Kollur ತಾಯಿಯ ಸಾವಿನಿಂದ ಮನನೊಂದು ಪುತ್ರ ವಿಷ ಸೇವಿಸಿ ಆತ್ಮಹತ್ಯೆ
Team Udayavani, Oct 28, 2023, 9:54 PM IST
ಕೊಲ್ಲೂರು: ಮೃತಪಟ್ಟ ತಾಯಿಯ ಅಂತ್ಯಕ್ರಿಯೆ ಮುಗಿಸಿ ಮಾನಸಿಕವಾಗಿ ನೊಂದಿದ್ದ ಅವರ ಪುತ್ರ ವಿಷಪ್ರಾಶನ ಸೇವಿಸಿ ಸಾವನ್ನಪ್ಪಿದ ಘಟನೆ ಕೊಲ್ಲೂರಿನಲ್ಲಿ ನಡೆದಿದೆ.
ಪುತ್ರ ವಿಶ್ವನಾಥ (37) ಆತ್ಮಹತ್ಯೆ ಮಾಡಿಕೊಂಡವರು. ಗಿರಿಜಮ್ಮ (63) ಅವರು ಅ. 26ರಂದು ಜೀವನದಲ್ಲಿ ಜುಗುಪ್ಸೆಗೊಂಡು ಕೀಟನಾಶಕ ಸೇವಿಸಿದ್ದರು. ಅಸ್ವಸ್ಥಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದರು. ಮೃತರ ಅಂತ್ಯಸಂಸ್ಕಾರ ಮುಗಿಸಿದ ಬಳಿಕ ಮನೆಯಲ್ಲಿ ಪತಿ ಮತ್ತು ಪುತ್ರ ಮಲಗಿದ್ದರು. ಬೆಳಗ್ಗೆ ಪುತ್ರನ ಬಾಯಿಯಲ್ಲಿ ನೊರೆ ಬರುತ್ತಿರುವುದನ್ನು ಗಮನಿಸಿದ ಮನೆಯವರು ಸಂಶಯದಿಂದ ಆಸ್ಪತ್ರೆಗೆ ಕೊಂಡೊಯ್ದು ಪರೀಕ್ಷಿಸಿದಾಗ ವೈದ್ಯರು ಅವರು ದಾರಿ ಮಧ್ಯೆ ಮೃತಪಟ್ಟಿರುವುದಾಗಿ ಖಚಿತಪಡಿಸಿದರು.
ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.