ವರುಣತೀರ್ಥ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ
Team Udayavani, Jun 4, 2019, 6:00 AM IST
ಕೋಟ: ಇತಿಹಾಸ ಪ್ರಸಿದ್ಧ ಕೋಟದ ವರುಣತೀರ್ಥ ಕೆರೆಯ ಹೂಳೆತ್ತುವ ಕಾರ್ಯ ಸ್ಥಳೀಯ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಜೂ.2ರಂದು ಆರಂಭಗೊಂಡಿತು.
ರಾಜಶೇಖರ ದೇವಸ್ಥಾನದ ಪಕ್ಕದಲ್ಲಿರುವ ಈ ಕೆರೆ ಹತ್ತಾರು ವರ್ಷದ ಹಿಂದೆ ಈ ಭಾಗದ ಅಂತರ್ಜಲ ವೃದ್ಧಿ ಮತ್ತು ನೂರಾರು ಎಕರೆ ಕೃಷಿ ಭೂಮಿಗೆ ನೀರುಣಿಸುವಲ್ಲಿ ಸಹಕಾರಿಯಾಗಿತ್ತು. ಇತ್ತೀಚಿನ ದಿನಗಳಲ್ಲಿ ಇದರಲ್ಲಿ ಹೂಳುತುಂಬಿ ನೀರಿನ ಸಂಗ್ರಹಣೆ ಕುಂಠಿತವಾಗಿತ್ತು. ಇದನ್ನು ಮನಗಂಡ ಸ್ಥಳೀಯರು ಕೆರೆಯ ಹೂಳೆತ್ತಲು ಮುಂದಾಗಿದ್ದಾರೆ.ಸ್ಥಳೀಯ ಅಮೃತೇಶ್ವರೀ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಆನಂದ ಸಿ.ಕುಂದರ್ ನೇತೃತ್ವ ವಹಿಸಿದ್ದರು.ಸ್ಥಳೀಯ ಸಂಘಟನೆಗಳ ಸ್ವಯಂಸೇವಕರು ಹಾಗೂ ಗ್ರಾಮಸ್ಥರು ಹಿಟಾಚಿ ಬಳಸಿ ಕರಸೇವೆಯ ಮೂಲಕ ಈ ಕಾರ್ಯ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ