ಹದಗೆಟ್ಟ ಚರಂಡಿ: ಪಾದಚಾರಿಗಳಿಗೆ ಕೊಳಕು ನೀರಿನ ಸಿಂಚನ
Team Udayavani, Jul 3, 2018, 6:55 AM IST
ಉಡುಪಿ: ಉಡುಪಿ ನಗರದ ಹೆಬ್ಟಾಗಿಲು ಕಲ್ಯಾಣಪುರ ಸಂತೆಕಟ್ಟೆ ಎನ್ನುವುದು ಅಕ್ಷರಶಃ ಅವ್ಯವಸ್ಥೆಯ ಗೂಡಾಗಿದೆ. ಟ್ರಾಫಿಕ್ ಸಮಸ್ಯೆ ಒಂದು ಕಡೆಯಾದರೆ ಕಸದ ಸಮಸ್ಯೆ ಇನ್ನೊಂದು ಕಡೆ. ಇಲ್ಲಿನ ಜಂಕ್ಷನ್ನಿಂದ ಕಲ್ಯಾಣಪುರ ಮತ್ತು ಕೆಮ್ಮಣ್ಣು ಕಡೆ ತೆರಳುವ ಮಾರ್ಗದಲ್ಲಿ ಚರಂಡಿ ವ್ಯವಸ್ಥೆ ಹದಗೆಟ್ಟು ರಸ್ತೆ ಮೇಲೆ ನೀರು ಹರಿದು ಹೋಗುತ್ತಿದೆ.
ಇಲ್ಲಿನ ಸ್ಥಳೀಯ ಅಂಗಡಿ ಮಾಲಕರು ತಮ್ಮ ಅಂಗಡಿಯ ತ್ಯಾಜ್ಯಗಳನ್ನು ಚರಂಡಿಗೆ ಮತ್ತು ಮರದ ಸುತ್ತ ಹಾಕಿ ಕಸದ ತೊಟ್ಟಿಯಾಗಿ ಪರಿವರ್ತಿಸಲಾಗಿದೆ.ಇದು ಚರಂಡಿಯಲ್ಲಿ ಸಿಲುಕಿ ನೀರು ರಸ್ತೆ ಮೇಲೆ ಹರಿಯಲು ಪ್ರಮುಖ ಕಾರಣವಾಗಿದೆ. ಸಾವಿರಾರು ವಿದ್ಯಾರ್ಥಿಗಳು ಮತ್ತು ಪಾದಚಾರಿಗಳು ನಡೆದಾಡುವ ಈ ರಸ್ತೆಯಲ್ಲಿ ವಾಹನಗಳು ತೆರಳುವ ಸಂದರ್ಭ ರಸ್ತೆ ಮೇಲೆ ಹರಿಯುವ ಕೊಳಕು ನೀರು ಪಾದಚಾರಿಗಳ ಮೇಲೆ ರಾಚುತ್ತದೆ.
ತತ್ಕ್ಷಣ ನಗರಸಭೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ತ್ಯಾಜ್ಯ ಸಮಸ್ಯೆಗೆ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ