ಮುನಿದ ಮುಂಗಾರು: ಕೃಷಿ ಚಟುವಟಿಕೆಗಳಿಗೆ ಹಿನ್ನಡೆ

ಹಲವೆಡೆ ಇನ್ನೂ ಸಿದ್ಧಗೊಂಡಿಲ್ಲ ನೇಜಿ; ನೇರ ಬಿತ್ತನೆಗೆ ಮೊರೆ

Team Udayavani, Jun 20, 2019, 5:35 AM IST

1906KOTA1EA

ಕೋಟ: ಈ ಬಾರಿ ಮುಂಗಾರು ಸಾಕಷ್ಟು ವಿಳಂಬವಾಗಿದೆ. ಅಲ್ಪ ಪ್ರಮಾಣದ ಮಳೆಯಾದರೂ ಕೃಷಿ ಚಟುವಟಿಕೆಗೆ ಪೂರಕ ವಾತಾವರಣ ಸೃಷ್ಟಿಯಾಗಿಲ್ಲ. ಮುಂಗಾರು ಕ್ಷೀಣವಾದ್ದರಿಂದ ನೀರಿನ ಪ್ರಮಾಣ ಏರಿಕೆಯಾಗಿಲ್ಲ, ಜತೆಗೆ ನೀರಿನ ಒರತೆಯೂ ಇಲ್ಲ.

ನೇಜಿ ಸಿದ್ಧಗೊಂಡಿಲ್ಲ:
ಗದ್ದೆ ಹದಗೊಳಿಸಲು ನೀರಿಲ್ಲ
ನೀರಿನಾಶ್ರಯವಿಲ್ಲದ ಕೃಷಿಭೂಮಿಗಳಲ್ಲಿ ಇನ್ನೂ ಕೂಡ ನೇಜಿ ಸಿದ್ಧವಾಗಿಲ್ಲ ಹಾಗೂ ಗದ್ದೆ ಹದಗೊಳಿಸಲು ನೀರಿಲ್ಲ. ಮಳೆ ವಿಳಂಬವಾದ್ದರಿಂದ ಮುಂದೆ ನೇಜಿ ಸಿದ್ಧಪಡಿಸಿ ನಾಟಿ ಮಾಡುವುದು ಕಷ್ಟವಾಗಿದೆ. ಹೀಗಾಗಿ ಮುಂದೆ ಮಳೆಯಾದಾಗ ದೊಡ್ಡ ಪ್ರಮಾಣದಲ್ಲಿ ನೇರ ಬಿತ್ತನೆ ನಡೆಸುವ ಸಿದ್ಧತೆಯಲ್ಲಿ ರೈತರಿದ್ದಾರೆ.

ನಾಟಿ ಮಾಡಿದವರಿಗೂ ಚಿಂತೆ
ಬೇರೆ ನೀರಿನ ಮೂಲಗಳನ್ನು ಬಳಸಿ ನೇಜಿ ಸಿದ್ಧಮಾಡಿಟ್ಟುಕೊಂಡವರು ಅಲ್ಪ ಪ್ರಮಾಣದ ಮಳೆಗೆ ನಾಟಿ ಮುಗಿಸಿದ್ದಾರೆ. ಆದರೆ ಮಳೆಯಾಗದಿರುವುದರಿಂದ ನಾಟಿ ಮಾಡಿದ ಗದ್ದೆ ಒಣಗುತ್ತಿದೆ.

ಭತ್ತ ಬೇಸಾಯ ಕುಸಿತ
ಕೃಷಿ ಇಲಾಖೆಯ ಅಂಕಿ ಅಂಶದ ಪ್ರಕಾರ ಉಡುಪಿ ಜಿಲ್ಲೆಯಲ್ಲಿ 2016ನೇ ಸಾಲಿನಲ್ಲಿ 45ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯುವ ಗುರಿ ಹಾಕಲಾಗಿದ್ದು 44 ಸಾವಿರ ಹೆಕ್ಟೇರ್‌ಗಿಂತ ಹೆಚ್ಚು ಬೇಸಾಯ ನಡೆದಿತ್ತು. 2018-19ನೇ ಸಾಲಿನಲ್ಲಿ ಮುಂಗಾರಿನಲ್ಲಿ 44 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಗುರಿಯಿದ್ದು, 35,487 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಸಲಾಗಿತ್ತು. ಪ್ರಸ್ತುತ 2019-20ರಲ್ಲಿ 36,000 ಹೆ. ಪ್ರದೇಶದಲ್ಲಿ ಗುರಿ ಹೊಂದಲಾಗಿದೆ. ಆದರೆ ಈಗಿನ ಪರಿಸ್ಥಿತಿ ನೋಡಿದರೆ ಗಣನೀಯ ಪ್ರಮಾಣದಲ್ಲಿ ಕುಸಿಯುವ ಸಾಧ್ಯತೆ ಇದೆ. 2016ನೇ ಸಾಲಿನಿಂದ 2019ನೇ ಸಾಲಿಗೆ ಭತ್ತದ ಬೆಳೆ ಸುಮಾರು 10ಸಾವಿರ ಹೆಕ್ಟೇರ್‌ನಷ್ಟು ಕುಸಿತವಾಗಿದೆ.

ನೇಜಿ ಬೆಳೆಸಿ ನಾಟಿ ಮಾಡಲು ದಿನವೆಲ್ಲಿದೆ?
ಈ ಹಿಂದೆ ಮೇ ಅಂತ್ಯದಲ್ಲೇ ಒಂದೆರಡು ಮಳೆಯಾಗಿ ಕೃಷಿಚಟುವಟಿಕೆ ಮಾಡುವಷ್ಟು ನೀರು ಲಭ್ಯವಾಗುತಿತ್ತು. ಮೇ ತಿಂಗಳಲ್ಲೇ ನೇಜಿ ಹಾಕಿ ಜೂನ್‌ 15-20ರೊಳಗೆ ನಾಟಿ ಮಾಡುತ್ತಿದ್ದೆವು. ಆದರೆ ಈ ಬಾರಿ ಜೂನ್‌ 20 ಕಳೆದರೂ ಅಗತ್ಯ ಪ್ರಮಾಣದ ಮಳೆಯಾಗಿಲ್ಲ ಹಾಗೂ ನೇಜಿ ಕೂಡ ಸಿದ್ಧಗೊಂಡಿಲ್ಲ. ಹೀಗಾಗಿ ಲಾಭ-ನಷ್ಟವನ್ನು ನೋಡದೆ ನೇರ ಬಿತ್ತನೆ ಮಾಡಲು ನಿಶ್ಚಯಿಸಿದ್ದೇವೆ.
-ಶಂಕರ್‌ ಶೆಟ್ಟಿ ಕೋಟ, ಹಿರಿಯ ಕೃಷಿಕ

ಸುಧಾರಿತ ವಿಧಾನದ ನೇರ ಬಿತ್ತನೆ ಸೂಕ್ತ
ಮುಂಗಾರು ದುರ್ಬಲವಾಗಿರುವುದರಿಂದ ನೇರ ಬಿತ್ತನೆ ಸೂಕ್ತ. ಆದರೆ ಈ ವಿಧಾನದಲ್ಲಿ ಕಳೆ ಹತೋಟಿಯ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಸುಧಾರಿತ ವಿಧಾನದ ಮೂಲಕ ಬಿತ್ತನೆ ಮಾಡುವುದರಿಂದ ಕಳೆಯನ್ನು ಸಂಪೂರ್ಣ ಹತೋಟಿ ಮಾಡಲು ಸಾಧ್ಯವಿದೆ. ಈ ಬಗ್ಗೆ ಕೃಷಿ ವಿಜ್ಞಾನ ಕೇಂದ್ರದಿಂದ ರೈತರಿಗೆ ಅಗತ್ಯ ಮಾಹಿತಿ ನೀಡಲಾಗುವುದು.
-ನವೀನ್‌, ಬೇಸಾಯ ತಜ್ಞರು
ಕೆ.ವಿ.ಕೆ. ಬ್ರಹ್ಮಾವರ

ನೇರ ಬಿತ್ತನೆಯ ವಿಧಾನಗಳು
ಸಾಂಪ್ರದಾಯಿಕ ಕೈ ಬಿತ್ತನೆ, ಡ್ರಮ್‌ಶೀಲ್ಡ್‌, ಕೂರಿಗೆ ವಿಧಾನ, ಸಾಲು ಬೀಜ ಹಾಗೂ ರೈತರೇ ತಯಾರಿಸಿದ ಯಂತ್ರಗಳು ಹಾಗೂ ಟಿಲ್ಲರ್‌, ಟ್ರ್ಯಾಕ್ಟರ್‌ಗೆ ಅಳವಡಿಸಿದ ಯಂತ್ರಗಳ ಮೂಲಕ ನೇರ ಬಿತ್ತನೆ ನಡೆಸಲಾಗುತ್ತದೆ. ಈ ವಿಧಾನ ಅತ್ಯಂತ ಸುಲಭವಾದರೂ ಕಳೆ ಹತೋಟಿಯ ಬಗ್ಗೆ ಹೆಚ್ಚಿನ ಒತ್ತು ನೀಡಬೇಕಾಗುತ್ತದೆ. ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಯಂತ್ರಧಾರೆ ಕೇಂದ್ರದಲ್ಲಿ ನೇರ ಬಿತ್ತನೆ ಯಂತ್ರಗಳು ಲಭ್ಯವಿವೆ.

– ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.