ಮಕ್ಕಳಿಗೆ ಒಳಚರಂಡಿ ನೀರಿನ ಸಿಂಚನ!
Team Udayavani, Jul 13, 2018, 7:30 AM IST
ಉಡುಪಿ: ಅಂಬಲಪಾಡಿ ಶ್ರೀ ಮಹಾಕಾಳಿ ದೇವಳದ ಹಿಂಬಾಗ ರಸ್ತೆಯ ವಸತಿ ಸಂಕೀರ್ಣದ ಬಳಿ ಡ್ರೈನೇಜ್ ನೀರು ಹಲವು ದಿನಗಳಿಂದ ರಸ್ತೆಯ ಮೇಲೆ ಹರಿಯುತ್ತಿದೆ.
ಸಮಸ್ಯೆಯ ಬಗ್ಗೆ ಸ್ಥಳಿಯರು ನಗರಸಭೆಗೆ ಹಲವು ಬಾರಿ ಮೌಖೀಕ ದೂರು ನೀಡಿದರೂ ಸ್ಪಂದಿಸಿಲ್ಲ. ಇನ್ನಾದರೂ ಈ ಬಗ್ಗೆ ಗಮನಹರಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ. ಮುಖ್ಯರಸ್ತೆ ಇದಾದುದರಿಂದ ಸಾರ್ವಜನಿಕರು, ಶಾಲಾ ಮಕ್ಕಳು ಇದೇ ರಸ್ತೆಯಲ್ಲಿ ಸಂಚರಿಸುತ್ತಾರೆ. ಡ್ರೈನೇಜ್ ನೀರಿನ ದುರ್ವಾಸನೆಯಿಂದ ಸಾರ್ವಜನಿಕರು ಮೂಗು ಮುಚ್ಚಿಕೊಂಡು ನಡೆದಾಡಬೇಕಾದ ಪರಿಸ್ಥಿತಿ ಎದುರಾಗಿದೆ.
ವಾಹನಗಳು ಸಂಚರಿಸುವಾಗ ವಾಹನಗಳ ಚಕ್ರದಿಂದ ಶೌಚಾದಿ ಕ್ರಿಯೆಗಳ ಕೊಳಚೆ ನೀರು ಶಾಲಾ ಮಕ್ಕಳು ಧರಿಸಿದ ಸಮವಸ್ತ್ರಗಳ ಮೇಲೆ ಎರಚಿದ ಘಟನೆಗಳೂ ನಡೆದಿವೆ. ಈ ಕುರಿತು ನಗರಸಭೆ ಶೀಘ್ರವಾಗಿ ಸ್ಪಂದಿಸಿ ಡೈನೇಜ್ ದುರಸ್ತಿ ಕಾರ್ಯ ನಡೆಸಬೇಕೆಂದು ಸ್ಥಳೀಯರ ಪರವಾಗಿ ವಿಶು ಶೆಟ್ಟಿ ಅಂಬಲಪಾಡಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ