ಅಂಗವಿಕಲ ಯುವತಿಯನ್ನು ವರಿಸಿದ ದುಬೈ ಉದ್ಯೋಗಿ
Team Udayavani, Nov 24, 2020, 5:31 AM IST
ಉಡುಪಿ: ಉಡುಪಿಯ ಕರಂಬಳ್ಳಿ ಗ್ರಾಮದ ನಿವಾಸಿಯಾಗಿರುವ ಸುನೀತಾ ಅವರಿಗೆ ಪೋಲಿಯೋ ಎಂಬ ಮಹಾಮಾರಿ ಅವರ ಎರಡೂ ಕಾಲುಗಳನ್ನು ಕಿತ್ತುಕೊಂಡಿತ್ತು. ತನಗೆ ಮದುವೆ ಬರೀ ಕನಸು ಅಂತ ಕಣ್ಣೀರಲ್ಲೇ ದಿನಕಳೆಯುತ್ತಿದ್ದ ಆಕೆಯನ್ನು ದುಬೈನ ತೈಲ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಮಂಗಳೂರು ಮೂಲದ ಸಂದೀಪ್ ಎಂಬ ಯುವಕ ವರಿಸುವ ಮೂಲಕ ಆಕೆಯ ಜೀವನ ಪಯಣಕ್ಕೆ ಸಾಥ್ ನೀಡಿದ್ದಾನೆ.
ಪಿಯುಸಿವರೆಗೆ ಓದಿಕೊಂಡು ತಂದೆ ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದ ಸುನೀತಾ, ತನ್ನ ಕಾಲಿನಂತೆ ಬದುಕು ಕೂಡಾ ನಿರಾಧಾರವಾಗುತ್ತೆ ಎಂದು ಖನ್ನತೆಗೆ ಜಾರಿದ್ದಳು. ಆದರೆ ಕಾಲು ಕಿತ್ತುಕೊಂಡು ಕಷ್ಟ ಕೊಟ್ಟ ದೇವರು ಮದುವೆಯ ವಿಚಾರದಲ್ಲಿ ಈಕೆಯ ಸೌಭಾಗ್ಯ ಕರುಣಿಸಿದ್ದಾನೆ. ದುಬೈನ ಆಯಿಲ್ ಕಂಪೆನಿಯಲ್ಲಿ ಉದ್ಯೋಗ ಮಾಡುತ್ತಿರುವ ಮಂಗಳೂರಿನ ನಿವಾಸಿ ಸಂದೀಪ್ ತಾನೇ ಮುಂದೆ ಬಂದು ಈಕೆಯ ಜೀವನ ಪಯಣಕ್ಕೆ ಆಧಾರವಾಗಲು ನಿರ್ಧರಿಸಿದ್ದಾರೆ.
ದೇವಸ್ಥಾನದಲ್ಲಿ ವಿವಾಹ
ಮನೆಯವರ ಒಪ್ಪಿಗೆಯಂತೆ ಸೋಮವಾರ ಕರಂಬಳ್ಳಿಯ ದೇವಸ್ಥಾನದಲ್ಲಿ ಇವರ ವಿವಾಹ ನೆರವೇರಿತು. ಇಂತಹ ಹುಡುಗಿಗೆ ಬಾಳು ನೀಡಬೇಕೆಂದು ಮೊದಲೇ ನಿರ್ಧರಿಸಿದ್ದ ಸಂದೀಪ್, ಸಂಬಂಧಿಕರ ಮೂಲಕ ಈ ಯುವತಿಯ ಬಗ್ಗೆ ವಿಚಾರಿಸಿ ತಾನೇ ಮುಂದೆ ಬಂದು ವಿವಾಹವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ