ಅಪಾಯ ಆಹ್ವಾನಿಸುತ್ತಿರುವ ಒಣ ಮರಗಳು
ರಸ್ತೆ ಬದಿಯಲ್ಲೇ ಇರುವ ವಿದ್ಯುತ್ ತಂತಿ
Team Udayavani, Aug 23, 2019, 5:35 AM IST
ಪಳ್ಳಿ: ನಿಟ್ಟೆ ಗ್ರಾ.ಪಂ. ವ್ಯಾಪ್ತಿಯ ಕಾರ್ಕಳ ಪಡುಬಿದ್ರಿ ರಾಜ್ಯ ಹೆದ್ದಾರಿಯ ನಿಟ್ಟೆ ಕಾಲೇಜು ಬಳಿಯಿಂದ ದೂಪದಕಟ್ಟೆ ವರೆಗೆ ರಸ್ತೆ ಬದಿ ಒಣಗಿದ ಮರಗಳು ಅಪಾಯಕಾರಿ ಸ್ಥಿತಿಯಲ್ಲಿವೆ.
ರಸ್ತೆ ಬದಿಯಲ್ಲೇ ವಿದ್ಯುತ್ ತಂತಿಗಳೂ ಸಾಗಿದ್ದು ಜೋರಾದ ಗಾಳಿಗೆ ಒಣಗಿದ ಮರಗಳು ತುಂಡಾದಲ್ಲಿ ಭಾರೀ ಪ್ರಮಾಣದ ನಷ್ಟ ಸಂಭವಿಸಲಿದೆ. ಈ ರಸ್ತೆಯು ಕಾರ್ಕಳದಿಂದ ಪಡುಬಿದ್ರಿ ಮೂಲಕವಾಗಿ ಮಂಗಳೂರು ಸಂಚರಿಸಲು ಮುಖ್ಯ ರಸ್ತೆ. ನಿರಂತರ ವಾಗಿ ಸಾವಿರಾರು ವಾಹನಗಳು ಈ ಮಾರ್ಗವಾಗಿಯೇ ಸಂಚರಿಸುತ್ತವೆ.
ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಗಳು ಎಚ್ಚೆತ್ತು ತೆರವು ಕಾರ್ಯ ಕೈಗೊಳ್ಳದಿದ್ದಲ್ಲಿ ಅಪಾರ ಪ್ರಮಾಣದ ನಷ್ಟದ ಜತೆಗೆ ಜೀವಹಾನಿ ಸಂಭವಿಸ ಬಹುದು ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.
ತೆರವು ಕಾರ್ಯ ನಡೆಸಿ
ಅಪಾಯಕಾರಿ ಮರಗಳು ರಸ್ತೆಯಂಚಿನಲ್ಲಿದ್ದು ಯಾವುದೇ ಕ್ಷಣದಲ್ಲಿ ಉರುಳಿ ಬೀಳುವ ಹಂತದಲ್ಲಿವೆ. ವಿದ್ಯುತ್ ತಂತಿಗಳ ಮೇಲೆ ಉರುಳಿ ಬಿದ್ದು ಭಾರೀ ನಷ್ಟ ಸಂಭವಿಸುವ ಮುನ್ನ ಸಂಬಂಧ ಪಟ್ಟ ಇಲಾಖೆ ಎಚ್ಚೆತ್ತು ಇವುಗಳ ತೆರವು ಕಾರ್ಯ ನಡೆಸಬೇಕು. -ನಿತೀನ್ ಸಾಲ್ಯಾನ್, ನಿಟ್ಟೆ ಗ್ರಾ.ಪಂ. ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ