖೆಯ ಗ್ರಾಮ ಕರಣಿಕರಾದ ತಾರೇಶ್ ಸೂಚಿಸಿ ದರು. ಪಿಡಿಒ ಪ್ರಮೀಳಾ ನಾಯಕ್ ಮಾಹಿತಿ ನೀಡಿದರು.
ಸಭೆಯಲ್ಲಿ ಪ.ಜಾತಿ ಮತ್ತು ಪ. ಪಂಗಡದ ಫಲಾನುಭವಿಗಳಿಗೆ ಸಹಾಯ ಧನದ ಚೆಕ್ಗಳನ್ನು ವಿತರಿಸಲಾಯಿತು.ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಕಾರ್ಕಳ ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ| ಸುಬ್ರಹ್ಮಣ್ಯ ಪ್ರಸಾದ್ ಭಾಗವಹಿಸಿದ್ದರು.
ಆರೋಗ್ಯ ಇಲಾಖೆಯ ಮೇಲ್ವಿಚಾರಕ ರಾದ ಮೇರಿ, ತೋಟಗಾರಿಕೆ ಇಲಾಖೆಯ ಪ್ರಭುಸ್ವಾಮಿ, ಕೃಷಿ ಇಲಾಖೆಯ ಸಿದ್ದಪ್ಪ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಮೇಲ್ವಿಚಾರಕರಾದ ಸೌಭಾಗ್ಯ, ಅರಣ್ಯ ಇಲಾಖಾಧಿಕಾರಿ ಶ್ರೀಧರ್, ಪಶು ಸಂಗೋಪನ ಇಲಾಖಾಧಿಕಾರಿ ಡಾ| ಸೂರಜ್ ಮಾಹಿತಿ ನೀಡಿದರು.
ಪಂಚಾಯತ್ ಉಪಾಧ್ಯಕ್ಷ ಉದಯ ಹೆಗ್ಡೆ, ಸದಸ್ಯರು, ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಗಳ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯ ಕರ್ತೆಯರು ಉಪಸ್ಥಿತರಿದ್ದರು.
ಸಿಬಂದಿ ಕಾಂತಾ ಅವರು ಆರ್ಥಿಕ ವರ್ಷದ ವರದಿ ಮಂಡಿಸಿದರು. ಕಾರ್ಯ ದರ್ಶಿ ಸುನಂದಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಿಬಂದಿ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ