ಹದಗೆಟ್ಟ ಕಾವ್ರಾಡಿ-ವಾಲ್ತೂರು-ಅಂಪಾರು ರಸ್ತೆ

10 ವರ್ಷಗಳ ಹಿಂದೆ ಡಾಮರು ಕಾಮಗಾರಿ ; ಮರು ಡಾಮರೀಕರಣಕ್ಕೆ ಊರವರ ಆಗ್ರಹ

Team Udayavani, Jun 4, 2019, 6:00 AM IST

0306KDPP1

ರಸ್ತೆಯ ಮಧ್ಯೆಯೇ ಕಾಣಿಸಿಕೊಂಡಿರುವ ಹೊಂಡ.

ಕಾವ್ರಾಡಿ: ಕಂಡ್ಲೂರಿನಿಂದ ಕಾವ್ರಾಡಿ ಮೂಲಕವಾಗಿ ವಾಲ್ತೂರು, ಅಂಪಾರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಸುಮಾರು 6 ಕಿ.ಮೀ. ದೂರದ ರಸ್ತೆಯ ಹೆಚ್ಚಿನ ಕಡೆಗಳಲ್ಲಿ ಹೊಂಡ – ಗುಂಡಿಗಳೇ ಕಾಣುತ್ತಿವೆ.

ವಾಲ್ತೂರಿನಿಂದ ಕಂಡ್ಲೂರು ಅಥವಾ ಅಂಪಾರಿಗೆ ತೆರಳಲು ಇರುವ ಪ್ರಮುಖ ರಸ್ತೆ ಇದಾಗಿದ್ದು, ನೂರಾರು ಮಂದಿ ಇದೇ ಮಾರ್ಗವನ್ನು ಆಶ್ರಯಿಸಿದ್ದಾರೆ. 6 ಕಿ.ಮೀ. ದೂರದ ರಸ್ತೆಯಲ್ಲಿ ಸರಿ ಇರುವುದಕ್ಕಿಂತ ಹದಗೆಟ್ಟ ಅಥವಾ ಹೊಂಡ-ಗುಂಡಿಗಳಿರುವ ಭಾಗವೇ ಹೆಚ್ಚಿರುವುದು ಈ ರಸ್ತೆಯ ದುಃಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.

ಡಾಮರೀಕರಣವಾಗಿ 10 ವರ್ಷ
ಸುಮಾರು 25 – 30 ವರ್ಷಗಳ ಹಿಂದೆ ಮಣ್ಣಿನ ರಸ್ತೆಯಾಗಿದ್ದು, 10 ವರ್ಷಗಳ ಹಿಂದೆ ಈ ರಸ್ತೆಗೆ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ಡಾಮರೀಕರಣ ವಾಗಿದೆ. ಆ ಬಳಿಕ ಇಲ್ಲಿಯವರೆಗೆ ಮರು ಡಾಮರೀಕರಣವೇ ಆಗಿಲ್ಲ. ಕನಿಷ್ಠ ಹೊಂಡ – ಗುಂಡಿ ಗಳಿಗೆ ತೇಪೆ ಹಾಕುವ ಕಾರ್ಯವೂ ಕೆಲವು ವರ್ಷಗಳಿಂದ ನಡೆದೇ ಇಲ್ಲ. ಕಳೆದ ವರ್ಷ ನೆಪ ಮಾತ್ರಕ್ಕೆ ಒಂದಷ್ಟು ದೂರ ಮಾತ್ರ ತೇಪೆ ಹಾಕಲಾಗಿತ್ತು.

ಬಸ್‌ ಸಂಚಾರ
ಇನ್ನು ಇದೇ ಮಾರ್ಗವಾಗಿ ಕೊಲ್ಲೂರಿನಿಂದ ಕುಂದಾಪುರಕ್ಕೆ ಹಾಗೂ ಕುಂದಾಪುರದಿಂದ ಕಂಡ್ಲೂರು ಮಾರ್ಗವಾಗಿ ಕೊಲ್ಲೂರಿಗೆ ದಿನಕ್ಕೆ 2 ಬಸ್‌ 4-5 ಬಾರಿ ಸಂಚರಿಸುತ್ತಿದೆ. ಆದರೂ ಈ ರಸ್ತೆಯ ದುರಸ್ತಿ ಬಗ್ಗೆ ಸಂಬಂಧಪಟ್ಟ ಯಾರೂ ಕೂಡ ಮುಂದಾಗಿಲ್ಲ. ರಸ್ತೆ ಹದಗೆಟ್ಟಿರುವುದು ಮಾತ್ರವಲ್ಲ, ಕಿರಿದಾದ ರಸ್ತೆಯಿಂದ ಬಸ್‌ ಸಹಿತ ದೊಡ್ಡ ವಾಹನಗಳು ಬಂದರೆ ಬೇರೆ ವಾಹನಗಳು ಸಂಚರಿಸುವುದೇ ಅಸಾಧ್ಯ ಎನ್ನುವಂತಾಗಿದೆ.

ಈ ಬಾರಿಯಾದರೂ ಈ ರಸ್ತೆಯಲ್ಲಿರುವ ಹೊಂಡ – ಗುಂಡಿಗಳಿಗೆ ತೇಪೆಯಾದರೂ ಹಾಕಲಿ. ಅನೇಕ ವರ್ಷಗಳಿಂದ ಹೀಗೆ ಇದೆ. ಮಳೆಗಾಲದಲ್ಲೂ ಇದೇ ರೀತಿಯಾದರೆ ವಾಹನ ಸಂಚಾರ ತುಂಬಾ ಕಷ್ಟವಿದೆ ಎನ್ನುವ ಅಭಿಪ್ರಾಯ ಕಾವ್ರಾಡಿಯ ರಾಮ ಅವರದು.

ಶೀಘ್ರ ದುರಸ್ತಿ ಮಾಡಲಿ
ಡಾಮರೀಕರಣವಾಗಿ ಸುಮಾರು 10 ವರ್ಷ ಆಗಿರಬಹುದು. ಪ್ಯಾಚ್‌ವರ್ಕ್‌ ಅಂತೂ ಅನೇಕ ವರ್ಷಗಳಿಂದ ಆಗಿಯೇ ಇಲ್ಲ. ಗುಂಡಿಗಳಿರುವ, ಡಾಮರು ಕಿತ್ತು ಹೋದ ಈ ರಸ್ತೆಯಲ್ಲಿ ಸಂಚರಿಸುವುದು ಕಷ್ಟ. ಅದರಲ್ಲೂ ದ್ವಿಚಕ್ರ ವಾಹನ ಸವಾರರಂತೂ ಹರಸಾಹಸ ಪಡಬೇಕಾಗಿದೆ. ಆದಷ್ಟು ಬೇಗ ದುರಸ್ತಿ ಮಾಡಲು ಸಂಬಂಧಪಟ್ಟವರು ಮುಂದಾಗಲಿ. ಕನಿಷ್ಠ ಈ ಬಾರಿ ಮಳೆಗಾಲಕ್ಕೆ ಮುನ್ನ ತೇಪೆಯಾದರೂ ಹಾಕಲಿ.
– ಸುದೇಶ್‌ ಕಾವ್ರಾಡಿ, ಸ್ಥಳೀಯರು

ತೇಪೆ ಕಾರ್ಯಕ್ಕೆ ಪ್ರಯತ್ನ
ಇದು ರಸ್ತೆ ಸಂಪೂರ್ಣ ಹಾಳಾಗಿರುವುದರಿಂದ ದುರಸ್ತಿ ಮಾಡಬೇಕಾದರೆ ಹೆಚ್ಚುವರಿ ಅನುದಾನದ ಅಗತ್ಯವಿದೆ. ಈ ಬಾರಿ ತೇಪೆ ಹಾಕುವ ಕಾರ್ಯ ಮಾಡುವ ಕುರಿತಂತೆ ಪ್ರಯತ್ನಿಸಲಾಗುವುದು. ಮುಂದಿನ ಬಾರಿ ಜಿ.ಪಂ.ನಿಂದ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಸಲ್ಲಿಸಿ, ಮರು ಡಾಮರೀಕರಣಕ್ಕೆ ಎಲ್ಲ ರೀತಿಯಿಂದ ಪ್ರಯತ್ನಿಸುತ್ತೇನೆ.
-ಜ್ಯೋತಿ ಕಾವ್ರಾಡಿ, ಜಿ.ಪಂ. ಸದಸ್ಯರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.